<p><strong>ಅಬುಧಾಬಿ:</strong> ಏಷ್ಯಾ ಕಪ್ ಟೂರ್ನಿಯಲ್ಲಿ ಭಾರತ ಮತ್ತು ಒಮಾನ್ ನಡುವಿನ ಪಂದ್ಯದ ವೇಳೆ ಗಾಯಗೊಂಡಿದ್ದ ಆಲ್ರೌಂಡರ್ ಅಕ್ಷರ್ ಪಟೇಲ್ ಚೇತರಿಸಿಕೊಂಡಿದ್ದಾರೆ ಎಂದು ಭಾರತ ಕ್ರಿಕೆಟ್ ತಂಡದ ಫಿಲ್ಡಿಂಗ್ ಕೋಚ್ ಟಿ. ದಿಲೀಪ್ ತಿಳಿಸಿದ್ದಾರೆ ಎಂದು 'ಕ್ರಿಕ್ಬಝ್' ವರದಿ ಮಾಡಿದೆ.</p><p>ಒಮಾನ್ ವಿರುದ್ದದ ಲೀಗ್ ಪಂದ್ಯದ ವೇಳೆ ಕ್ಷೇತ್ರರಕ್ಷಣೆ ಮಾಡುವಾಗ ಅಕ್ಷರ್ ಪಟೇಲ್ ಗಾಯಗೊಂಡಿದ್ದರು. </p><p>ಪಂದ್ಯದ 15ನೇ ಓವರ್ನಲ್ಲಿ ಬ್ಯಾಟರ್ ಹಮ್ಮದ್ ಮಿರ್ಜಾ ಅವರು ಮಿಡ್ ಆಫ್ ಕಡೆಗೆ ಬಾರಿಸಿದ ಚೆಂಡನ್ನು ಕ್ಯಾಚ್ ಪಡೆಯುವ ಪ್ರಯತ್ನ ಮಾಡಿದರು. ಕೈ ತಪ್ಪಿದ ಚೆಂಡನ್ನು ಮತ್ತೆ ಹಿಡಿಯಲು ಪ್ರಯತ್ನಿಸಿದಾಗ, ತಲೆಗೆ ಗಾಯವಾಗಿತ್ತು. ತಕ್ಷಣವೇ ಅವರು ಮೈದಾನದಿಂದ ಹೊರ ನಡೆದಿದ್ದರು.</p><p>ಒಮಾನ್ ವಿರುದ್ಧ 5ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ ಅಕ್ಷರ್, ಕೇವಲ 13 ಎಸೆತಗಳಲ್ಲಿ 26 ರನ್ ಗಳಿಸಿದ್ದರು. ಗಾಯಗೊಂಡ ವೇಳೆ ಕೇವಲ 1 ಓವರ್ ಬೌಲಿಂಗ್ ಮಾಡಿದ್ದ ಅವರು ನಂತರ ಮತ್ತೆ ಮೈದಾನಕ್ಕೆ ಇಳಿಯಲಿಲ್ಲ. </p><p>ಒಮಾನ್ ವಿರುದ್ದದ ಪಂದ್ಯದಲ್ಲಿ ಭಾರತವು 21 ರನ್ಗಳ ಗೆಲುವು ದಾಖಲಿಸಿದೆ. ಭಾನುವಾರ (ಸೆ.21) ಸೂಪರ್–4ನಲ್ಲಿ ಸೂರ್ಯಕುಮಾರ್ ಯಾದವ್ ಪಡೆಯು ಪಾಕಿಸ್ತಾನ ವಿರುದ್ದ ದುಬೈನಲ್ಲಿ ಸೆಣಸಲಿದೆ.</p>.Asia Cup: 8 ವಿಕೆಟ್ ಕಳೆದುಕೊಂಡಾಗಲು SKY ಬ್ಯಾಟಿಂಗ್ ಬಾರದಿರಲು ಕಾರಣವೇನು?.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಬುಧಾಬಿ:</strong> ಏಷ್ಯಾ ಕಪ್ ಟೂರ್ನಿಯಲ್ಲಿ ಭಾರತ ಮತ್ತು ಒಮಾನ್ ನಡುವಿನ ಪಂದ್ಯದ ವೇಳೆ ಗಾಯಗೊಂಡಿದ್ದ ಆಲ್ರೌಂಡರ್ ಅಕ್ಷರ್ ಪಟೇಲ್ ಚೇತರಿಸಿಕೊಂಡಿದ್ದಾರೆ ಎಂದು ಭಾರತ ಕ್ರಿಕೆಟ್ ತಂಡದ ಫಿಲ್ಡಿಂಗ್ ಕೋಚ್ ಟಿ. ದಿಲೀಪ್ ತಿಳಿಸಿದ್ದಾರೆ ಎಂದು 'ಕ್ರಿಕ್ಬಝ್' ವರದಿ ಮಾಡಿದೆ.</p><p>ಒಮಾನ್ ವಿರುದ್ದದ ಲೀಗ್ ಪಂದ್ಯದ ವೇಳೆ ಕ್ಷೇತ್ರರಕ್ಷಣೆ ಮಾಡುವಾಗ ಅಕ್ಷರ್ ಪಟೇಲ್ ಗಾಯಗೊಂಡಿದ್ದರು. </p><p>ಪಂದ್ಯದ 15ನೇ ಓವರ್ನಲ್ಲಿ ಬ್ಯಾಟರ್ ಹಮ್ಮದ್ ಮಿರ್ಜಾ ಅವರು ಮಿಡ್ ಆಫ್ ಕಡೆಗೆ ಬಾರಿಸಿದ ಚೆಂಡನ್ನು ಕ್ಯಾಚ್ ಪಡೆಯುವ ಪ್ರಯತ್ನ ಮಾಡಿದರು. ಕೈ ತಪ್ಪಿದ ಚೆಂಡನ್ನು ಮತ್ತೆ ಹಿಡಿಯಲು ಪ್ರಯತ್ನಿಸಿದಾಗ, ತಲೆಗೆ ಗಾಯವಾಗಿತ್ತು. ತಕ್ಷಣವೇ ಅವರು ಮೈದಾನದಿಂದ ಹೊರ ನಡೆದಿದ್ದರು.</p><p>ಒಮಾನ್ ವಿರುದ್ಧ 5ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ ಅಕ್ಷರ್, ಕೇವಲ 13 ಎಸೆತಗಳಲ್ಲಿ 26 ರನ್ ಗಳಿಸಿದ್ದರು. ಗಾಯಗೊಂಡ ವೇಳೆ ಕೇವಲ 1 ಓವರ್ ಬೌಲಿಂಗ್ ಮಾಡಿದ್ದ ಅವರು ನಂತರ ಮತ್ತೆ ಮೈದಾನಕ್ಕೆ ಇಳಿಯಲಿಲ್ಲ. </p><p>ಒಮಾನ್ ವಿರುದ್ದದ ಪಂದ್ಯದಲ್ಲಿ ಭಾರತವು 21 ರನ್ಗಳ ಗೆಲುವು ದಾಖಲಿಸಿದೆ. ಭಾನುವಾರ (ಸೆ.21) ಸೂಪರ್–4ನಲ್ಲಿ ಸೂರ್ಯಕುಮಾರ್ ಯಾದವ್ ಪಡೆಯು ಪಾಕಿಸ್ತಾನ ವಿರುದ್ದ ದುಬೈನಲ್ಲಿ ಸೆಣಸಲಿದೆ.</p>.Asia Cup: 8 ವಿಕೆಟ್ ಕಳೆದುಕೊಂಡಾಗಲು SKY ಬ್ಯಾಟಿಂಗ್ ಬಾರದಿರಲು ಕಾರಣವೇನು?.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>