‘ನಾನು ಈಗ ಹತಾಶನಾಗಿದ್ದು, ಖಿನ್ನತೆ ಮತ್ತು ಒತ್ತಡದಲ್ಲಿದ್ದೇನೆ. ನಮ್ಮ ತಂಡದ ನಾಯಕ ಕೃಣಾಲ್ ಪಾಂಡ್ಯ ಕೆಲವು ದಿನಗಳಿಂದ ನನ್ನನ್ನು, ಸಹ ಆಟಗಾರರ ಎದುರೇ ನಿಂದಿಸಿದ್ದಾರೆ. ವಡೋದರಾ ಕ್ರೀಡಾಂಗಣಕ್ಕೆ ಅಭ್ಯಾಸಕ್ಕೆ ಬಂದಿರುವ ಇತರ ರಾಜ್ಯಗಳ ಆಟಗಾರರ ಎದುರೂ ನನ್ನೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ’ ಎಂದು ಬಿಸಿಎಗೆ ಬರೆದಿರುವ ಪತ್ರದಲ್ಲಿ ಹೂಡಾ ದೂರಿದ್ದಾರೆ.