ರವೀಂದ್ರ ಜಡೇಜ ಅವರಿಗೆ ಸ್ವತಃ ಮಿಂಚಲು ಆಗಲಿಲ್ಲ. ತಂಡವನ್ನು ಸಮರ್ಪಕವಾಗಿ ಮುನ್ನಡೆಸುವುದಕ್ಕೂ ಸಾಧ್ಯವಾಗಲಿಲ್ಲ. ಅನುಭವಿ ಆಟಗಾರರಾದ ಮಹೇಂದ್ರ ಸಿಂಗ್ ಧೋನಿ, ರಾಬಿನ್ ಉತ್ತಪ್ಪ, ಅಂಬಟಿ ರಾಯುಡು ಮತ್ತು ಡ್ವೇನ್ ಬ್ರಾವೊ ಕೆಲವು ಪಂದ್ಯಗಳಲ್ಲಿ ಮಿಂಚಿದ್ದರೂ ಗೆಲುವಿನ ಕಾಣಿಕೆ ನೀಡುವಲ್ಲಿ ವಿಫಲರಾಗಿದ್ದಾರೆ. ತಂಡಕ್ಕೆ ಒಂದು ಬಾರಿ ಮಾತ್ರ 200 ರನ್ಗಳ ಮೊತ್ತ ದಾಟಲು ಸಾಧ್ಯವಾಗಿದೆ. ಉಳಿದ ಮೂರು ಪಂದ್ಯಗಳಲ್ಲಿ ಕಳಪೆ ಬ್ಯಾಟಿಂಗ್ ಮಾಡಿದೆ.