<p><strong>ಲಾಹೋರ್:</strong> ‘ನನ್ನ ಒಪ್ಪಿಗೆಯಿಲ್ಲದೆ ಯಾರೂ ಕೂಡ ಏಷ್ಯಾ ಕಪ್ ಟ್ರೋಫಿಯನ್ನು ಮುಟ್ಟುವಂತಿಲ್ಲ’ ಎಂದು ಎಸಿಸಿ ಅಧ್ಯಕ್ಷ ಮೊಹಸಿನ್ ನಖ್ವಿ ಅವರು ಆದೇಶಿಸಿದ್ದಾರೆ.</p><p>ಸೆ.28 ರಂದು ಭಾರತ ಮತ್ತು ಪಾಕಿಸ್ತಾನ ನಡುವಿನ ಏಷ್ಯಾ ಕಪ್ ಫೈನಲ್ ಪಂದ್ಯದ ನಂತರ, ಎಸಿಸಿ ಅಧ್ಯಕ್ಷ ಮೊಹಸಿನ್ ನಖ್ವಿ ಅವರಿಂದ ಟ್ರೋಫಿ ಸ್ವೀಕರಿಸಲು ಭಾರತೀಯ ಆಟಗಾರರು ನಿರಾಕರಿಸಿದ್ದರು. ನಂತರ ಟ್ರೋಫಿಯನ್ನು ನಖ್ವಿಯೇ ಕೊಂಡೊಯ್ದಿದ್ದರು. </p><p>‘ದುಬೈನ ಎಸಿಸಿ ಕಚೇರಿಯಲ್ಲಿ ಈಗಲೂ ಏಷ್ಯಾ ಕಪ್ ಟ್ರೋಫಿ ಇದೆ. ನನ್ನ ಉಪಸ್ಥಿತಿ ಹಾಗೂ ಒಪ್ಪಿಗೆಯಿಲ್ಲದೆ ಅದನ್ನು ಸ್ಥಳಾಂತರಿಸುವಂತಿಲ್ಲ ಎಂದು ಮೊಹಸಿನ್ ನಖ್ವಿ ಆದೇಶಿಸಿದ್ದಾರೆ’ ಎಂದು ಮೂಲಗಳು ತಿಳಿಸಿರುವುದಾಗಿ ಪಿಟಿಐ ವರದಿ ಮಾಡಿದೆ. </p><p>ಮೊಹಸಿನ್ ನಖ್ವಿ ಅವರ ನಡೆಯ ಕುರಿತು ಬಿಸಿಸಿಐ ಆಕ್ಷೇಪ ವ್ಯಕ್ತಪಡಿಸಿದ್ದು, ಮುಂದಿನ ಐಸಿಸಿ ಸಭೆಯಲ್ಲಿ ಈ ವಿಷಯದ ಕುರಿತು ಧ್ವನಿ ಎತ್ತುವ ಸಾಧ್ಯತೆಯಿದೆ. </p><p>ಆಪರೇಷನ್ ಸಿಂಧೂರ ನಂತರ ಉಭಯ ದೇಶಗಳ ನಡುವಿನ ರಾಜತಾಂತ್ರಿಕ ಸಂಬಂಧ ಬಿಗಡಾಯಿಸಿದ್ದು, ಈ ಬಾರಿಯ ಏಷ್ಯಾ ಕಪ್ನಲ್ಲಿ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಪಾಕ್ ಆಟಗಾರರಿಗೆ ಹಸ್ತಲಾಘವ ಮಾಡಲು ಭಾರತೀಯ ಆಟಗಾರರು ನಿರಾಕರಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಾಹೋರ್:</strong> ‘ನನ್ನ ಒಪ್ಪಿಗೆಯಿಲ್ಲದೆ ಯಾರೂ ಕೂಡ ಏಷ್ಯಾ ಕಪ್ ಟ್ರೋಫಿಯನ್ನು ಮುಟ್ಟುವಂತಿಲ್ಲ’ ಎಂದು ಎಸಿಸಿ ಅಧ್ಯಕ್ಷ ಮೊಹಸಿನ್ ನಖ್ವಿ ಅವರು ಆದೇಶಿಸಿದ್ದಾರೆ.</p><p>ಸೆ.28 ರಂದು ಭಾರತ ಮತ್ತು ಪಾಕಿಸ್ತಾನ ನಡುವಿನ ಏಷ್ಯಾ ಕಪ್ ಫೈನಲ್ ಪಂದ್ಯದ ನಂತರ, ಎಸಿಸಿ ಅಧ್ಯಕ್ಷ ಮೊಹಸಿನ್ ನಖ್ವಿ ಅವರಿಂದ ಟ್ರೋಫಿ ಸ್ವೀಕರಿಸಲು ಭಾರತೀಯ ಆಟಗಾರರು ನಿರಾಕರಿಸಿದ್ದರು. ನಂತರ ಟ್ರೋಫಿಯನ್ನು ನಖ್ವಿಯೇ ಕೊಂಡೊಯ್ದಿದ್ದರು. </p><p>‘ದುಬೈನ ಎಸಿಸಿ ಕಚೇರಿಯಲ್ಲಿ ಈಗಲೂ ಏಷ್ಯಾ ಕಪ್ ಟ್ರೋಫಿ ಇದೆ. ನನ್ನ ಉಪಸ್ಥಿತಿ ಹಾಗೂ ಒಪ್ಪಿಗೆಯಿಲ್ಲದೆ ಅದನ್ನು ಸ್ಥಳಾಂತರಿಸುವಂತಿಲ್ಲ ಎಂದು ಮೊಹಸಿನ್ ನಖ್ವಿ ಆದೇಶಿಸಿದ್ದಾರೆ’ ಎಂದು ಮೂಲಗಳು ತಿಳಿಸಿರುವುದಾಗಿ ಪಿಟಿಐ ವರದಿ ಮಾಡಿದೆ. </p><p>ಮೊಹಸಿನ್ ನಖ್ವಿ ಅವರ ನಡೆಯ ಕುರಿತು ಬಿಸಿಸಿಐ ಆಕ್ಷೇಪ ವ್ಯಕ್ತಪಡಿಸಿದ್ದು, ಮುಂದಿನ ಐಸಿಸಿ ಸಭೆಯಲ್ಲಿ ಈ ವಿಷಯದ ಕುರಿತು ಧ್ವನಿ ಎತ್ತುವ ಸಾಧ್ಯತೆಯಿದೆ. </p><p>ಆಪರೇಷನ್ ಸಿಂಧೂರ ನಂತರ ಉಭಯ ದೇಶಗಳ ನಡುವಿನ ರಾಜತಾಂತ್ರಿಕ ಸಂಬಂಧ ಬಿಗಡಾಯಿಸಿದ್ದು, ಈ ಬಾರಿಯ ಏಷ್ಯಾ ಕಪ್ನಲ್ಲಿ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಪಾಕ್ ಆಟಗಾರರಿಗೆ ಹಸ್ತಲಾಘವ ಮಾಡಲು ಭಾರತೀಯ ಆಟಗಾರರು ನಿರಾಕರಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>