ರಾಹುಲ್ ಅವರು ತಮ್ಮ ಬ್ಯಾಟ್ ಹರಾಜಿಗಿಟ್ಟಿದ್ದು, ಅದರಿಂದ ಬರುವ ಹಣವನ್ನು ಪರಿಹಾರ ನಿಧಿಗೆ ನೀಡಲಿದ್ದಾರೆ. ಕುಲದೀಪ್ ಯಾದವ್ ತಮ್ಮ ಹ್ಯಾಟ್ರಿಕ್ ಸಾಧನೆಯ ಚೆಂಡು, ಮಹಿಳಾ ತಂಡದ ನಾಯಕಿ ಹರ್ಮನ್ಪ್ರೀತ್ ಸಿಂಗ್ ತಮ್ಮ ಕ್ರಿಕೆಟ್ ಪೋಷಾಕು, ಸಾನಿಯಾ ಅವರು ಟೆನಿಸ್ ರೆಕೆಟ್ ಮತ್ತು ವೃದ್ಧಿಮಾನ್ ಸಹಾ ಅವರು ಟೀಶರ್ಟ್ ಹರಾಜಿಗಿಟ್ಟಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೊ ಸಂದೇಶ ನೀಡಿರುವ ಎಲ್ಲರೂ ಪರಿಹಾರ ನಿಧಿಗೆ ಕೈಜೋಡಿಸುವಂತೆ ಮನವಿ ಮಾಡಿದ್ದಾರೆ.