<p><strong>ನವದೆಹಲಿ:</strong> ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಆಡಲು ಅವಕಾಶ ವಂಚಿತವಾಗಿರುವ ಬಾಂಗ್ಲಾದೇಶದ ಕ್ರಿಕೆಟಿಗ ಮುಸ್ತಫಿಝುರ್ ರೆಹಮಾನ್, ಪಾಕಿಸ್ತಾನ ಸೂಪರ್ ಲೀಗ್ (ಪಿಎಸ್ಎಲ್) ಟೂರ್ನಿಗೆ ಸೇರ್ಪಡೆಯಾಗಿದ್ದಾರೆ ಎಂದು ವರದಿಯಾಗಿದೆ. </p><p>ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಈ ಕುರಿತು ತನ್ನ ಅಧಿಕೃತ ಪಿಎಸ್ಎಲ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ. ಮುಂದಿನ ಆವೃತ್ತಿಯಲ್ಲಿ ಮುಸ್ತಫಿಝುರ್ ರೆಹಮಾನ್ ಪಿಎಸ್ಎಲ್ನಲ್ಲಿ ಆಡಲಿದ್ದಾರೆ ಎಂದು ಹೇಳಿದೆ. </p>.T20 WC | ಭಾರತದಲ್ಲಿ ಆಡಿ ಅಥವಾ ಅಂಕ ಕಳೆದುಕೊಳ್ಳಿ; ಬಾಂಗ್ಲಾಕ್ಕೆ ಐಸಿಸಿ: ವರದಿ.Bangladesh Unrest: ಈವರೆಗೆ 7 ಹಿಂದೂ ವ್ಯಕ್ತಿಗಳ ಹತ್ಯೆ; ಇಲ್ಲಿದೆ ವಿವರ. <p>ಪಿಎಸ್ಎಲ್ನಲ್ಲಿ ಮುಸ್ತಫಿಝುರ್ ರೆಹಮಾನ್ ಯಾವ ತಂಡವನ್ನು ಸೇರಿಕೊಳ್ಳಲಿದ್ದಾರೆ ಎಂಬುದು ಹರಾಜಿನ ಬಳಿಕವಷ್ಟೇ ಖಚಿತವಾಗಲಿದೆ. </p><p>ಭಾರತ ಹಾಗೂ ಬಾಂಗ್ಲಾದೇಶದ ನಡುವಣ ರಾಜತಾಂತ್ರಿಕ ಬಾಂಧವ್ಯ ಹದಗೆಟ್ಟಿರುವ ನಡುವೆ ಜಗತ್ತಿನ ಶ್ರೀಮಂತ ಕ್ರಿಕೆಟ್ ಲೀಗ್ನಿಂದ ತನ್ನ ಆಟಗಾರ ಮುಸ್ತಫಿಝುರ್ ರೆಹಮಾನ್ ಅವರನ್ನು ಕೈಬಿಡುವಂತೆ ಕೋಲ್ಕತ್ತ ನೈಟ್ ರೈಡರ್ಸ್ (ಕೆಕಆರ್) ಫ್ರಾಂಚೈಸಿಗೆ ಬಿಸಿಸಿಐ ಸೂಚಿಸಿತ್ತು. ಕೆಕೆಆರ್ನಲ್ಲಿ ಮುಸ್ತಾಫಿಜುರ್ ₹9.2 ಕೋಟಿ ಬೆಲೆ ಹೊಂದಿದ್ದರು. </p><p>ಇದನ್ನು ಪ್ರತಿಭಟಿಸಿ ಭಾರತದಲ್ಲಿ ಟಿ20 ವಿಶ್ವಕಪ್ ಆಡಲು ನಿರಾಕರಿಸಿರುವ ಬಾಂಗ್ಲಾದೇಶ, ಮುಂಬರುವ ಐಪಿಎಲ್ ಪ್ರಸಾರವನ್ನು ನಿಷೇಧಿಸುವುದಾಗಿ ಹೇಳಿತ್ತು. ಭದ್ರತಾ ಕಾರಣದಿಂದ ತನ್ನ ಆಟಗಾರರನ್ನು ಭಾರತಕ್ಕೆ ಕಳುಹಿಸುವುದು ಸೂಕ್ತವಲ್ಲ ಎಂದು ಹೇಳಿತ್ತು. </p><p>ಏತನ್ಮಧ್ಯೆ ಭಾರತದಿಂದ ಶ್ರೀಲಂಕಾಕ್ಕೆ ಟಿ20 ವಿಶ್ವಕಪ್ ಪಂದ್ಯಗಳನ್ನು ಸ್ಥಳಾಂತರಿಸುವ ಬಗ್ಗೆ ಚರ್ಚಿಸಲು ಐಸಿಸಿ ಹಾಗೂ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ನಡುವೆ ಮಂಗಳವಾರ ಯೋಜಿಸಲಾದ ಆನ್ಲೈನ್ ಮಾತುಕತೆಯು ನಡೆದಿಲ್ಲ ಎಂದು ತಿಳಿದು ಬಂದಿದೆ. </p><p>ಐಸಿಸಿ ಟ್ವೆಂಟಿ-20 ವಿಶ್ವಕಪ್ ಫ್ರೆಬ್ರುವರಿ 7ರಿಂದ ಆರಂಭವಾಗಿ ಮಾರ್ಚ್ 8ರವರೆಗೆ ನಡೆಯಲಿದೆ. ಬಹುನಿರೀಕ್ಷಿತ ವಿಶ್ವಕಪ್ ಆರಂಭಕ್ಕೆ ಒಂದು ತಿಂಗಳು ಮಾತ್ರ ಬಾಕಿ ಉಳಿದಿರುವಂತೆಯೇ ಈ ಎಲ್ಲ ಬೆಳವಣಿಗೆಗಳು ಕಂಡುಬಂದಿವೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಆಡಲು ಅವಕಾಶ ವಂಚಿತವಾಗಿರುವ ಬಾಂಗ್ಲಾದೇಶದ ಕ್ರಿಕೆಟಿಗ ಮುಸ್ತಫಿಝುರ್ ರೆಹಮಾನ್, ಪಾಕಿಸ್ತಾನ ಸೂಪರ್ ಲೀಗ್ (ಪಿಎಸ್ಎಲ್) ಟೂರ್ನಿಗೆ ಸೇರ್ಪಡೆಯಾಗಿದ್ದಾರೆ ಎಂದು ವರದಿಯಾಗಿದೆ. </p><p>ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಈ ಕುರಿತು ತನ್ನ ಅಧಿಕೃತ ಪಿಎಸ್ಎಲ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ. ಮುಂದಿನ ಆವೃತ್ತಿಯಲ್ಲಿ ಮುಸ್ತಫಿಝುರ್ ರೆಹಮಾನ್ ಪಿಎಸ್ಎಲ್ನಲ್ಲಿ ಆಡಲಿದ್ದಾರೆ ಎಂದು ಹೇಳಿದೆ. </p>.T20 WC | ಭಾರತದಲ್ಲಿ ಆಡಿ ಅಥವಾ ಅಂಕ ಕಳೆದುಕೊಳ್ಳಿ; ಬಾಂಗ್ಲಾಕ್ಕೆ ಐಸಿಸಿ: ವರದಿ.Bangladesh Unrest: ಈವರೆಗೆ 7 ಹಿಂದೂ ವ್ಯಕ್ತಿಗಳ ಹತ್ಯೆ; ಇಲ್ಲಿದೆ ವಿವರ. <p>ಪಿಎಸ್ಎಲ್ನಲ್ಲಿ ಮುಸ್ತಫಿಝುರ್ ರೆಹಮಾನ್ ಯಾವ ತಂಡವನ್ನು ಸೇರಿಕೊಳ್ಳಲಿದ್ದಾರೆ ಎಂಬುದು ಹರಾಜಿನ ಬಳಿಕವಷ್ಟೇ ಖಚಿತವಾಗಲಿದೆ. </p><p>ಭಾರತ ಹಾಗೂ ಬಾಂಗ್ಲಾದೇಶದ ನಡುವಣ ರಾಜತಾಂತ್ರಿಕ ಬಾಂಧವ್ಯ ಹದಗೆಟ್ಟಿರುವ ನಡುವೆ ಜಗತ್ತಿನ ಶ್ರೀಮಂತ ಕ್ರಿಕೆಟ್ ಲೀಗ್ನಿಂದ ತನ್ನ ಆಟಗಾರ ಮುಸ್ತಫಿಝುರ್ ರೆಹಮಾನ್ ಅವರನ್ನು ಕೈಬಿಡುವಂತೆ ಕೋಲ್ಕತ್ತ ನೈಟ್ ರೈಡರ್ಸ್ (ಕೆಕಆರ್) ಫ್ರಾಂಚೈಸಿಗೆ ಬಿಸಿಸಿಐ ಸೂಚಿಸಿತ್ತು. ಕೆಕೆಆರ್ನಲ್ಲಿ ಮುಸ್ತಾಫಿಜುರ್ ₹9.2 ಕೋಟಿ ಬೆಲೆ ಹೊಂದಿದ್ದರು. </p><p>ಇದನ್ನು ಪ್ರತಿಭಟಿಸಿ ಭಾರತದಲ್ಲಿ ಟಿ20 ವಿಶ್ವಕಪ್ ಆಡಲು ನಿರಾಕರಿಸಿರುವ ಬಾಂಗ್ಲಾದೇಶ, ಮುಂಬರುವ ಐಪಿಎಲ್ ಪ್ರಸಾರವನ್ನು ನಿಷೇಧಿಸುವುದಾಗಿ ಹೇಳಿತ್ತು. ಭದ್ರತಾ ಕಾರಣದಿಂದ ತನ್ನ ಆಟಗಾರರನ್ನು ಭಾರತಕ್ಕೆ ಕಳುಹಿಸುವುದು ಸೂಕ್ತವಲ್ಲ ಎಂದು ಹೇಳಿತ್ತು. </p><p>ಏತನ್ಮಧ್ಯೆ ಭಾರತದಿಂದ ಶ್ರೀಲಂಕಾಕ್ಕೆ ಟಿ20 ವಿಶ್ವಕಪ್ ಪಂದ್ಯಗಳನ್ನು ಸ್ಥಳಾಂತರಿಸುವ ಬಗ್ಗೆ ಚರ್ಚಿಸಲು ಐಸಿಸಿ ಹಾಗೂ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ನಡುವೆ ಮಂಗಳವಾರ ಯೋಜಿಸಲಾದ ಆನ್ಲೈನ್ ಮಾತುಕತೆಯು ನಡೆದಿಲ್ಲ ಎಂದು ತಿಳಿದು ಬಂದಿದೆ. </p><p>ಐಸಿಸಿ ಟ್ವೆಂಟಿ-20 ವಿಶ್ವಕಪ್ ಫ್ರೆಬ್ರುವರಿ 7ರಿಂದ ಆರಂಭವಾಗಿ ಮಾರ್ಚ್ 8ರವರೆಗೆ ನಡೆಯಲಿದೆ. ಬಹುನಿರೀಕ್ಷಿತ ವಿಶ್ವಕಪ್ ಆರಂಭಕ್ಕೆ ಒಂದು ತಿಂಗಳು ಮಾತ್ರ ಬಾಕಿ ಉಳಿದಿರುವಂತೆಯೇ ಈ ಎಲ್ಲ ಬೆಳವಣಿಗೆಗಳು ಕಂಡುಬಂದಿವೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>