<p><strong>ಹಾಂಗ್ಝೌ:</strong> ಭಾರತ ಮತ್ತು ಅಫ್ಗಾನಿಸ್ತಾನ ತಂಡಗಳ ನಡುವಣ ಏಷ್ಯನ್ ಕ್ರೀಡಾಕೂಟದ ಟಿ20 ಕ್ರಿಕೆಟ್ ಫೈನಲ್ ಪಂದ್ಯ ಮಳೆಯಿಂದಾಗಿ ರದ್ದುಗೊಂಡಿದೆ. </p><p>ಆದರೆ ಅಫ್ಗಾನಿಸ್ತಾನಕ್ಕಿಂತಲೂ ಉತ್ತಮ ರ್ಯಾಂಕಿಂಗ್ ಹೊಂದಿರುವ ಹಿನ್ನೆಲೆಯಲ್ಲಿ ಭಾರತ ಚಿನ್ನದ ಪದಕವನ್ನು ಜಯಿಸಿದೆ. </p><p>ಇದೇ ಮೊದಲ ಬಾರಿಗೆ ಏಷ್ಯನ್ ಗೇಮ್ಸ್ನಲ್ಲಿ ಟಿ20 ಕ್ರಿಕೆಟ್ ಆಳವಡಿಸಲಾಗಿತ್ತು. ಇದರೊಂದಿಗೆ ಭಾರತದ ಪುರುಷ ಹಾಗೂ ಮಹಿಳಾ ತಂಡಗಳು ಚಿನ್ನದ ಪದಕಗಳನ್ನು ಗೆದ್ದಿವೆ. </p>. <p><strong>ಮಳೆಯಿಂದಾಗಿ ಪಂದ್ಯ ರದ್ದು..</strong> </p><p>ಟಾಸ್ ಗೆದ್ದ ಭಾರತ ಮೊದಲು ಫೀಲ್ಡಿಂಗ್ ಆಯ್ದುಕೊಂಡಿತು. ಮಳೆಯಿಂದಾಗಿ ಪಂದ್ಯಕ್ಕೆ ಅಡಚಣೆಯಾದಾಗ ಅಫ್ಗಾನಿಸ್ತಾನ 18.2 ಓವರ್ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ 112 ರನ್ ಗಳಿಸಿತ್ತು. </p><p>ಅಫ್ಗಾನಿಸ್ತಾನ 10.5 ಓವರ್ಗಳಲ್ಲಿ 52 ರನ್ನಿಗೆ ಐದು ವಿಕೆಟ್ ಕಳೆದುಕೊಂಡಿತ್ತು. ಈ ವೇಳೆ ಭಾರತ ಪಂದ್ಯದಲ್ಲಿ ಹಿಡಿತ ಸಾಧಿಸಿತ್ತು. </p><p>ಆದರೆ ಮುರಿಯದ ಆರನೇ ವಿಕೆಟ್ಗೆ 60 ರನ್ಗಳ ಜೊತೆಯಾಟ ಕಟ್ಟಿದ ಶಾಹೀದುಲ್ಲಾ ಕಮಾಲ್ ಹಾಗೂ ಗುಲ್ಬದಿನ್ ನೈಬ್ ತಂಡಕ್ಕೆ ಆಸರೆಯಾದರು. </p><p>ಶಾಹೀದುಲ್ಲಾ 49* ಮತ್ತು ಗುಲ್ಬದಿನ್ 27* ರನ್ ಗಳಿಸಿದರು . ಭಾರತದ ಪರ ಅರ್ಶದೀಪ್ ಸಿಂಗ್, ಶಿವಂ ದುಂಬೆ, ಶಹಬಾಜ್ ಅಹ್ಮದ್ ಮತ್ತು ರವಿ ಬಿಷ್ಣೋಯಿ ತಲಾ ಒಂದು ವಿಕೆಟ್ ಗಳಿಸಿದರು. </p><p>ಕ್ವಾರ್ಟರ್ಫೈನಲ್ನಲ್ಲಿ ನೇಪಾಳ ವಿರುದ್ಧ 23 ರನ್ ಅಂತರದ ಗೆಲುವು ದಾಖಲಿಸಿದ್ದ ಋತುರಾಜ್ ಗಾಯಕವಾಡ್ ನೇತೃತ್ವದ ಭಾರತ ತಂಡವು ಸೆಮಿಫೈನಲ್ನಲ್ಲಿ ಬಾಂಗ್ಲಾದೇಶ ವಿರುದ್ಧ 9 ವಿಕೆಟ್ ಅಂತರದ ಭರ್ಜರಿ ಜಯ ಸಾಧಿಸಿ ಫೈನಲ್ಗೆ ಲಗ್ಗೆ ಇಟ್ಟಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಂಗ್ಝೌ:</strong> ಭಾರತ ಮತ್ತು ಅಫ್ಗಾನಿಸ್ತಾನ ತಂಡಗಳ ನಡುವಣ ಏಷ್ಯನ್ ಕ್ರೀಡಾಕೂಟದ ಟಿ20 ಕ್ರಿಕೆಟ್ ಫೈನಲ್ ಪಂದ್ಯ ಮಳೆಯಿಂದಾಗಿ ರದ್ದುಗೊಂಡಿದೆ. </p><p>ಆದರೆ ಅಫ್ಗಾನಿಸ್ತಾನಕ್ಕಿಂತಲೂ ಉತ್ತಮ ರ್ಯಾಂಕಿಂಗ್ ಹೊಂದಿರುವ ಹಿನ್ನೆಲೆಯಲ್ಲಿ ಭಾರತ ಚಿನ್ನದ ಪದಕವನ್ನು ಜಯಿಸಿದೆ. </p><p>ಇದೇ ಮೊದಲ ಬಾರಿಗೆ ಏಷ್ಯನ್ ಗೇಮ್ಸ್ನಲ್ಲಿ ಟಿ20 ಕ್ರಿಕೆಟ್ ಆಳವಡಿಸಲಾಗಿತ್ತು. ಇದರೊಂದಿಗೆ ಭಾರತದ ಪುರುಷ ಹಾಗೂ ಮಹಿಳಾ ತಂಡಗಳು ಚಿನ್ನದ ಪದಕಗಳನ್ನು ಗೆದ್ದಿವೆ. </p>. <p><strong>ಮಳೆಯಿಂದಾಗಿ ಪಂದ್ಯ ರದ್ದು..</strong> </p><p>ಟಾಸ್ ಗೆದ್ದ ಭಾರತ ಮೊದಲು ಫೀಲ್ಡಿಂಗ್ ಆಯ್ದುಕೊಂಡಿತು. ಮಳೆಯಿಂದಾಗಿ ಪಂದ್ಯಕ್ಕೆ ಅಡಚಣೆಯಾದಾಗ ಅಫ್ಗಾನಿಸ್ತಾನ 18.2 ಓವರ್ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ 112 ರನ್ ಗಳಿಸಿತ್ತು. </p><p>ಅಫ್ಗಾನಿಸ್ತಾನ 10.5 ಓವರ್ಗಳಲ್ಲಿ 52 ರನ್ನಿಗೆ ಐದು ವಿಕೆಟ್ ಕಳೆದುಕೊಂಡಿತ್ತು. ಈ ವೇಳೆ ಭಾರತ ಪಂದ್ಯದಲ್ಲಿ ಹಿಡಿತ ಸಾಧಿಸಿತ್ತು. </p><p>ಆದರೆ ಮುರಿಯದ ಆರನೇ ವಿಕೆಟ್ಗೆ 60 ರನ್ಗಳ ಜೊತೆಯಾಟ ಕಟ್ಟಿದ ಶಾಹೀದುಲ್ಲಾ ಕಮಾಲ್ ಹಾಗೂ ಗುಲ್ಬದಿನ್ ನೈಬ್ ತಂಡಕ್ಕೆ ಆಸರೆಯಾದರು. </p><p>ಶಾಹೀದುಲ್ಲಾ 49* ಮತ್ತು ಗುಲ್ಬದಿನ್ 27* ರನ್ ಗಳಿಸಿದರು . ಭಾರತದ ಪರ ಅರ್ಶದೀಪ್ ಸಿಂಗ್, ಶಿವಂ ದುಂಬೆ, ಶಹಬಾಜ್ ಅಹ್ಮದ್ ಮತ್ತು ರವಿ ಬಿಷ್ಣೋಯಿ ತಲಾ ಒಂದು ವಿಕೆಟ್ ಗಳಿಸಿದರು. </p><p>ಕ್ವಾರ್ಟರ್ಫೈನಲ್ನಲ್ಲಿ ನೇಪಾಳ ವಿರುದ್ಧ 23 ರನ್ ಅಂತರದ ಗೆಲುವು ದಾಖಲಿಸಿದ್ದ ಋತುರಾಜ್ ಗಾಯಕವಾಡ್ ನೇತೃತ್ವದ ಭಾರತ ತಂಡವು ಸೆಮಿಫೈನಲ್ನಲ್ಲಿ ಬಾಂಗ್ಲಾದೇಶ ವಿರುದ್ಧ 9 ವಿಕೆಟ್ ಅಂತರದ ಭರ್ಜರಿ ಜಯ ಸಾಧಿಸಿ ಫೈನಲ್ಗೆ ಲಗ್ಗೆ ಇಟ್ಟಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>