‘ಮೀರ್ಪುರದಷೇರ್ ಎ ಬಾಂಗ್ಲಾ ಮೈದಾನದಲ್ಲಿ ತಾಲೀಮು ನಡೆಸಲು ಅವಕಾಶ ಮಾಡಿಕೊಡುವಂತೆ ಮುಷ್ಫಿಕುರ್ ಕೇಳಿಕೊಂಡಿದ್ದರು. ಹೊರಾಂಗಣ ಅಭ್ಯಾಸ ನಡೆಸಲು ಇದು ಸೂಕ್ತ ಸಮಯವಲ್ಲ ಎಂಬುದನ್ನು ಅವರಿಗೆ ಮನವರಿಕೆ ಮಾಡಿಕೊಟ್ಟಿದ್ದೇವೆ. ಅಭ್ಯಾಸಕ್ಕಿಂತಲೂಆಟಗಾರರ ಸುರಕ್ಷತೆಯೇ ನಮ್ಮ ಆದ್ಯತೆಯಾಗಿದೆ. ಹೀಗಾಗಿ ಸದ್ಯದ ಮಟ್ಟಿಗೆ ಮನೆಯಲ್ಲೇ ಅಭ್ಯಾಸ ಮಾಡುವಂತೆ ಸಲಹೆ ನೀಡಿದ್ದೇವೆ’ ಎಂದು ಬಿಸಿಬಿ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ನಿಜಾಮುದ್ದೀನ್ ಚೌಧರಿ ತಿಳಿಸಿದ್ದಾರೆ.