<p><strong>ದುಬೈ</strong>: ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಪಂದ್ಯಾವಳಿಯ ಇಂದಿನ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾಗುತ್ತಿವೆ.</p><p>ಈ ನಡುವೆ, ಪಾಕಿಸ್ತಾನದ ಸ್ಟಾರ್ ಬ್ಯಾಟರ್ ಬಾಬರ್ ಆಜಂ ಅವರು ತಂಡದ ತರಬೇತಿಗೆ ಗೈರಾಗಿದ್ದಾರೆ. ಹಾಗಾಗಿ, ಭಾರತ ವಿರುದ್ಧದ ಪಂದ್ಯದಲ್ಲಿ ಅವರು ಆಡುವುದು ಅನುಮಾನ ಎನ್ನಲಾಗುತ್ತಿದೆ. ಶನಿವಾರ ಸಂಜೆ ನಡೆದ ಅಭ್ಯಾಸದಲ್ಲಿ ಅವರು ಕಾಣದ ಹಿನ್ನೆಲೆಯಲ್ಲಿ ಅವರನ್ನು ಪಂದ್ಯಕ್ಕೆ ಪರಿಗಣಿಸಲಾಗುವುದಿಲ್ಲ ಎಂಬ ಊಹಾಪೋಹಗಳು ದಟ್ಟವಾಗಿವೆ. </p><p>ಆರಂಭಿಕ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ 94 ಎಸೆತಗಳಲ್ಲಿ 64 ರನ್ ಗಳಿಸಿದ್ದಕ್ಕಾಗಿ ಆಜಂ ಸಾಕಷ್ಟು ಟೀಕೆಗಳನ್ನು ಎದುರಿಸಿದ್ದರು. ಕರಾಚಿಯಲ್ಲಿ ನಡೆದ ಈ ಪಂದ್ಯದಲ್ಲಿ ಪಾಕಿಸ್ತಾನ 60 ರನ್ಗಳಿಂದ ಸೋಲುಂಡಿತ್ತು.</p><p>ಅಭ್ಯಾಸದ ನಂತರ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಮಧ್ಯಂತರ ಮುಖ್ಯ ಕೋಚ್ ಅಕಿಬ್ ಜಾವೇದ್, ಅಭ್ಯಾಸಕ್ಕೆ ಆಜಂ ಅನುಪಸ್ಥಿತಿ ಬಗ್ಗೆ ಯಾವುದೇ ನಿರ್ದಿಷ್ಟ ಕಾರಣವನ್ನು ನೀಡಲಿಲ್ಲ. ಮಾಜಿ ನಾಯಕ ವಿಶ್ರಾಂತಿ ತೆಗದುಕೊಂಡಿದ್ದಾರೆ ಎಂದಷ್ಟೇ ಹೇಳಿದರು.</p><p>ಈ ನಡುವೆ ಅದೇನೇ ಆದರೂ ಭಾರತ ತಂಡವನ್ನು ಸೋಲಿಸಿ ಎಂದು ಪಾಕಿಸ್ತಾನ ತಂಡಕ್ಕೆ ಪಿಸಿಬಿ ಅಧ್ಯಕ್ಷ ಮೊಹ್ಸಿನ್ ನಖ್ವಿ ತಾಕೀತು ಮಾಡಿದ್ದಾರೆ.</p><p>ಕಳೆದ ರಾತ್ರಿ, ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಪಾಕಿಸ್ತಾನ ಕ್ರಿಕೆಟ್ ತಂಡವನ್ನು ಭೇಟಿಯಾದ ನಖ್ವಿ, ಟೀಕಾಕಾರರನ್ನು ಸುಮ್ಮನಿರಿಸಲು, ಯಾವುದೇ ಸಂದರ್ಭದಲ್ಲೂ ಭಾರತ ವಿರುದ್ಧದ ನಿರ್ಣಾಯಕ ಪಂದ್ಯದಲ್ಲಿ ಗೆಲುವು ಸಾಧಿಸಬೇಕು ಎಂದು ಒತ್ತಾಯಿಸಿದ್ದಾರೆ. ಈ ಪಂದ್ಯದಲ್ಲಿ ಸೋತರೆ ಪಾಕಿಸ್ತಾನ ಟೂರ್ನಿಯಿಂದ ಹೊರಬೀಳಲಿದೆ.</p><p>ತಂಡದ ಸುಮಾರು ಎರಡು ಗಂಟೆಗಳ ಅಭ್ಯಾಸದ ಸಮಯವನ್ನು ನಖ್ವಿ ಆಗಮನದ ಬಳಿಕ ಒಂದು ಗಂಟೆಗೆ ಸ್ಥಗಿತಗೊಳಿಸಲಾಯಿತು. ನಾಯಕ ಮೊಹಮ್ಮದ್ ರಿಜ್ವಾನ್ ಮತ್ತು ಮುಖ್ಯ ಕೋಚ್ ಅಇಬ್ ಜಾವೇದ್ ಅವರನ್ನು ಭೇಟಿ ಮಾಡಿದ ನಖ್ವಿ ಸುದೀರ್ಘ ಚರ್ಚೆ ನಡೆಸಿದರು.</p><p>ವೇಗಿಗಳಾದ ಶಾಹೀನ್ ಶಾ ಆಫ್ರಿದಿ ಮತ್ತು ಹ್ಯಾರಿಸ್ ರೌಫ್ ಅವರೊಂದಿಗೂ ಸಮಾಲೋಚನೆ ನಡೆಸಿದ್ದು ಕಂಡುಬಂದಿದೆ.</p><p>ನಂತರ, ಮಾಧ್ಯಮಗಳ ಜೊತೆ ಮಾತತಡಿದ ನಖ್ವಿ, ಪಾಕಿಸ್ತಾನ ತಂಡ ಭಾರತವನ್ನು ಎದುರಿಸಲು ಮತ್ತು ಉತ್ತಮ ಪ್ರದರ್ಶನ ನೀಡಲು ಸಿದ್ಧವಾಗಿದೆ ಎಂದು ಹೇಳಿದ್ದಾರೆ.</p><p>ನಮ್ಮ ತಂಡವು ಸಂಪೂರ್ಣವಾಗಿ ಸಿದ್ಧವಾಗಿದೆ ಮತ್ತು ನನ್ನ ಅಭಿಪ್ರಾಯದಲ್ಲಿ ಅವರು ಫಾರ್ಮ್ನಲ್ಲಿದ್ದಾರೆ. ಗೆದ್ದರೂ, ಸೋತರೂ ನಾವು ತಂಡದೊಂದಿಗಿದ್ದೇವೆ ಎಂದು ಅವರು ಹೇಳಿದ್ದಾರೆ.</p> .Champions Trophy | IND vs PAK: ಮರಳುಗಾಡಿನಲ್ಲಿ ಭಾರತ–ಪಾಕ್ ಹಣಾಹಣಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದುಬೈ</strong>: ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಪಂದ್ಯಾವಳಿಯ ಇಂದಿನ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾಗುತ್ತಿವೆ.</p><p>ಈ ನಡುವೆ, ಪಾಕಿಸ್ತಾನದ ಸ್ಟಾರ್ ಬ್ಯಾಟರ್ ಬಾಬರ್ ಆಜಂ ಅವರು ತಂಡದ ತರಬೇತಿಗೆ ಗೈರಾಗಿದ್ದಾರೆ. ಹಾಗಾಗಿ, ಭಾರತ ವಿರುದ್ಧದ ಪಂದ್ಯದಲ್ಲಿ ಅವರು ಆಡುವುದು ಅನುಮಾನ ಎನ್ನಲಾಗುತ್ತಿದೆ. ಶನಿವಾರ ಸಂಜೆ ನಡೆದ ಅಭ್ಯಾಸದಲ್ಲಿ ಅವರು ಕಾಣದ ಹಿನ್ನೆಲೆಯಲ್ಲಿ ಅವರನ್ನು ಪಂದ್ಯಕ್ಕೆ ಪರಿಗಣಿಸಲಾಗುವುದಿಲ್ಲ ಎಂಬ ಊಹಾಪೋಹಗಳು ದಟ್ಟವಾಗಿವೆ. </p><p>ಆರಂಭಿಕ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ 94 ಎಸೆತಗಳಲ್ಲಿ 64 ರನ್ ಗಳಿಸಿದ್ದಕ್ಕಾಗಿ ಆಜಂ ಸಾಕಷ್ಟು ಟೀಕೆಗಳನ್ನು ಎದುರಿಸಿದ್ದರು. ಕರಾಚಿಯಲ್ಲಿ ನಡೆದ ಈ ಪಂದ್ಯದಲ್ಲಿ ಪಾಕಿಸ್ತಾನ 60 ರನ್ಗಳಿಂದ ಸೋಲುಂಡಿತ್ತು.</p><p>ಅಭ್ಯಾಸದ ನಂತರ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಮಧ್ಯಂತರ ಮುಖ್ಯ ಕೋಚ್ ಅಕಿಬ್ ಜಾವೇದ್, ಅಭ್ಯಾಸಕ್ಕೆ ಆಜಂ ಅನುಪಸ್ಥಿತಿ ಬಗ್ಗೆ ಯಾವುದೇ ನಿರ್ದಿಷ್ಟ ಕಾರಣವನ್ನು ನೀಡಲಿಲ್ಲ. ಮಾಜಿ ನಾಯಕ ವಿಶ್ರಾಂತಿ ತೆಗದುಕೊಂಡಿದ್ದಾರೆ ಎಂದಷ್ಟೇ ಹೇಳಿದರು.</p><p>ಈ ನಡುವೆ ಅದೇನೇ ಆದರೂ ಭಾರತ ತಂಡವನ್ನು ಸೋಲಿಸಿ ಎಂದು ಪಾಕಿಸ್ತಾನ ತಂಡಕ್ಕೆ ಪಿಸಿಬಿ ಅಧ್ಯಕ್ಷ ಮೊಹ್ಸಿನ್ ನಖ್ವಿ ತಾಕೀತು ಮಾಡಿದ್ದಾರೆ.</p><p>ಕಳೆದ ರಾತ್ರಿ, ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಪಾಕಿಸ್ತಾನ ಕ್ರಿಕೆಟ್ ತಂಡವನ್ನು ಭೇಟಿಯಾದ ನಖ್ವಿ, ಟೀಕಾಕಾರರನ್ನು ಸುಮ್ಮನಿರಿಸಲು, ಯಾವುದೇ ಸಂದರ್ಭದಲ್ಲೂ ಭಾರತ ವಿರುದ್ಧದ ನಿರ್ಣಾಯಕ ಪಂದ್ಯದಲ್ಲಿ ಗೆಲುವು ಸಾಧಿಸಬೇಕು ಎಂದು ಒತ್ತಾಯಿಸಿದ್ದಾರೆ. ಈ ಪಂದ್ಯದಲ್ಲಿ ಸೋತರೆ ಪಾಕಿಸ್ತಾನ ಟೂರ್ನಿಯಿಂದ ಹೊರಬೀಳಲಿದೆ.</p><p>ತಂಡದ ಸುಮಾರು ಎರಡು ಗಂಟೆಗಳ ಅಭ್ಯಾಸದ ಸಮಯವನ್ನು ನಖ್ವಿ ಆಗಮನದ ಬಳಿಕ ಒಂದು ಗಂಟೆಗೆ ಸ್ಥಗಿತಗೊಳಿಸಲಾಯಿತು. ನಾಯಕ ಮೊಹಮ್ಮದ್ ರಿಜ್ವಾನ್ ಮತ್ತು ಮುಖ್ಯ ಕೋಚ್ ಅಇಬ್ ಜಾವೇದ್ ಅವರನ್ನು ಭೇಟಿ ಮಾಡಿದ ನಖ್ವಿ ಸುದೀರ್ಘ ಚರ್ಚೆ ನಡೆಸಿದರು.</p><p>ವೇಗಿಗಳಾದ ಶಾಹೀನ್ ಶಾ ಆಫ್ರಿದಿ ಮತ್ತು ಹ್ಯಾರಿಸ್ ರೌಫ್ ಅವರೊಂದಿಗೂ ಸಮಾಲೋಚನೆ ನಡೆಸಿದ್ದು ಕಂಡುಬಂದಿದೆ.</p><p>ನಂತರ, ಮಾಧ್ಯಮಗಳ ಜೊತೆ ಮಾತತಡಿದ ನಖ್ವಿ, ಪಾಕಿಸ್ತಾನ ತಂಡ ಭಾರತವನ್ನು ಎದುರಿಸಲು ಮತ್ತು ಉತ್ತಮ ಪ್ರದರ್ಶನ ನೀಡಲು ಸಿದ್ಧವಾಗಿದೆ ಎಂದು ಹೇಳಿದ್ದಾರೆ.</p><p>ನಮ್ಮ ತಂಡವು ಸಂಪೂರ್ಣವಾಗಿ ಸಿದ್ಧವಾಗಿದೆ ಮತ್ತು ನನ್ನ ಅಭಿಪ್ರಾಯದಲ್ಲಿ ಅವರು ಫಾರ್ಮ್ನಲ್ಲಿದ್ದಾರೆ. ಗೆದ್ದರೂ, ಸೋತರೂ ನಾವು ತಂಡದೊಂದಿಗಿದ್ದೇವೆ ಎಂದು ಅವರು ಹೇಳಿದ್ದಾರೆ.</p> .Champions Trophy | IND vs PAK: ಮರಳುಗಾಡಿನಲ್ಲಿ ಭಾರತ–ಪಾಕ್ ಹಣಾಹಣಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>