<p><strong>ಢಾಕಾ:</strong> ಭದ್ರತೆಯ ಕಳವಳ ಇರುವುದರಿಂದ ಭಾರತದಲ್ಲಿ ಟಿ20ವಿಶ್ವಕಪ್ ಪಂದ್ಯಗಳನ್ನು ಆಡಲು ತಮ್ಮ ಸರ್ಕಾರ ನಿರಾಕರಿಸಿದ್ದಾಗಿ ಹೇಳಿದ್ದ ಬಾಂಗ್ಲಾದೇಶದ ಕ್ರೀಡಾ ಸಲಹೆಗಾರ ಆಸಿಫ್ ನಝ್ರುಲ್ ಈಗ ಉಲ್ಟಾ ಹೊಡೆದಿದ್ದಾರೆ. ‘ದೇಶದ ಘನತೆಯನ್ನು ಸಂರಕ್ಷಿಸುವ ಉದ್ದೇಶದಿಂದ ಬಾಂಗ್ಲಾ ಕ್ರಿಕೆಟ್ ಮಂಡಳಿ ಮತ್ತು ಆಟಗಾರರೇ ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ಹೇಳಿದ್ದಾರೆ.</p>.<p>ವಿಶ್ವಕಪ್ನಲ್ಲಿ ಭಾರತದಲ್ಲಿ ಆಡಬೇಕಾದ ತಮ್ಮ ಪಂದ್ಯಗಳನ್ನು ಶ್ರೀಲಂಕಾಕ್ಕೆ ಸ್ಥಳಾಂತರಿಸುವಂತೆ ಬಾಂಗ್ಲಾದೇಶ ಮಾಡಿದ ಮನವಿಗೆ ಐಸಿಸಿ ಒಪ್ಪಿರಲಿಲ್ಲ. ಹೀಗಾಗಿ ಬಾಂಗ್ಲಾದೇಶ ತಂಡದ ಬದಲು ಕೊನೆಗಳಿಗೆಯಲ್ಲಿ ಸ್ಕಾಟ್ಲೆಂಡ್ ತಂಡವನ್ನು ಸೇರ್ಪಡೆಗೊಳಿಸಲಾಗಿತ್ತು. </p>.<p>ತಂಡ ಹೊರಬೀಳುವ ಮುನ್ನ ಐಸಿಸಿ ಜೊತೆ ನಡೆದ ಮಾತುಕತೆಯಲ್ಲಿ ನಝ್ರುಲ್ ಕೇಂದ್ರಬಿಂದುವಾಗಿದ್ದರು. </p>.<p>‘ನಮಗೆ (ವಿಶ್ವಕಪ್ನಲ್ಲಿ ಆಡಲು ಆಗದಿರುವುದಕ್ಕಾಗಿ) ಯಾವುದೇ ವಿಷಾದದ ಪ್ರಶ್ನೆಯಿಲ್ಲ. ದೇಶದ ಕ್ರಿಕೆಟ್ ಹಿತದೃಷ್ಟಿಯಿಂದ, ಜನರ ಸುರಕ್ಷತೆ ಮತ್ತು ದೇಶದ ಘನತೆಯನ್ನು ರಕ್ಷಿಸುವ ಉದ್ದೇಶದಿಂದ ಈ ನಿರ್ಧಾರವನ್ನು ಬಿಸಿಸಿ ಮತ್ತು ಆಟಗಾರರು ತೆಗೆದುಕೊಂಡಿದ್ದರು’ ಎಂದು ಆಸಿಫ್ ಮಂಗಳವಾರ ಹೇಳಿರುವುದನ್ನು ‘ಕ್ರಿಕ್ ಬಝ್’ ಉಲ್ಲೇಖಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಢಾಕಾ:</strong> ಭದ್ರತೆಯ ಕಳವಳ ಇರುವುದರಿಂದ ಭಾರತದಲ್ಲಿ ಟಿ20ವಿಶ್ವಕಪ್ ಪಂದ್ಯಗಳನ್ನು ಆಡಲು ತಮ್ಮ ಸರ್ಕಾರ ನಿರಾಕರಿಸಿದ್ದಾಗಿ ಹೇಳಿದ್ದ ಬಾಂಗ್ಲಾದೇಶದ ಕ್ರೀಡಾ ಸಲಹೆಗಾರ ಆಸಿಫ್ ನಝ್ರುಲ್ ಈಗ ಉಲ್ಟಾ ಹೊಡೆದಿದ್ದಾರೆ. ‘ದೇಶದ ಘನತೆಯನ್ನು ಸಂರಕ್ಷಿಸುವ ಉದ್ದೇಶದಿಂದ ಬಾಂಗ್ಲಾ ಕ್ರಿಕೆಟ್ ಮಂಡಳಿ ಮತ್ತು ಆಟಗಾರರೇ ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ಹೇಳಿದ್ದಾರೆ.</p>.<p>ವಿಶ್ವಕಪ್ನಲ್ಲಿ ಭಾರತದಲ್ಲಿ ಆಡಬೇಕಾದ ತಮ್ಮ ಪಂದ್ಯಗಳನ್ನು ಶ್ರೀಲಂಕಾಕ್ಕೆ ಸ್ಥಳಾಂತರಿಸುವಂತೆ ಬಾಂಗ್ಲಾದೇಶ ಮಾಡಿದ ಮನವಿಗೆ ಐಸಿಸಿ ಒಪ್ಪಿರಲಿಲ್ಲ. ಹೀಗಾಗಿ ಬಾಂಗ್ಲಾದೇಶ ತಂಡದ ಬದಲು ಕೊನೆಗಳಿಗೆಯಲ್ಲಿ ಸ್ಕಾಟ್ಲೆಂಡ್ ತಂಡವನ್ನು ಸೇರ್ಪಡೆಗೊಳಿಸಲಾಗಿತ್ತು. </p>.<p>ತಂಡ ಹೊರಬೀಳುವ ಮುನ್ನ ಐಸಿಸಿ ಜೊತೆ ನಡೆದ ಮಾತುಕತೆಯಲ್ಲಿ ನಝ್ರುಲ್ ಕೇಂದ್ರಬಿಂದುವಾಗಿದ್ದರು. </p>.<p>‘ನಮಗೆ (ವಿಶ್ವಕಪ್ನಲ್ಲಿ ಆಡಲು ಆಗದಿರುವುದಕ್ಕಾಗಿ) ಯಾವುದೇ ವಿಷಾದದ ಪ್ರಶ್ನೆಯಿಲ್ಲ. ದೇಶದ ಕ್ರಿಕೆಟ್ ಹಿತದೃಷ್ಟಿಯಿಂದ, ಜನರ ಸುರಕ್ಷತೆ ಮತ್ತು ದೇಶದ ಘನತೆಯನ್ನು ರಕ್ಷಿಸುವ ಉದ್ದೇಶದಿಂದ ಈ ನಿರ್ಧಾರವನ್ನು ಬಿಸಿಸಿ ಮತ್ತು ಆಟಗಾರರು ತೆಗೆದುಕೊಂಡಿದ್ದರು’ ಎಂದು ಆಸಿಫ್ ಮಂಗಳವಾರ ಹೇಳಿರುವುದನ್ನು ‘ಕ್ರಿಕ್ ಬಝ್’ ಉಲ್ಲೇಖಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>