ಭಾರತ ತಂಡದಲ್ಲಿ ವೈಫಲ್ಯ ಅನುಭವಿಸಿರುವ ರಿಷಭ್ ಪಂತ್ ಅವರನ್ನು ಕೈಬಿಟ್ಟು, ದಿನೇಶ್ ಕಾರ್ತಿಕ್ಗೆ ಅವಕಾಶ ನೀಡುವ ಸಾಧ್ಯತೆ ಇದೆ. ಆದರೆ ಬೌಲಿಂಗ್ನಲ್ಲಿ ಹೆಚ್ಚು ಬದಲಾವಣೆ ಮಾಡುವ ಸಾಧ್ಯತೆ ಇಲ್ಲ. ಏಕೆಂದರೆ ಆವೇಶ್ ಖಾನ್ ಗಾಯಗೊಂಡಿರುವುದರಿಂದ ಭುವನೇಶ್ವರ್ ಕುಮಾರ್, ಆರ್ಷದೀಪ್ ಸಿಂಗ್ ಹಾಗೂ ಹಾರ್ದಿಕ್ ಪಾಂಡ್ಯ ಅವರೇ ವೇಗದ ವಿಭಾಗವನ್ನು ನಿಭಾಯಿಸಬಹುದು. ಚಾಹಲ್ಗೆ ವಿಶ್ರಾಂತಿ ನೀಡಿ ರವಿ ಬಿಷ್ಣೊಯಿಗೆ ಅವಕಾಶ ನೀಡಬಹುದು.