<p><strong>ದುಬೈ:</strong> ರಾಜಕೀಯ ಸ್ವರೂಪದ್ದೆನಿಸುವ ಯಾವುದೇ ಹೇಳಿಕೆ ನೀಡಬಾರದು ಎಂದು ಭಾರತ ಟಿ20 ತಂಡದ ನಾಯಕ ಸೂರ್ಯಕುಮಾರ್ ಯಾದವ್ ಅವರಿಗೆ ಐಸಿಸಿ ಮ್ಯಾಚ್ ರೆಫ್ರಿ ರಿಚಿ ರಿಚರ್ಡ್ಸನ್ ಅವರು ಸೂಚಿಸಿದ್ದಾರೆ.</p><p>ಪಾಕಿಸ್ತಾನ ಕ್ರಿಕೆಟ್ ಮಂಡಳಿ ಸಲ್ಲಿಸಿದ ದೂರಿನ ವಿಚಾರಣೆ ನಡೆದು ಅಂತರರಾಷ್ಟ್ರೀಯ ಕ್ರಿಕೆಟ್ ಸಮಿತಿ (ಐಸಿಸಿ) ಈ ಸೂಚನೆ ನೀಡಿದೆ. </p><p>ಪಾಕಿಸ್ತಾನ ವಿರುದ್ಧ ಪಂದ್ಯದಲ್ಲಿ ಹಸ್ತಲಾಘವಕ್ಕೆ ನಿರಾಕರಿಸಿದ ಸೂರ್ಯ, ಸೆ. 14ರ ಪಂದ್ಯದ ಗೆಲುವನ್ನು ಅಪರೇಷನ್ ಸಿಂಧೂರ್ ಕಾರ್ಯಾಚರಣೆಯಲ್ಲಿ ತೊಡಗಿದ ಸೇನಾಪಡೆಗೆ ಅರ್ಪಿಸಿದ್ದರು. ಪಹಲ್ಗಾಮ್ ಹತ್ಯಾಕಾಂಡದ ಸಂತ್ರಸ್ತರ ಜೊತೆ ತಂಡ ನಿಲ್ಲುವುದಾಗಿಯೂ ಹೇಳಿಕೆ ನೀಡಿದ್ದರು. ಈ ಹಿನ್ನೆಯಲ್ಲಿ ಪಾಕಿಸ್ತಾನ ಐಸಿಸಿಗೆ ದೂರು ನೀಡಿತ್ತು. ಸೂರ್ಯ ಜೊತೆ ಬಿಸಿಸಿಐ ಸಿಒಒ ಮತ್ತು ಕ್ರಿಕೆಟ್ ಆಪರೇಷನ್ಸ್ ಮ್ಯಾನೇಜರ್ ಸಹ ವಿಚಾರಣೆ ವೇಳೆ ಹಾಜರಿದ್ದರು.</p><p><strong>ರವೂಫ್, ಫರ್ಹಾನ್ ವಿರುದ್ಧ ದೂರು</strong></p><p>ದುಬೈ: ಭಾನುವಾರ ಸೂಪರ್ ಫೋರ್ ಹಂತದ ಪಂದ್ಯದಲ್ಲಿ ಪ್ರಚೋದನಾತ್ಮಕವಾಗಿ ವರ್ತಿಸಿದ ಪಾಕಿಸ್ತಾನ ತಂಡದ ಆಟಗಾರರಾದ ಹ್ಯಾರಿಸ್ ರವೂಫ್ ಮತ್ತು ಸಾಹಿಬ್ಝಾದಾ ಫರ್ಹಾನ್ ವಿರುದ್ಧ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ ಐಸಿಸಿಗೆ ದೂರು ಸಲ್ಲಿಸಿದೆ.</p><p>ಬಿಸಿಸಿಐ ಬುಧವಾರ ಇ ಮೇಲ್ ಮುಖಾಂತರ ದೂರು ಸಲ್ಲಿಸಿರುವುದಾಗಿ ಗೊತ್ತಾಗಿದೆ. ಫರ್ಹಾನ್ ಮತ್ತು ರವೂಫ್ ಅವರು ಆರೋಪಗಳನ್ನು ಲಿಖಿತವಾಗಿ ನಿರಾಕರಿಸಿದರೆ, ಐಸಿಸಿ ವಿಚಾರಣೆ ನಡೆಸುವ ನಿರೀಕ್ಷೆಯಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದುಬೈ:</strong> ರಾಜಕೀಯ ಸ್ವರೂಪದ್ದೆನಿಸುವ ಯಾವುದೇ ಹೇಳಿಕೆ ನೀಡಬಾರದು ಎಂದು ಭಾರತ ಟಿ20 ತಂಡದ ನಾಯಕ ಸೂರ್ಯಕುಮಾರ್ ಯಾದವ್ ಅವರಿಗೆ ಐಸಿಸಿ ಮ್ಯಾಚ್ ರೆಫ್ರಿ ರಿಚಿ ರಿಚರ್ಡ್ಸನ್ ಅವರು ಸೂಚಿಸಿದ್ದಾರೆ.</p><p>ಪಾಕಿಸ್ತಾನ ಕ್ರಿಕೆಟ್ ಮಂಡಳಿ ಸಲ್ಲಿಸಿದ ದೂರಿನ ವಿಚಾರಣೆ ನಡೆದು ಅಂತರರಾಷ್ಟ್ರೀಯ ಕ್ರಿಕೆಟ್ ಸಮಿತಿ (ಐಸಿಸಿ) ಈ ಸೂಚನೆ ನೀಡಿದೆ. </p><p>ಪಾಕಿಸ್ತಾನ ವಿರುದ್ಧ ಪಂದ್ಯದಲ್ಲಿ ಹಸ್ತಲಾಘವಕ್ಕೆ ನಿರಾಕರಿಸಿದ ಸೂರ್ಯ, ಸೆ. 14ರ ಪಂದ್ಯದ ಗೆಲುವನ್ನು ಅಪರೇಷನ್ ಸಿಂಧೂರ್ ಕಾರ್ಯಾಚರಣೆಯಲ್ಲಿ ತೊಡಗಿದ ಸೇನಾಪಡೆಗೆ ಅರ್ಪಿಸಿದ್ದರು. ಪಹಲ್ಗಾಮ್ ಹತ್ಯಾಕಾಂಡದ ಸಂತ್ರಸ್ತರ ಜೊತೆ ತಂಡ ನಿಲ್ಲುವುದಾಗಿಯೂ ಹೇಳಿಕೆ ನೀಡಿದ್ದರು. ಈ ಹಿನ್ನೆಯಲ್ಲಿ ಪಾಕಿಸ್ತಾನ ಐಸಿಸಿಗೆ ದೂರು ನೀಡಿತ್ತು. ಸೂರ್ಯ ಜೊತೆ ಬಿಸಿಸಿಐ ಸಿಒಒ ಮತ್ತು ಕ್ರಿಕೆಟ್ ಆಪರೇಷನ್ಸ್ ಮ್ಯಾನೇಜರ್ ಸಹ ವಿಚಾರಣೆ ವೇಳೆ ಹಾಜರಿದ್ದರು.</p><p><strong>ರವೂಫ್, ಫರ್ಹಾನ್ ವಿರುದ್ಧ ದೂರು</strong></p><p>ದುಬೈ: ಭಾನುವಾರ ಸೂಪರ್ ಫೋರ್ ಹಂತದ ಪಂದ್ಯದಲ್ಲಿ ಪ್ರಚೋದನಾತ್ಮಕವಾಗಿ ವರ್ತಿಸಿದ ಪಾಕಿಸ್ತಾನ ತಂಡದ ಆಟಗಾರರಾದ ಹ್ಯಾರಿಸ್ ರವೂಫ್ ಮತ್ತು ಸಾಹಿಬ್ಝಾದಾ ಫರ್ಹಾನ್ ವಿರುದ್ಧ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ ಐಸಿಸಿಗೆ ದೂರು ಸಲ್ಲಿಸಿದೆ.</p><p>ಬಿಸಿಸಿಐ ಬುಧವಾರ ಇ ಮೇಲ್ ಮುಖಾಂತರ ದೂರು ಸಲ್ಲಿಸಿರುವುದಾಗಿ ಗೊತ್ತಾಗಿದೆ. ಫರ್ಹಾನ್ ಮತ್ತು ರವೂಫ್ ಅವರು ಆರೋಪಗಳನ್ನು ಲಿಖಿತವಾಗಿ ನಿರಾಕರಿಸಿದರೆ, ಐಸಿಸಿ ವಿಚಾರಣೆ ನಡೆಸುವ ನಿರೀಕ್ಷೆಯಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>