ದುಬೈ: ಹಾಂಗ್ಕಾಂಗ್ ತಂಡವನ್ನು ಹಣಿಯಬಹುದು, ಸುಲಭವಾಗಿ ಗೆಲ್ಲಬಹುದು ಎಂಬ ನಿರೀಕ್ಷೆಯೊಂದಿಗೆ ದುಬೈ ಅಂತರರಾಷ್ಟ್ರೀಯ ಕ್ರೀಡಾಂಗಣಕ್ಕೆ ಇಳಿದ ನಾಯಕ ರೋಹಿತ್ ಶರ್ಮಾ ಪಡೆಗೆ ಆರಂಭದಲ್ಲಿ ಪ್ರಬಲ ಪ್ರತಿರೋಧ ವ್ಯಕ್ತವಾಯಿತು. ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಹಾಂಗ್ಕಾಂಗ್ ತಂಡವು ಸಂಘಟಿತ ದಾಳಿ ಮೂಲಕ ಭಾರತ ತಂಡವು ಬೃಹತ್ ಮೊತ್ತವನ್ನು ಪೇರಿಸಲು ಸಾಧ್ಯವಾಗದಂತೆ ತಡೆಯುವ ಪ್ರಯತ್ನ ನಡೆಸಿತು.