<p><strong>ನವದೆಹಲಿ:</strong> ಭಾರತ ಮತ್ತು ಪಾಕಿಸ್ತಾನ ಕ್ರಿಕೆಟ್ ಮಂಡಳಿಗಳು ಏಷ್ಯಾ ಕಪ್ ಟ್ರೋಫಿ ವಿವಾದವನ್ನು ತಣ್ಣಗಾಗಿಸಲು ಮುಂದಾಗಿವೆ. ಆ ನಿಟ್ಟಿನಲ್ಲಿ ತಾವೇ ಪಿಸಿಬಿ ಅಧ್ಯಕ್ಷ ಮೊಹ್ಸಿನ್ ನಖ್ವಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಿರುವುದಾಗಿ ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಪಿಟಿಐಗೆ ತಿಳಿಸಿದ್ದಾರೆ.</p><p>ದುಬೈನಲ್ಲಿ ನಡೆದ ಐಸಿಸಿ ಸಭೆಯ ಹೊರತಾಗಿ ಪಿಸಿಬಿ ಅಧ್ಯಕ್ಷ ಮೊಹ್ಸಿನ್ ನಖ್ವಿಯವರನ್ನು ಪ್ರತ್ಯೇಕವಾಗಿ ಭೇಟಿಯಾದ ಬಳಿಕ ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಅವರು ಪ್ರತಿಕ್ರಿಯೆ ನೀಡಿದ್ದಾರೆ.</p><p>‘ನಾನು ಐಸಿಸಿಯ ಅನೌಪಚಾರಿಕ ಮತ್ತು ಔಪಚಾರಿಕ ಸಭೆಯ ಭಾಗವಾಗಿದ್ದೆ. ಪಿಸಿಬಿ ಅಧ್ಯಕ್ಷ ಮೊಹ್ಸಿನ್ ನಖ್ವಿ ಕೂಡ ಹಾಜರಿದ್ದರು. ಸಭೆಯ ಸಂದರ್ಭದಲ್ಲಿ ನಾವು ಏಷ್ಯಾ ಕಪ್ ಟ್ರೋಫಿ ಕುರಿತು ಚರ್ಚಿಸಲು ಸಾಧ್ಯವಾಗಲಿಲ್ಲ’.</p><p>‘ಆದರೆ, ನಮ್ಮ ಕೋರಿಕೆಯ ಮೇರೆಗೆ ಐಸಿಸಿ ಹಿರಿಯ ಅಧಿಕಾರಿಯೊಬ್ಬರು ಈ ವಿಚಾರವಾಗಿ ನಮ್ಮ ಹಾಗೂ ಪಿಸಿಬಿ ಮುಖ್ಯಸ್ಥರ ಜೊತೆ ಪ್ರತ್ಯೇಕ ಸಭೆಗೆ ಅನುಕೂಲ ಮಾಡಿಕೊಟ್ಟರು’ ಎಂದು ಸೈಕಿಯಾ ಶನಿವಾರ ಪಿಟಿಐಗೆ ತಿಳಿಸಿದರು.</p><p>‘ಮಾತುಕತೆಯ ಪ್ರಕ್ರಿಯೆ ಪ್ರಾರಂಭಿಸುವುದು ನಿಜಕ್ಕೂ ಒಳ್ಳೆಯ ಬೆಳವಣಿಗೆ. ಐಸಿಸಿ ಮಂಡಳಿ ಸಭೆಯ ಹೊರತಾಗಿ ನಡೆದ ಸಭೆಯಲ್ಲಿ ಎರಡೂ ಕಡೆಯವರು ಸೌಹಾರ್ದಯುತವಾಗಿ ಭಾಗವಹಿಸಿದ್ದೇವೆ. ಶೀಘ್ರದಲ್ಲೇ ಪರಿಹಾರ ಕಂಡುಕೊಳ್ಳಲಾಗುವುದು’ ಎಂದು ಅವರು ಹೇಳಿದರು.</p><p>ಸದ್ಯ ಏಷ್ಯಾ ಕಪ್ ಟ್ರೋಫಿಯನ್ನು ದುಬೈನಲ್ಲಿರುವ ಎಸಿಸಿ ಪ್ರಧಾನ ಕಚೇರಿಯಲ್ಲಿ ಇರಿಸಲಾಗಿದೆ. ಅಲ್ಲಿನ ಸಿಬ್ಬಂದಿಗೆ ನಖ್ವಿ ಅವರು ತಮ್ಮ ಅನುಮತಿಯಿಲ್ಲದೆ ಅದನ್ನು ಸ್ಥಳಾಂತರಿಸದಂತೆ ಸೂಚನೆ ನೀಡಿದ್ದಾರೆ.</p><p>‘ಎರಡೂ ಕಡೆಯವರು ಆದಷ್ಟು ಬೇಗ ಸಮಸ್ಯೆಯನ್ನು ಪರಿಹರಿಸಲು ಏನಾದರೂ ಕ್ರಮ ಕೈಗೊಳ್ಳುತ್ತಾರೆ. ಈಗ ವಿವಾದ ಸ್ವಲ್ಪ ತಣ್ಣಗಾಗಿದೆ. ಹಾಗಾಗಿ ವಿವಿಧ ಪರಿಹಾರ ಕ್ರಮಗಳು ನಮ್ಮ ಮುಂದಿವೆ’ ಎಂದು ಸೈಕಿಯಾ ತಿಳಿಸಿದ್ದಾರೆ. </p><p>ಸೆಪ್ಟೆಂಬರ್ 28ರಂದು ನಡೆದ ಏಷ್ಯಾಕಪ್ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ತಂಡವನ್ನು ಸೋಲಿಸಿ ಚಾಂಪಿಯನ್ ಆದ ಭಾರತ ತಂಡ ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ಅಧ್ಯಕ್ಷರಾಗಿರುವ ನಖ್ವಿ ಕೈಯಿಂದ ಟ್ರೋಫಿ ಪಡೆಯಲು ನಿರಾಕರಿಸಿತ್ತು. ಈ ಹಿನ್ನೆಲೆಯಲ್ಲಿ ನಖ್ವಿ ಅವರು ಏಷ್ಯಾ ಕಪ್ ಟ್ರೋಫಿಯನ್ನು ಭಾರತಕ್ಕೆ ಪ್ರದಾನ ಮಾಡದೆ ತಮ್ಮ ಜೊತೆಗೆ ತೆಗೆದುಕೊಂಡು ಹೋಗಿದ್ದರು.</p>.ಏಷ್ಯಾ ಕಪ್ ಟ್ರೋಫಿ ವಿವಾದ: ಐಸಿಸಿ ಸಭೆಯಲ್ಲಿ ಪ್ರಸ್ತಾಪಿಸಲು ಬಿಸಿಸಿಐ ಸಿದ್ಧತೆ.ಏಷ್ಯಾ ಕಪ್ ವಿವಾದ | ನನ್ನ ಒಪ್ಪಿಗೆಯಿಲ್ಲದೆ ಟ್ರೋಫಿ ಮುಟ್ಟುವಂತಿಲ್ಲ: ನಖ್ವಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಭಾರತ ಮತ್ತು ಪಾಕಿಸ್ತಾನ ಕ್ರಿಕೆಟ್ ಮಂಡಳಿಗಳು ಏಷ್ಯಾ ಕಪ್ ಟ್ರೋಫಿ ವಿವಾದವನ್ನು ತಣ್ಣಗಾಗಿಸಲು ಮುಂದಾಗಿವೆ. ಆ ನಿಟ್ಟಿನಲ್ಲಿ ತಾವೇ ಪಿಸಿಬಿ ಅಧ್ಯಕ್ಷ ಮೊಹ್ಸಿನ್ ನಖ್ವಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಿರುವುದಾಗಿ ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಪಿಟಿಐಗೆ ತಿಳಿಸಿದ್ದಾರೆ.</p><p>ದುಬೈನಲ್ಲಿ ನಡೆದ ಐಸಿಸಿ ಸಭೆಯ ಹೊರತಾಗಿ ಪಿಸಿಬಿ ಅಧ್ಯಕ್ಷ ಮೊಹ್ಸಿನ್ ನಖ್ವಿಯವರನ್ನು ಪ್ರತ್ಯೇಕವಾಗಿ ಭೇಟಿಯಾದ ಬಳಿಕ ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಅವರು ಪ್ರತಿಕ್ರಿಯೆ ನೀಡಿದ್ದಾರೆ.</p><p>‘ನಾನು ಐಸಿಸಿಯ ಅನೌಪಚಾರಿಕ ಮತ್ತು ಔಪಚಾರಿಕ ಸಭೆಯ ಭಾಗವಾಗಿದ್ದೆ. ಪಿಸಿಬಿ ಅಧ್ಯಕ್ಷ ಮೊಹ್ಸಿನ್ ನಖ್ವಿ ಕೂಡ ಹಾಜರಿದ್ದರು. ಸಭೆಯ ಸಂದರ್ಭದಲ್ಲಿ ನಾವು ಏಷ್ಯಾ ಕಪ್ ಟ್ರೋಫಿ ಕುರಿತು ಚರ್ಚಿಸಲು ಸಾಧ್ಯವಾಗಲಿಲ್ಲ’.</p><p>‘ಆದರೆ, ನಮ್ಮ ಕೋರಿಕೆಯ ಮೇರೆಗೆ ಐಸಿಸಿ ಹಿರಿಯ ಅಧಿಕಾರಿಯೊಬ್ಬರು ಈ ವಿಚಾರವಾಗಿ ನಮ್ಮ ಹಾಗೂ ಪಿಸಿಬಿ ಮುಖ್ಯಸ್ಥರ ಜೊತೆ ಪ್ರತ್ಯೇಕ ಸಭೆಗೆ ಅನುಕೂಲ ಮಾಡಿಕೊಟ್ಟರು’ ಎಂದು ಸೈಕಿಯಾ ಶನಿವಾರ ಪಿಟಿಐಗೆ ತಿಳಿಸಿದರು.</p><p>‘ಮಾತುಕತೆಯ ಪ್ರಕ್ರಿಯೆ ಪ್ರಾರಂಭಿಸುವುದು ನಿಜಕ್ಕೂ ಒಳ್ಳೆಯ ಬೆಳವಣಿಗೆ. ಐಸಿಸಿ ಮಂಡಳಿ ಸಭೆಯ ಹೊರತಾಗಿ ನಡೆದ ಸಭೆಯಲ್ಲಿ ಎರಡೂ ಕಡೆಯವರು ಸೌಹಾರ್ದಯುತವಾಗಿ ಭಾಗವಹಿಸಿದ್ದೇವೆ. ಶೀಘ್ರದಲ್ಲೇ ಪರಿಹಾರ ಕಂಡುಕೊಳ್ಳಲಾಗುವುದು’ ಎಂದು ಅವರು ಹೇಳಿದರು.</p><p>ಸದ್ಯ ಏಷ್ಯಾ ಕಪ್ ಟ್ರೋಫಿಯನ್ನು ದುಬೈನಲ್ಲಿರುವ ಎಸಿಸಿ ಪ್ರಧಾನ ಕಚೇರಿಯಲ್ಲಿ ಇರಿಸಲಾಗಿದೆ. ಅಲ್ಲಿನ ಸಿಬ್ಬಂದಿಗೆ ನಖ್ವಿ ಅವರು ತಮ್ಮ ಅನುಮತಿಯಿಲ್ಲದೆ ಅದನ್ನು ಸ್ಥಳಾಂತರಿಸದಂತೆ ಸೂಚನೆ ನೀಡಿದ್ದಾರೆ.</p><p>‘ಎರಡೂ ಕಡೆಯವರು ಆದಷ್ಟು ಬೇಗ ಸಮಸ್ಯೆಯನ್ನು ಪರಿಹರಿಸಲು ಏನಾದರೂ ಕ್ರಮ ಕೈಗೊಳ್ಳುತ್ತಾರೆ. ಈಗ ವಿವಾದ ಸ್ವಲ್ಪ ತಣ್ಣಗಾಗಿದೆ. ಹಾಗಾಗಿ ವಿವಿಧ ಪರಿಹಾರ ಕ್ರಮಗಳು ನಮ್ಮ ಮುಂದಿವೆ’ ಎಂದು ಸೈಕಿಯಾ ತಿಳಿಸಿದ್ದಾರೆ. </p><p>ಸೆಪ್ಟೆಂಬರ್ 28ರಂದು ನಡೆದ ಏಷ್ಯಾಕಪ್ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ತಂಡವನ್ನು ಸೋಲಿಸಿ ಚಾಂಪಿಯನ್ ಆದ ಭಾರತ ತಂಡ ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ಅಧ್ಯಕ್ಷರಾಗಿರುವ ನಖ್ವಿ ಕೈಯಿಂದ ಟ್ರೋಫಿ ಪಡೆಯಲು ನಿರಾಕರಿಸಿತ್ತು. ಈ ಹಿನ್ನೆಲೆಯಲ್ಲಿ ನಖ್ವಿ ಅವರು ಏಷ್ಯಾ ಕಪ್ ಟ್ರೋಫಿಯನ್ನು ಭಾರತಕ್ಕೆ ಪ್ರದಾನ ಮಾಡದೆ ತಮ್ಮ ಜೊತೆಗೆ ತೆಗೆದುಕೊಂಡು ಹೋಗಿದ್ದರು.</p>.ಏಷ್ಯಾ ಕಪ್ ಟ್ರೋಫಿ ವಿವಾದ: ಐಸಿಸಿ ಸಭೆಯಲ್ಲಿ ಪ್ರಸ್ತಾಪಿಸಲು ಬಿಸಿಸಿಐ ಸಿದ್ಧತೆ.ಏಷ್ಯಾ ಕಪ್ ವಿವಾದ | ನನ್ನ ಒಪ್ಪಿಗೆಯಿಲ್ಲದೆ ಟ್ರೋಫಿ ಮುಟ್ಟುವಂತಿಲ್ಲ: ನಖ್ವಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>