ಪಂದ್ಯದ ಬಳಿಕ ಸಂಭ್ರಮಾಚರಣೆ ನಡೆಸುವ ಭರದಲ್ಲಿ ಬಾಂಗ್ಲಾ ಆಟಗಾರರು ಉದ್ಧಟತನದಿಂದ ವರ್ತಿಸಿದ್ದರು. ಈ ಕುರಿತುಆ ತಂಡದ ನಾಯಕ ಅಕ್ಬರ್ ಅಲಿ, ‘ಇದೊಂದು ದುರದೃಷ್ಟಕರ ಘಟನೆ’ ಎನ್ನುವ ಮೂಲಕ ಬೇಸರ ವ್ಯಕ್ತಪಡಿಸಿದ್ದರು. ಬಾಂಗ್ಲಾ ವರ್ತನೆಯನ್ನು ಖಂಡಿಸಿದ್ದ ಭಾರತ ತಂಡದ ನಾಯಕ ಪ್ರಿಯಂ ಗರ್ಗ್, ‘ಇದು ಅಸಹ್ಯಕರ’ ಎಂದು ಕಿಡಿ ಕಾರಿದ್ದರು.