<p><strong>ನವದೆಹಲಿ:</strong> ಅಜಿತ್ ಅಗರಕರ್ ನೇತೃತ್ವದ ಆಯ್ಕೆ ಸಮಿತಿ ಏಷ್ಯಾ ಕಪ್ ಟೂರ್ನಿಗೆ ಭಾರತ ತಂಡವನ್ನು ಆಯ್ಕೆ ಮಾಡಲು ಇದೇ 19ರಂದು ಸಭೆ ಸೇರಲಿದೆ. ಈ ನಡುವೆ ಟಿ20 ತಂಡದ ನಾಯಕ ಸೂರ್ಯಕುಮಾರ್ ಯಾದವ್ ಅವರು ಬಿಸಿಸಿಐ ಶ್ರೇಷ್ಠತಾ ಕೇಂದ್ರದ ಫಿಟ್ನೆಸ್ ಪರೀಕ್ಷೆಯಲ್ಲಿ ಶನಿವಾರ ತೇರ್ಗಡೆಯಾಗಿದ್ದಾರೆ.</p>.<p>ಐಪಿಎಲ್ನಲ್ಲಿ ‘ಸರಣಿಯ ಸರ್ವೋತ್ತಮ’ರಾದ ಸೂರ್ಯ ನಂತರ ಯಾವುದೇ ಟೂರ್ನಿಯಲ್ಲಿ ಆಡಿರಲಿಲ್ಲ. ಹೊಟ್ಟೆಯ ಕೆಳ ಬಲಭಾಗದಲ್ಲಿ ‘ಸ್ಪೋರ್ಟ್ಸ್ ಹರ್ನಿಯಾ’ಕ್ಕೆ ಅವರು ಜರ್ಮನಿಯ ಮ್ಯೂನಿಕ್ನಲ್ಲಿ ಜೂನ್ನಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಸೂರ್ಯ ಅವರು ಫಿಟ್ನೆಸ್ ಟೆಸ್ಟ್ನಲ್ಲಿ ಯಶಸ್ವಿ ಆಗಿದ್ದಾರೆ ಎಂದು ಬಿಸಿಸಿಐ ಮೂಲವೊಂದು ಪಿಟಿಐಗೆ ತಿಳಿಸಿದೆ.</p>.<p>34 ವರ್ಷ ವಯಸ್ಸಿನ ಸೂರ್ಯ ಅವರು ಮುಂಬೈನಲ್ಲಿ ಮುಂದಿನ ಮಂಗಳವಾರ ಆಯ್ಕೆಸಮಿತಿ ಸಭೆಗೆ ಹಾಜರಾಗುವುದು ಖಚಿತವಾಗಿದೆ. ಏಷ್ಯಾ ಕಪ್ ಸೆಪ್ಟೆಂಬರ್ 9 ರಿಂದ 28ರವರೆಗೆ ಯುಎಇಯಲ್ಲಿ ನಡೆಯಲಿದೆ. ಭಾರತ ಸೆ. 10ರಂದು ಆತಿಥೇಯ ತಂಡವನ್ನು ಎದುರಿಸುವ ಮೂಲಕ ಅಭಿಯಾನ ಆರಂಭಿಸಲಿದೆ. ಬಹುನಿರೀಕ್ಷಿತ ಭಾರತ– ಪಾಕ್ ಪಂದ್ಯ ಸೆ. 14ರಂದು ದುಬೈನಲ್ಲಿ ನಡೆಯಲಿದೆ.</p>.<p>ಕಳೆದ ಐಪಿಎಲ್ನಲ್ಲಿ ಸೂರ್ಯಕುಮಾರ್ 717 ರನ್ ಬಾರಿಸಿದ್ದರು. ಆರೇಂಜ್ ಕ್ಯಾಪ್ ಗೆದ್ದ ಸಾಯಿ ಸುದರ್ಶನ್ (759 ರನ್) ನಂತರ ರನ್ ಗಳಿಕೆಯಲ್ಲಿ ಎರಡನೇ ಸ್ಥಾನದಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಅಜಿತ್ ಅಗರಕರ್ ನೇತೃತ್ವದ ಆಯ್ಕೆ ಸಮಿತಿ ಏಷ್ಯಾ ಕಪ್ ಟೂರ್ನಿಗೆ ಭಾರತ ತಂಡವನ್ನು ಆಯ್ಕೆ ಮಾಡಲು ಇದೇ 19ರಂದು ಸಭೆ ಸೇರಲಿದೆ. ಈ ನಡುವೆ ಟಿ20 ತಂಡದ ನಾಯಕ ಸೂರ್ಯಕುಮಾರ್ ಯಾದವ್ ಅವರು ಬಿಸಿಸಿಐ ಶ್ರೇಷ್ಠತಾ ಕೇಂದ್ರದ ಫಿಟ್ನೆಸ್ ಪರೀಕ್ಷೆಯಲ್ಲಿ ಶನಿವಾರ ತೇರ್ಗಡೆಯಾಗಿದ್ದಾರೆ.</p>.<p>ಐಪಿಎಲ್ನಲ್ಲಿ ‘ಸರಣಿಯ ಸರ್ವೋತ್ತಮ’ರಾದ ಸೂರ್ಯ ನಂತರ ಯಾವುದೇ ಟೂರ್ನಿಯಲ್ಲಿ ಆಡಿರಲಿಲ್ಲ. ಹೊಟ್ಟೆಯ ಕೆಳ ಬಲಭಾಗದಲ್ಲಿ ‘ಸ್ಪೋರ್ಟ್ಸ್ ಹರ್ನಿಯಾ’ಕ್ಕೆ ಅವರು ಜರ್ಮನಿಯ ಮ್ಯೂನಿಕ್ನಲ್ಲಿ ಜೂನ್ನಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಸೂರ್ಯ ಅವರು ಫಿಟ್ನೆಸ್ ಟೆಸ್ಟ್ನಲ್ಲಿ ಯಶಸ್ವಿ ಆಗಿದ್ದಾರೆ ಎಂದು ಬಿಸಿಸಿಐ ಮೂಲವೊಂದು ಪಿಟಿಐಗೆ ತಿಳಿಸಿದೆ.</p>.<p>34 ವರ್ಷ ವಯಸ್ಸಿನ ಸೂರ್ಯ ಅವರು ಮುಂಬೈನಲ್ಲಿ ಮುಂದಿನ ಮಂಗಳವಾರ ಆಯ್ಕೆಸಮಿತಿ ಸಭೆಗೆ ಹಾಜರಾಗುವುದು ಖಚಿತವಾಗಿದೆ. ಏಷ್ಯಾ ಕಪ್ ಸೆಪ್ಟೆಂಬರ್ 9 ರಿಂದ 28ರವರೆಗೆ ಯುಎಇಯಲ್ಲಿ ನಡೆಯಲಿದೆ. ಭಾರತ ಸೆ. 10ರಂದು ಆತಿಥೇಯ ತಂಡವನ್ನು ಎದುರಿಸುವ ಮೂಲಕ ಅಭಿಯಾನ ಆರಂಭಿಸಲಿದೆ. ಬಹುನಿರೀಕ್ಷಿತ ಭಾರತ– ಪಾಕ್ ಪಂದ್ಯ ಸೆ. 14ರಂದು ದುಬೈನಲ್ಲಿ ನಡೆಯಲಿದೆ.</p>.<p>ಕಳೆದ ಐಪಿಎಲ್ನಲ್ಲಿ ಸೂರ್ಯಕುಮಾರ್ 717 ರನ್ ಬಾರಿಸಿದ್ದರು. ಆರೇಂಜ್ ಕ್ಯಾಪ್ ಗೆದ್ದ ಸಾಯಿ ಸುದರ್ಶನ್ (759 ರನ್) ನಂತರ ರನ್ ಗಳಿಕೆಯಲ್ಲಿ ಎರಡನೇ ಸ್ಥಾನದಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>