<p><strong>ಢಾಕಾ:</strong>ಬಾಂಗ್ಲಾದೇಶಕ್ಕೆ ಐಸಿಸಿಯ ಮೊದಲ ಟ್ರೋಫಿ ಗೆದ್ದು ಕೊಟ್ಟ 19 ವರ್ಷದೊಳಗಿನವರ ತಂಡಕ್ಕೆಸಾರ್ವಜನಿಕ ಸಮಾರಂಭದ ಮೂಲಕ ಸ್ವಾಗತ ಕೋರಲು ಅಲ್ಲಿನ ಸರ್ಕಾರ ನಿರ್ಧರಿಸಿದೆ.</p>.<p>ಪ್ರಧಾನಿ ಶೇಖ್ ಹಸಿನಾ ನೇತೃತ್ವದಲ್ಲಿ ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿಈ ನಿರ್ಧಾರ ಕೈಗೊಳ್ಳಲಾಗಿದೆ.‘ತಂಡವು ಸ್ವದೇಶಕ್ಕೆ ಮರಳಿದ ಬಳಿಕ ದಿನಾಂಕವನ್ನು ನಿಗದಿಪಡಿಸಲಾಗುವುದು. ಕಾರ್ಯಕ್ರಮವನ್ನು ಸುಹ್ರವರ್ದಿ ಉದ್ಯಾನದಲ್ಲಿ ಆಯೋಜಿಸಲಾಗುವುದು’ ಎಂದು ಅಲ್ಲಿನ ರಸ್ತೆ ಮತ್ತು ಸಾರಿಗೆ ಸಚಿವ ಒಬೈದುಲ್ ಕ್ವಾದೆರ್ ತಿಳಿಸಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/sports/cricket/icc-has-taken-bangladesh-aggressive-celebrations-very-seriously-indian-team-manager-anil-patel-bcci-704288.html" target="_blank">ಮೈದಾನದಲ್ಲೇ ಉರುಳಾಡಿ, ಉದ್ಧಟತನ ತೋರಿದ ಚಾಂಪಿಯನ್ನರು: ‘ಐಸಿಸಿಯಿಂದ ಗಂಭೀರ ಕ್ರಮ’</a></p>.<p>ಈ ಬಾರಿಯ 19 ವರ್ಷದೊಳಗಿನವರ ವಿಶ್ವಕಪ್ ಟೂರ್ನಿಯು ದಕ್ಷಿಣ ಆಫ್ರಿಕಾದಲ್ಲಿ ನಡೆಯಿತು.ಯುವ ವಿಶ್ವಕಪ್ನಲ್ಲಿ 4 ಬಾರಿಯ ಚಾಂಪಿಯನ್ ಭಾರತ ಮತ್ತು ಬಾಂಗ್ಲಾದೇಶ ತಂಡಗಳು ಫೈನಲ್ನಲ್ಲಿ ಮುಖಾಮುಖಿಯಾಗಿದ್ದವು. ಮೇಲ್ನೋಟಕ್ಕೆ ಭಾರತವೇ ಗೆಲ್ಲುವ ನೆಚ್ಚಿನ ತಂಡ ಎನಿಸಿತ್ತು.</p>.<p>ಟಾಸ್ ಗೆದ್ದರೂ ಬೌಲಿಂಗ್ ಮಾಡುವ ನಿರ್ಧಾರ ಕೈಗೊಂಡ ಬಾಂಗ್ಲಾ,ಭಾರತವನ್ನು ಕೇವಲ 177 ರನ್ ಗಳಿಗೆ ನಿಯಂತ್ರಿಸಿತ್ತು.ಈ ಮೊತ್ತ ಬೆನ್ನಟ್ಟಿದ ಬಾಂಗ್ಲಾ ತಂಡ 42.1 ಓವರ್ಗಳಲ್ಲಿ 170 ರನ್ ಗಳಿಸಿದ್ದಾಗ ಮಳೆ ಸುರಿಯಿತು.ಹೀಗಾಗಿ ಡಕ್ವರ್ಥ್ ಲೂಯಿಸ್ ನಿಯಮದನ್ವಯ ಬಾಂಗ್ಲಾಗೆ 3 ವಿಕೆಟ್ ಜಯ ಘೋಷಿಸಲಾಯಿತು.</p>.<p><strong>ಇದನ್ನೂ ಓದಿ:</strong><a href="https://www.prajavani.net/sports/cricket/yashasvi-jaiswal-gets-most-runs-and-ravi-bishnoi-gets-most-wickets-in-2020-u19-world-cup-priyam-garg-704248.html" target="_blank">ಯುವ ವಿಶ್ವಕಪ್ | ಹೆಚ್ಚು ರನ್ ಗಳಿಸಿದ ಜೈಸ್ವಾಲ್, ಅಧಿಕ ವಿಕೆಟ್ ಪಡೆದ ಬಿಷ್ಣೋಯಿ</a></p>.<p>ಪಂದ್ಯದ ಬಳಿಕ ಸಂಭ್ರಮಾಚರಣೆ ನಡೆಸುವ ಭರದಲ್ಲಿ ಬಾಂಗ್ಲಾ ಆಟಗಾರರು ಉದ್ಧಟತನದಿಂದ ವರ್ತಿಸಿದ್ದರು. ಈ ಕುರಿತುಆ ತಂಡದ ನಾಯಕ ಅಕ್ಬರ್ ಅಲಿ, ‘ಇದೊಂದು ದುರದೃಷ್ಟಕರ ಘಟನೆ’ ಎನ್ನುವ ಮೂಲಕ ಬೇಸರ ವ್ಯಕ್ತಪಡಿಸಿದ್ದರು. ಬಾಂಗ್ಲಾ ವರ್ತನೆಯನ್ನು ಖಂಡಿಸಿದ್ದ ಭಾರತ ತಂಡದ ನಾಯಕ ಪ್ರಿಯಂ ಗರ್ಗ್, ‘ಇದು ಅಸಹ್ಯಕರ’ ಎಂದು ಕಿಡಿ ಕಾರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಢಾಕಾ:</strong>ಬಾಂಗ್ಲಾದೇಶಕ್ಕೆ ಐಸಿಸಿಯ ಮೊದಲ ಟ್ರೋಫಿ ಗೆದ್ದು ಕೊಟ್ಟ 19 ವರ್ಷದೊಳಗಿನವರ ತಂಡಕ್ಕೆಸಾರ್ವಜನಿಕ ಸಮಾರಂಭದ ಮೂಲಕ ಸ್ವಾಗತ ಕೋರಲು ಅಲ್ಲಿನ ಸರ್ಕಾರ ನಿರ್ಧರಿಸಿದೆ.</p>.<p>ಪ್ರಧಾನಿ ಶೇಖ್ ಹಸಿನಾ ನೇತೃತ್ವದಲ್ಲಿ ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿಈ ನಿರ್ಧಾರ ಕೈಗೊಳ್ಳಲಾಗಿದೆ.‘ತಂಡವು ಸ್ವದೇಶಕ್ಕೆ ಮರಳಿದ ಬಳಿಕ ದಿನಾಂಕವನ್ನು ನಿಗದಿಪಡಿಸಲಾಗುವುದು. ಕಾರ್ಯಕ್ರಮವನ್ನು ಸುಹ್ರವರ್ದಿ ಉದ್ಯಾನದಲ್ಲಿ ಆಯೋಜಿಸಲಾಗುವುದು’ ಎಂದು ಅಲ್ಲಿನ ರಸ್ತೆ ಮತ್ತು ಸಾರಿಗೆ ಸಚಿವ ಒಬೈದುಲ್ ಕ್ವಾದೆರ್ ತಿಳಿಸಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/sports/cricket/icc-has-taken-bangladesh-aggressive-celebrations-very-seriously-indian-team-manager-anil-patel-bcci-704288.html" target="_blank">ಮೈದಾನದಲ್ಲೇ ಉರುಳಾಡಿ, ಉದ್ಧಟತನ ತೋರಿದ ಚಾಂಪಿಯನ್ನರು: ‘ಐಸಿಸಿಯಿಂದ ಗಂಭೀರ ಕ್ರಮ’</a></p>.<p>ಈ ಬಾರಿಯ 19 ವರ್ಷದೊಳಗಿನವರ ವಿಶ್ವಕಪ್ ಟೂರ್ನಿಯು ದಕ್ಷಿಣ ಆಫ್ರಿಕಾದಲ್ಲಿ ನಡೆಯಿತು.ಯುವ ವಿಶ್ವಕಪ್ನಲ್ಲಿ 4 ಬಾರಿಯ ಚಾಂಪಿಯನ್ ಭಾರತ ಮತ್ತು ಬಾಂಗ್ಲಾದೇಶ ತಂಡಗಳು ಫೈನಲ್ನಲ್ಲಿ ಮುಖಾಮುಖಿಯಾಗಿದ್ದವು. ಮೇಲ್ನೋಟಕ್ಕೆ ಭಾರತವೇ ಗೆಲ್ಲುವ ನೆಚ್ಚಿನ ತಂಡ ಎನಿಸಿತ್ತು.</p>.<p>ಟಾಸ್ ಗೆದ್ದರೂ ಬೌಲಿಂಗ್ ಮಾಡುವ ನಿರ್ಧಾರ ಕೈಗೊಂಡ ಬಾಂಗ್ಲಾ,ಭಾರತವನ್ನು ಕೇವಲ 177 ರನ್ ಗಳಿಗೆ ನಿಯಂತ್ರಿಸಿತ್ತು.ಈ ಮೊತ್ತ ಬೆನ್ನಟ್ಟಿದ ಬಾಂಗ್ಲಾ ತಂಡ 42.1 ಓವರ್ಗಳಲ್ಲಿ 170 ರನ್ ಗಳಿಸಿದ್ದಾಗ ಮಳೆ ಸುರಿಯಿತು.ಹೀಗಾಗಿ ಡಕ್ವರ್ಥ್ ಲೂಯಿಸ್ ನಿಯಮದನ್ವಯ ಬಾಂಗ್ಲಾಗೆ 3 ವಿಕೆಟ್ ಜಯ ಘೋಷಿಸಲಾಯಿತು.</p>.<p><strong>ಇದನ್ನೂ ಓದಿ:</strong><a href="https://www.prajavani.net/sports/cricket/yashasvi-jaiswal-gets-most-runs-and-ravi-bishnoi-gets-most-wickets-in-2020-u19-world-cup-priyam-garg-704248.html" target="_blank">ಯುವ ವಿಶ್ವಕಪ್ | ಹೆಚ್ಚು ರನ್ ಗಳಿಸಿದ ಜೈಸ್ವಾಲ್, ಅಧಿಕ ವಿಕೆಟ್ ಪಡೆದ ಬಿಷ್ಣೋಯಿ</a></p>.<p>ಪಂದ್ಯದ ಬಳಿಕ ಸಂಭ್ರಮಾಚರಣೆ ನಡೆಸುವ ಭರದಲ್ಲಿ ಬಾಂಗ್ಲಾ ಆಟಗಾರರು ಉದ್ಧಟತನದಿಂದ ವರ್ತಿಸಿದ್ದರು. ಈ ಕುರಿತುಆ ತಂಡದ ನಾಯಕ ಅಕ್ಬರ್ ಅಲಿ, ‘ಇದೊಂದು ದುರದೃಷ್ಟಕರ ಘಟನೆ’ ಎನ್ನುವ ಮೂಲಕ ಬೇಸರ ವ್ಯಕ್ತಪಡಿಸಿದ್ದರು. ಬಾಂಗ್ಲಾ ವರ್ತನೆಯನ್ನು ಖಂಡಿಸಿದ್ದ ಭಾರತ ತಂಡದ ನಾಯಕ ಪ್ರಿಯಂ ಗರ್ಗ್, ‘ಇದು ಅಸಹ್ಯಕರ’ ಎಂದು ಕಿಡಿ ಕಾರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>