<p><strong>ಅಬುಧಾಬಿ</strong>: ಇಲ್ಲಿ ನಡೆಯುತ್ತಿರುವ ಏಷ್ಯಾಕಪ್ ಟಿ20 ಕ್ರಿಕೆಟ್ ಟೂರ್ನಿಯ ಎ ಗುಂಪಿನ ಒಮನ್ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದಿರುವ ಭಾರತ ತಂಡದ ನಾಯಕ ಸೂರ್ಯ ಕುಮಾರ್ ಯಾದವ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.</p><p>ಎರಡೂ ತಂಡಗಳು ಇಬ್ಬರು ಆಟಗಾರರನ್ನು ಬದಲಾವಣೆ ಮಾಡಿವೆ. ಹರ್ಷಿತ್ ರಾಣಾ ಅವರನ್ನು ಸೂರ್ಯ ಕಣಕ್ಕಿಳಿಸಿದ್ದಾರೆ.</p><p>ಸೂರ್ಯಕುಮಾರ್ ಯಾದವ್ ನಾಯಕತ್ವದ ಭಾರತ ತಂಡವು ಏಷ್ಯಾ ಕಪ್ ಟಿ20 ಕ್ರಿಕೆಟ್ ಟೂರ್ನಿಯ ಸೂಪರ್ ಫೋರ್ ಹಂತ ಪ್ರವೇಶಿಸಿ ಆಗಿದೆ. ಹೀಗಾಗಿ, ಇಂದಿನ ಪಂದ್ಯ ಭಾರತ ತಂಡಕ್ಕೆ ಅಭ್ಯಾಸದಂತಾಗಿದೆ.</p><p> ಭಾನುವಾರ ನಡೆಯುವ ನಾಲ್ಕರ ಘಟ್ಟದ ಪಂದ್ಯದಲ್ಲಿ ಭಾರತ ತಂಡವು ತನ್ನ ಬದ್ಧ ಎದುರಾಳಿ ಪಾಕಿಸ್ತಾನವನ್ನು ಎದುರಿಸಲಿದೆ; ಎ ಗುಂಪಿನ ಪಂದ್ಯದಲ್ಲಿ ಸೂರ್ಯ ಬಳಗವು ಪಾಕ್ ವಿರುದ್ಧ ಜಯಿಸಿತ್ತು. </p><p><strong>ಭಾರತ ತಂಡ</strong> : ಅಭಿಷೇಕ್ ಶರ್ಮಾ, ಶುಭಮನ್ ಗಿಲ್, ಸಂಜು ಸ್ಯಾಮ್ಸನ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಶಿವಂ ದುಬೆ, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ಹರ್ಷಿತ್ ರಾಣಾ, ಅರ್ಷದೀಪ್ ಸಿಂಗ್, ಕುಲದೀಪ್ ಯಾದವ್</p><p><strong>ಒಮನ್</strong> <strong>ತಂಡ</strong>: ಅಮೀರ್ ಕಲೀಂ, ಜತೀಂದರ್ ಸಿಂಗ್, ಹಮ್ಮದ್ ಮಿರ್ಜಾ, ವಿನಾಯಕ್ ಶುಕ್ಲಾ, ಶಾ ಫೈಸಲ್, ಜಿಕ್ರಿಯಾ ಇಸ್ಲಾಂ, ಆರ್ಯನ್ ಬಿಶ್ಟ್ ಮೊಹಮ್ಮದ್ ನದೀಮ್, ಶಕೀಲ್ ಅಹ್ಮದ್, ಸಮಯ್ ಶ್ರೀವಾಸ್ತವ, ಜಿತೇನ್ ರಾಮನಂದಿ</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಬುಧಾಬಿ</strong>: ಇಲ್ಲಿ ನಡೆಯುತ್ತಿರುವ ಏಷ್ಯಾಕಪ್ ಟಿ20 ಕ್ರಿಕೆಟ್ ಟೂರ್ನಿಯ ಎ ಗುಂಪಿನ ಒಮನ್ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದಿರುವ ಭಾರತ ತಂಡದ ನಾಯಕ ಸೂರ್ಯ ಕುಮಾರ್ ಯಾದವ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.</p><p>ಎರಡೂ ತಂಡಗಳು ಇಬ್ಬರು ಆಟಗಾರರನ್ನು ಬದಲಾವಣೆ ಮಾಡಿವೆ. ಹರ್ಷಿತ್ ರಾಣಾ ಅವರನ್ನು ಸೂರ್ಯ ಕಣಕ್ಕಿಳಿಸಿದ್ದಾರೆ.</p><p>ಸೂರ್ಯಕುಮಾರ್ ಯಾದವ್ ನಾಯಕತ್ವದ ಭಾರತ ತಂಡವು ಏಷ್ಯಾ ಕಪ್ ಟಿ20 ಕ್ರಿಕೆಟ್ ಟೂರ್ನಿಯ ಸೂಪರ್ ಫೋರ್ ಹಂತ ಪ್ರವೇಶಿಸಿ ಆಗಿದೆ. ಹೀಗಾಗಿ, ಇಂದಿನ ಪಂದ್ಯ ಭಾರತ ತಂಡಕ್ಕೆ ಅಭ್ಯಾಸದಂತಾಗಿದೆ.</p><p> ಭಾನುವಾರ ನಡೆಯುವ ನಾಲ್ಕರ ಘಟ್ಟದ ಪಂದ್ಯದಲ್ಲಿ ಭಾರತ ತಂಡವು ತನ್ನ ಬದ್ಧ ಎದುರಾಳಿ ಪಾಕಿಸ್ತಾನವನ್ನು ಎದುರಿಸಲಿದೆ; ಎ ಗುಂಪಿನ ಪಂದ್ಯದಲ್ಲಿ ಸೂರ್ಯ ಬಳಗವು ಪಾಕ್ ವಿರುದ್ಧ ಜಯಿಸಿತ್ತು. </p><p><strong>ಭಾರತ ತಂಡ</strong> : ಅಭಿಷೇಕ್ ಶರ್ಮಾ, ಶುಭಮನ್ ಗಿಲ್, ಸಂಜು ಸ್ಯಾಮ್ಸನ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಶಿವಂ ದುಬೆ, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ಹರ್ಷಿತ್ ರಾಣಾ, ಅರ್ಷದೀಪ್ ಸಿಂಗ್, ಕುಲದೀಪ್ ಯಾದವ್</p><p><strong>ಒಮನ್</strong> <strong>ತಂಡ</strong>: ಅಮೀರ್ ಕಲೀಂ, ಜತೀಂದರ್ ಸಿಂಗ್, ಹಮ್ಮದ್ ಮಿರ್ಜಾ, ವಿನಾಯಕ್ ಶುಕ್ಲಾ, ಶಾ ಫೈಸಲ್, ಜಿಕ್ರಿಯಾ ಇಸ್ಲಾಂ, ಆರ್ಯನ್ ಬಿಶ್ಟ್ ಮೊಹಮ್ಮದ್ ನದೀಮ್, ಶಕೀಲ್ ಅಹ್ಮದ್, ಸಮಯ್ ಶ್ರೀವಾಸ್ತವ, ಜಿತೇನ್ ರಾಮನಂದಿ</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>