<p><strong>ಮುಂಬೈ:</strong> ಚಾಂಪಿಯನ್ಸ್ ಟ್ರೋಫಿಯಲ್ಲಿ ಆಡಲಿರುವ ಭಾರತದ 15 ಸದಸ್ಯರ ಕ್ರಿಕೆಟ್ ತಂಡವನ್ನು ಬಿಸಿಸಿಐ ಶನಿವಾರ ಪ್ರಕಟಿಸಿದೆ.</p><p>ರೋಹಿತ್ ಶರ್ಮಾ ಅವರು ತಂಡವನ್ನು ಮುನ್ನಡೆಸಲಿದ್ದಾರೆ. ಶುಭಮನ್ ಗಿಲ್ ಅವರಿಗೆ ಉಪನಾಯಕನ ಹೊಣೆ ನೀಡಲಾಗಿದೆ. ತಂಡದಲ್ಲಿ ವೇಗದ ಬೌಲರ್ ಮೊಹಮ್ಮದ್ ಸಿರಾಜ್ ಅವರಿಗೆ ಸ್ಥಾನ ನೀಡಲಾಗಿಲ್ಲ.</p><p>ಪ್ರಮುಖ ವೇಗದ ಬೌಲರ್ ಜಸ್ಪ್ರೀತ್ ಬೂಮ್ರಾ ಅವರಿಗೆ ಐಸಿಸಿ ಚಾಂಪಿಯನ್ಸ್ ಟ್ರೋಫಿ ಏಕದಿನ ಕ್ರಿಕೆಟ್ ಟೂರ್ನಿಗೆ ಶನಿವಾರ ಪ್ರಕಟಿಸಲಾದ ಭಾರತ ತಂಡದಲ್ಲಿ ಸ್ಥಾನ ನೀಡಲಾಗಿದೆ. ಫಿಟ್ನೆಸ್ ಮೇಲೆ ಅವರ ಲಭ್ಯತೆ ಅವಲಂಬಿಸಿದೆ. ಪ್ರತಿಭಾನ್ವಿತ ಆರಂಭ ಆಟಗಾರ ಯಶಸ್ವಿ ಜೈಸ್ವಾಲ್ ಮೊದಲ ಬಾರಿಗೆ ಏಕದಿನ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.</p><p>ವೇಗದ ಬೌಲರ್ ಮೊಹಮ್ಮದ್ ಶಮಿ ಕೂಡ ಒಂದು ವರ್ಷದ ನಂತರ ತಂಡಕ್ಕೆ ಮರಳಿದ್ದಾರೆ. ಇತ್ತೀಚಿನ ಆಸ್ಟ್ರೇಲಿಯಾ ಪ್ರವಾಸದ ಕೊನೆಯ ಟೆಸ್ಟ್ (ಸಿಡ್ನಿ) ವೇಳೆ ಬೂಮ್ರಾ ಬೆನ್ನುನೋವಿಗೆ ಒಳಗಾಗಿದ್ದರು. ಆದರೆ ಅಜಿತ್ ಅಗರಕರ್ ನೇತೃತ್ವದ ಆಯ್ಕೆ ಸಮಿತಿಯು 31 ವರ್ಷ ವಯಸ್ಸಿನ ಬೂಮ್ರಾ ಅವರನ್ನು ಇಂಗ್ಲೆಂಡ್ ವಿರುದ್ಧದ ತವರಿನಲ್ಲಿ ನಡೆಯುವ ಏಕದಿನ ಸರಣಿ ಮತ್ತು ಚಾಂಪಿಯನ್ಸ್ ಟ್ರೋಫಿ ತಂಡಕ್ಕೆ ಸೇರ್ಪಡೆ ಮಾಡಿದೆ.</p><p>ತಂಡದ ನಾಯಕತ್ವ ವಹಿಸಿರುವ ರೋಹಿತ್ ಶರ್ಮಾ ಅವರು ಬೂಮ್ರಾ ಅವರ ಆಯ್ಕೆಯ ಬಗ್ಗೆ ಹೇಳಿದ್ದಿಷ್ಟು– ‘ಅನುಭವಿಗಳ ತಂಡದಲ್ಲಿ ಸಿರಾಜ್ ಅವರಷ್ಟೇ ಇಲ್ಲ. ತಂಡವನ್ನು ಸಾಕಷ್ಟು ಯೋಚಿಸಿ ಆಯ್ಕೆ ಮಾಡಿದ್ದೇವೆ. ಬೂಮ್ರಾ ಅವರು ಆಡುತ್ತಾರೆಯೇ ಎನ್ನುವುದು ನಮಗೆ ಖಚಿತವಿಲ್ಲ. ಆರಂಭದಲ್ಲಿ ದಾಳಿಗಿಳಿಯುವ ಮತ್ತು ಕೊನೆಯಲ್ಲಿ ಬೌಲಿಂಗ್ ಮಾಡಬಲ್ಲ ಒಬ್ಬ ಬೌಲರ್ ಆಯ್ಕೆ ನಮಗೆ ಇರಬೇಕಿತ್ತು. ಅನುಭವಿ ವೇಗಿ ಶಮಿ ಮತ್ತು ಎಡಗೈ ವೇಗದ ಬೌಲರ್ ಅರ್ಷದೀಪ್ ಸಿಂಗ್ ಅವರು ಬೂಮ್ರಾ ಅವರಿಗೆ ಬೆಂಬಲ ನೀಡಬಲ್ಲರು‘ ಎಂದು ರೋಹಿತ್ ವಿಶ್ವಾಸ ವ್ಯಕ್ತಪಡಿಸಿದರು.</p><p>ಶಮಿ ಅವರು 2023ರ ಏಕದಿನ ವಿಶ್ವಕಪ್ ಬಳಿಕ ಮೊದಲ ಬಾರಿ ತಂಡಕ್ಕೆ ಮರಳಿದ್ದರೆ. ಅವರು ದೇಶಿ ಕ್ರಿಕೆಟ್ ಟೂರ್ನಿಗಳಲ್ಲಿ (ರಣಜಿ ಟ್ರೋಫಿ, ಸೈಯ್ಯದ್ ಮುಷ್ತಾಕ್ ಅಲಿ ಟ್ರೋಫಿ, ವಿಜಯ್ ಹಜಾರೆ ಟ್ರೋಫಿ) ಉತ್ತಮ ಪ್ರದರ್ಶನ ನೀಡಿದ್ದಾರೆ. ಲಯದ ಉತ್ತುಂಗಕ್ಕೆ ಅವರು ಇನ್ನೂ ತಲುಪಬೇಕಿದೆ.</p>.<h3>ಜೈಸ್ವಾಲ್ಗೆ ಅವಕಾಶ</h3><p>ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದು ಯಶಸ್ವಿ ಜೈಸ್ವಾಲ್ ಪಾಲಿಗೆ ಅವಕಾಶದ ಬಾಗಿಲು ತೆರೆದಿದೆ. ಅಗ್ರ ಕ್ರಮಾಂಕದಲ್ಲಿ ಎಡಗೈ ಆಟಗಾರನಾಗಿರುವುದೂ ಅವರಿಗೆ ಸಕಾರಾತ್ಮಕ ಅಂಶವಾಗಿದೆ.</p><p>ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ಗೆ ಪದಾರ್ಪಣೆ ಮಾಡಿದ್ದ ಆಲ್ರೌಂಡರ್ ಹರ್ಷಿತ್ ರಾಣಾ ಅವರನ್ನು ಇಂಗ್ಲೆಂಡ್ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಗೆ ಮಾತ್ರ ಆಯ್ಕೆ ಮಾಡಲಾಗಿದೆ.</p>.<h3>ಪಂತ್ಗೆ ಹೊಣೆ</h3><p>ರಿಷಬ್ ಪಂತ್ ಅವರು ಎರಡು ವರ್ಷಗಳಲ್ಲಿ ಕೇವಲ ಒಂದು ಏಕದಿನ ಪಂದ್ಯ ಆಡಿದ್ದಾರೆ. ಶ್ರೀಲಂಕಾ ವಿರುದ್ಧ ಹೋದ ವರ್ಷ ಆ ಪಂದ್ಯ ಆಡಿದ್ದರು. ಆದರೆ ಆಯ್ಕೆಗಾರರು ಅವರನ್ನು ಮೊದಲ ಆಯ್ಕೆಯ ವಿಕೆಟ್ ಕೀಪರ್ ಆಗಿ ತಂಡಕ್ಕೆ ಆಯ್ಕೆ ಮಾಡಿದ್ದಾರೆ. ಬ್ಯಾಟರ್–ವಿಕೆಟ್ ಕೀಪರ್, ಕನ್ನಡಿಗ ಕೆ.ಎಲ್.ರಾಹುಲ್ ಅವರೂ ಸ್ಥಾನ ಪಡೆದಿದ್ದಾರೆ.</p>.<h3>ಕರುಣ್ಗೆ ಸ್ಥಾನವಿಲ್ಲ</h3><p>ಪ್ರಸ್ತುತ ವಿಜಯ್ ಹಜಾರೆ ಟ್ರೋಫಿ ಏಕದಿನ ಟೂರ್ನಿಯಲ್ಲಿ ರನ್ಗಳ ಹೊಳೆಯನ್ನೇ ಹರಿಸಿದ ಕರುಣ್ ನಾಯರ್ ಅವರಿಗೆ ಸ್ಥಾನ ನೀಡಲಾಗಿಲ್ಲ. ‘ಕೆಲವು ಆಟಗಾರರಿಗೆ ಸ್ಥಾನ ಸಿಗುವುದಿಲ್ಲ. ಇದು ದುರದೃಷ್ಟಕರ. ಇಲ್ಲಿ ಎಲ್ಲರನ್ನೂ ಸಂತುಷ್ಟಗೊಳಿಸಲು ಆಗುವುದಿಲ್ಲ’ ಎಂದು ರೋಹಿತ್ ಶರ್ಮಾ ಹೇಳಿದರು.</p><p>‘ಅಂತಿಮವಾಗಿ, ನಾವು ಸಾಧ್ಯವಾದಷ್ಟು ಉತ್ತಮ ಮತ್ತು ವಿಭಿನ್ನ ಪರಿಸ್ಥಿತಿಯಲ್ಲಿ ಪಂದ್ಯ ಗೆಲ್ಲಿಸಿಕೊಡುವ ತಂಡ ಆಯ್ಕೆ ಮಾಡಬೇಕಾಗುತ್ತದೆ. ಈಗ ಇರುವ ಆಟಗಾರರಿಗೆ ಅದು ಸಾಧ್ಯವಾಗಬಲ್ಲದು’ ಎಂದು ರೋಹಿತ್ ವಿವರಿಸಿದರು.</p><p>ಚಾಂಪಿಯನ್ಸ್ ಟ್ರೋಫಿಯು ಫೆ. 19ರಿಂದ ಆರಂಭವಾಗಲಿದ್ದು, ಪಾಕಿಸ್ತಾನವು ಆತಿಥ್ಯ ವಹಿಸಿದೆ. ಫೈನಲ್ಸ್ ಮಾರ್ಚ್ 9ಕ್ಕೆ ನಡೆಯಲಿದೆ. ಭಾರತವು ತನ್ನ ಎಲ್ಲಾ ಪಂದ್ಯಗಳನ್ನು ದುಬೈನಲ್ಲಿ ಆಡಲಿದೆ.</p><p><strong>2 ಪಂದ್ಯಗಳಿಗೆ ಬೂಮ್ರಾ ಅಲಭ್ಯ?</strong></p><p>ಮುಂಬೈ (ಪಿಟಿಐ): ಜಸ್ಪ್ರೀತ್ ಬೂಮ್ರಾ ಅವರು ಇಂಗ್ಲೆಂಡ್ ವಿರುದ್ಧ ಏಕದಿನ ಕ್ರಿಕೆಟ್ ಸರಣಿಯ ಮೊದಲ ಎರಡು ಪಂದ್ಯಗಳಿಗೆ ಫಿಟ್ ಆಗುವುದು ಅನುಮಾನವಾಗಿರುವ ಕಾರಣ, ಪರ್ಯಾಯವಾಗಿ ಹರ್ಷಿತ್ ರಾಣಾ ಅವರನ್ನು ಸೇರ್ಪಡೆ ಮಾಡಲಾಗಿದೆ ಎಂದು ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರಕರ್ ಹೇಳಿದರು.</p><p>ಬೂಮ್ರಾ ಅವರ ದೈಹಿಕ ಸಾಮರ್ಥ್ಯ ಸ್ಥಿತಿಗತಿ ತಿಳಿದುಕೊಳ್ಳಲು ವೈದ್ಯಕೀಯ ತಂಡದ ವರದಿಗೆ ಕಾಯಲಾಗುತ್ತಿದೆ ಎಂದರು. ಆದರೆ ಚಾಂಪಿಯನ್ಸ್ ಟ್ರೋಫಿಗೆ ಪೂರ್ವಭಾವಿಯಾಗಿ ನಡೆಯುವ ಏಕದಿನ ಸರಣಿಯಲ್ಲಿ ಆಡುವ ತಂಡದಲ್ಲಿ ಬೂಮ್ರಾ ಅವರ ಹೆಸರು ಇದೆ.</p><p><strong>ತಂಡ ಇಂತಿದೆ:</strong> ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್ (ಉಪ ನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ.ಎಲ್. ರಾಹುಲ್, ಹಾರ್ದಿಕ್ ಪಾಂಡ್ಯಾ, ಅಕ್ಸರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಜಸ್ಪ್ರೀತ್ ಬೂಮ್ರಾ, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್, ಯಶಸ್ವಿ ಜೈಸ್ವಾಲ್, ರವೀಂದ್ರ ಜಡೇಜ, ರಿಷಬ್ ಪಂತ್, ಮತ್ತು ಹರ್ಷಿತ್ ರಾಣಾ (ಇಂಗ್ಲೆಂಡ್ ವಿರುದ್ಧ ಸರಣಿಗೆ ಮಾತ್ರ) ತಂಡದಲ್ಲಿ ಸ್ಥಾನ ಪಡೆದಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ಚಾಂಪಿಯನ್ಸ್ ಟ್ರೋಫಿಯಲ್ಲಿ ಆಡಲಿರುವ ಭಾರತದ 15 ಸದಸ್ಯರ ಕ್ರಿಕೆಟ್ ತಂಡವನ್ನು ಬಿಸಿಸಿಐ ಶನಿವಾರ ಪ್ರಕಟಿಸಿದೆ.</p><p>ರೋಹಿತ್ ಶರ್ಮಾ ಅವರು ತಂಡವನ್ನು ಮುನ್ನಡೆಸಲಿದ್ದಾರೆ. ಶುಭಮನ್ ಗಿಲ್ ಅವರಿಗೆ ಉಪನಾಯಕನ ಹೊಣೆ ನೀಡಲಾಗಿದೆ. ತಂಡದಲ್ಲಿ ವೇಗದ ಬೌಲರ್ ಮೊಹಮ್ಮದ್ ಸಿರಾಜ್ ಅವರಿಗೆ ಸ್ಥಾನ ನೀಡಲಾಗಿಲ್ಲ.</p><p>ಪ್ರಮುಖ ವೇಗದ ಬೌಲರ್ ಜಸ್ಪ್ರೀತ್ ಬೂಮ್ರಾ ಅವರಿಗೆ ಐಸಿಸಿ ಚಾಂಪಿಯನ್ಸ್ ಟ್ರೋಫಿ ಏಕದಿನ ಕ್ರಿಕೆಟ್ ಟೂರ್ನಿಗೆ ಶನಿವಾರ ಪ್ರಕಟಿಸಲಾದ ಭಾರತ ತಂಡದಲ್ಲಿ ಸ್ಥಾನ ನೀಡಲಾಗಿದೆ. ಫಿಟ್ನೆಸ್ ಮೇಲೆ ಅವರ ಲಭ್ಯತೆ ಅವಲಂಬಿಸಿದೆ. ಪ್ರತಿಭಾನ್ವಿತ ಆರಂಭ ಆಟಗಾರ ಯಶಸ್ವಿ ಜೈಸ್ವಾಲ್ ಮೊದಲ ಬಾರಿಗೆ ಏಕದಿನ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.</p><p>ವೇಗದ ಬೌಲರ್ ಮೊಹಮ್ಮದ್ ಶಮಿ ಕೂಡ ಒಂದು ವರ್ಷದ ನಂತರ ತಂಡಕ್ಕೆ ಮರಳಿದ್ದಾರೆ. ಇತ್ತೀಚಿನ ಆಸ್ಟ್ರೇಲಿಯಾ ಪ್ರವಾಸದ ಕೊನೆಯ ಟೆಸ್ಟ್ (ಸಿಡ್ನಿ) ವೇಳೆ ಬೂಮ್ರಾ ಬೆನ್ನುನೋವಿಗೆ ಒಳಗಾಗಿದ್ದರು. ಆದರೆ ಅಜಿತ್ ಅಗರಕರ್ ನೇತೃತ್ವದ ಆಯ್ಕೆ ಸಮಿತಿಯು 31 ವರ್ಷ ವಯಸ್ಸಿನ ಬೂಮ್ರಾ ಅವರನ್ನು ಇಂಗ್ಲೆಂಡ್ ವಿರುದ್ಧದ ತವರಿನಲ್ಲಿ ನಡೆಯುವ ಏಕದಿನ ಸರಣಿ ಮತ್ತು ಚಾಂಪಿಯನ್ಸ್ ಟ್ರೋಫಿ ತಂಡಕ್ಕೆ ಸೇರ್ಪಡೆ ಮಾಡಿದೆ.</p><p>ತಂಡದ ನಾಯಕತ್ವ ವಹಿಸಿರುವ ರೋಹಿತ್ ಶರ್ಮಾ ಅವರು ಬೂಮ್ರಾ ಅವರ ಆಯ್ಕೆಯ ಬಗ್ಗೆ ಹೇಳಿದ್ದಿಷ್ಟು– ‘ಅನುಭವಿಗಳ ತಂಡದಲ್ಲಿ ಸಿರಾಜ್ ಅವರಷ್ಟೇ ಇಲ್ಲ. ತಂಡವನ್ನು ಸಾಕಷ್ಟು ಯೋಚಿಸಿ ಆಯ್ಕೆ ಮಾಡಿದ್ದೇವೆ. ಬೂಮ್ರಾ ಅವರು ಆಡುತ್ತಾರೆಯೇ ಎನ್ನುವುದು ನಮಗೆ ಖಚಿತವಿಲ್ಲ. ಆರಂಭದಲ್ಲಿ ದಾಳಿಗಿಳಿಯುವ ಮತ್ತು ಕೊನೆಯಲ್ಲಿ ಬೌಲಿಂಗ್ ಮಾಡಬಲ್ಲ ಒಬ್ಬ ಬೌಲರ್ ಆಯ್ಕೆ ನಮಗೆ ಇರಬೇಕಿತ್ತು. ಅನುಭವಿ ವೇಗಿ ಶಮಿ ಮತ್ತು ಎಡಗೈ ವೇಗದ ಬೌಲರ್ ಅರ್ಷದೀಪ್ ಸಿಂಗ್ ಅವರು ಬೂಮ್ರಾ ಅವರಿಗೆ ಬೆಂಬಲ ನೀಡಬಲ್ಲರು‘ ಎಂದು ರೋಹಿತ್ ವಿಶ್ವಾಸ ವ್ಯಕ್ತಪಡಿಸಿದರು.</p><p>ಶಮಿ ಅವರು 2023ರ ಏಕದಿನ ವಿಶ್ವಕಪ್ ಬಳಿಕ ಮೊದಲ ಬಾರಿ ತಂಡಕ್ಕೆ ಮರಳಿದ್ದರೆ. ಅವರು ದೇಶಿ ಕ್ರಿಕೆಟ್ ಟೂರ್ನಿಗಳಲ್ಲಿ (ರಣಜಿ ಟ್ರೋಫಿ, ಸೈಯ್ಯದ್ ಮುಷ್ತಾಕ್ ಅಲಿ ಟ್ರೋಫಿ, ವಿಜಯ್ ಹಜಾರೆ ಟ್ರೋಫಿ) ಉತ್ತಮ ಪ್ರದರ್ಶನ ನೀಡಿದ್ದಾರೆ. ಲಯದ ಉತ್ತುಂಗಕ್ಕೆ ಅವರು ಇನ್ನೂ ತಲುಪಬೇಕಿದೆ.</p>.<h3>ಜೈಸ್ವಾಲ್ಗೆ ಅವಕಾಶ</h3><p>ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದು ಯಶಸ್ವಿ ಜೈಸ್ವಾಲ್ ಪಾಲಿಗೆ ಅವಕಾಶದ ಬಾಗಿಲು ತೆರೆದಿದೆ. ಅಗ್ರ ಕ್ರಮಾಂಕದಲ್ಲಿ ಎಡಗೈ ಆಟಗಾರನಾಗಿರುವುದೂ ಅವರಿಗೆ ಸಕಾರಾತ್ಮಕ ಅಂಶವಾಗಿದೆ.</p><p>ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ಗೆ ಪದಾರ್ಪಣೆ ಮಾಡಿದ್ದ ಆಲ್ರೌಂಡರ್ ಹರ್ಷಿತ್ ರಾಣಾ ಅವರನ್ನು ಇಂಗ್ಲೆಂಡ್ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಗೆ ಮಾತ್ರ ಆಯ್ಕೆ ಮಾಡಲಾಗಿದೆ.</p>.<h3>ಪಂತ್ಗೆ ಹೊಣೆ</h3><p>ರಿಷಬ್ ಪಂತ್ ಅವರು ಎರಡು ವರ್ಷಗಳಲ್ಲಿ ಕೇವಲ ಒಂದು ಏಕದಿನ ಪಂದ್ಯ ಆಡಿದ್ದಾರೆ. ಶ್ರೀಲಂಕಾ ವಿರುದ್ಧ ಹೋದ ವರ್ಷ ಆ ಪಂದ್ಯ ಆಡಿದ್ದರು. ಆದರೆ ಆಯ್ಕೆಗಾರರು ಅವರನ್ನು ಮೊದಲ ಆಯ್ಕೆಯ ವಿಕೆಟ್ ಕೀಪರ್ ಆಗಿ ತಂಡಕ್ಕೆ ಆಯ್ಕೆ ಮಾಡಿದ್ದಾರೆ. ಬ್ಯಾಟರ್–ವಿಕೆಟ್ ಕೀಪರ್, ಕನ್ನಡಿಗ ಕೆ.ಎಲ್.ರಾಹುಲ್ ಅವರೂ ಸ್ಥಾನ ಪಡೆದಿದ್ದಾರೆ.</p>.<h3>ಕರುಣ್ಗೆ ಸ್ಥಾನವಿಲ್ಲ</h3><p>ಪ್ರಸ್ತುತ ವಿಜಯ್ ಹಜಾರೆ ಟ್ರೋಫಿ ಏಕದಿನ ಟೂರ್ನಿಯಲ್ಲಿ ರನ್ಗಳ ಹೊಳೆಯನ್ನೇ ಹರಿಸಿದ ಕರುಣ್ ನಾಯರ್ ಅವರಿಗೆ ಸ್ಥಾನ ನೀಡಲಾಗಿಲ್ಲ. ‘ಕೆಲವು ಆಟಗಾರರಿಗೆ ಸ್ಥಾನ ಸಿಗುವುದಿಲ್ಲ. ಇದು ದುರದೃಷ್ಟಕರ. ಇಲ್ಲಿ ಎಲ್ಲರನ್ನೂ ಸಂತುಷ್ಟಗೊಳಿಸಲು ಆಗುವುದಿಲ್ಲ’ ಎಂದು ರೋಹಿತ್ ಶರ್ಮಾ ಹೇಳಿದರು.</p><p>‘ಅಂತಿಮವಾಗಿ, ನಾವು ಸಾಧ್ಯವಾದಷ್ಟು ಉತ್ತಮ ಮತ್ತು ವಿಭಿನ್ನ ಪರಿಸ್ಥಿತಿಯಲ್ಲಿ ಪಂದ್ಯ ಗೆಲ್ಲಿಸಿಕೊಡುವ ತಂಡ ಆಯ್ಕೆ ಮಾಡಬೇಕಾಗುತ್ತದೆ. ಈಗ ಇರುವ ಆಟಗಾರರಿಗೆ ಅದು ಸಾಧ್ಯವಾಗಬಲ್ಲದು’ ಎಂದು ರೋಹಿತ್ ವಿವರಿಸಿದರು.</p><p>ಚಾಂಪಿಯನ್ಸ್ ಟ್ರೋಫಿಯು ಫೆ. 19ರಿಂದ ಆರಂಭವಾಗಲಿದ್ದು, ಪಾಕಿಸ್ತಾನವು ಆತಿಥ್ಯ ವಹಿಸಿದೆ. ಫೈನಲ್ಸ್ ಮಾರ್ಚ್ 9ಕ್ಕೆ ನಡೆಯಲಿದೆ. ಭಾರತವು ತನ್ನ ಎಲ್ಲಾ ಪಂದ್ಯಗಳನ್ನು ದುಬೈನಲ್ಲಿ ಆಡಲಿದೆ.</p><p><strong>2 ಪಂದ್ಯಗಳಿಗೆ ಬೂಮ್ರಾ ಅಲಭ್ಯ?</strong></p><p>ಮುಂಬೈ (ಪಿಟಿಐ): ಜಸ್ಪ್ರೀತ್ ಬೂಮ್ರಾ ಅವರು ಇಂಗ್ಲೆಂಡ್ ವಿರುದ್ಧ ಏಕದಿನ ಕ್ರಿಕೆಟ್ ಸರಣಿಯ ಮೊದಲ ಎರಡು ಪಂದ್ಯಗಳಿಗೆ ಫಿಟ್ ಆಗುವುದು ಅನುಮಾನವಾಗಿರುವ ಕಾರಣ, ಪರ್ಯಾಯವಾಗಿ ಹರ್ಷಿತ್ ರಾಣಾ ಅವರನ್ನು ಸೇರ್ಪಡೆ ಮಾಡಲಾಗಿದೆ ಎಂದು ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರಕರ್ ಹೇಳಿದರು.</p><p>ಬೂಮ್ರಾ ಅವರ ದೈಹಿಕ ಸಾಮರ್ಥ್ಯ ಸ್ಥಿತಿಗತಿ ತಿಳಿದುಕೊಳ್ಳಲು ವೈದ್ಯಕೀಯ ತಂಡದ ವರದಿಗೆ ಕಾಯಲಾಗುತ್ತಿದೆ ಎಂದರು. ಆದರೆ ಚಾಂಪಿಯನ್ಸ್ ಟ್ರೋಫಿಗೆ ಪೂರ್ವಭಾವಿಯಾಗಿ ನಡೆಯುವ ಏಕದಿನ ಸರಣಿಯಲ್ಲಿ ಆಡುವ ತಂಡದಲ್ಲಿ ಬೂಮ್ರಾ ಅವರ ಹೆಸರು ಇದೆ.</p><p><strong>ತಂಡ ಇಂತಿದೆ:</strong> ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್ (ಉಪ ನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ.ಎಲ್. ರಾಹುಲ್, ಹಾರ್ದಿಕ್ ಪಾಂಡ್ಯಾ, ಅಕ್ಸರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಜಸ್ಪ್ರೀತ್ ಬೂಮ್ರಾ, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್, ಯಶಸ್ವಿ ಜೈಸ್ವಾಲ್, ರವೀಂದ್ರ ಜಡೇಜ, ರಿಷಬ್ ಪಂತ್, ಮತ್ತು ಹರ್ಷಿತ್ ರಾಣಾ (ಇಂಗ್ಲೆಂಡ್ ವಿರುದ್ಧ ಸರಣಿಗೆ ಮಾತ್ರ) ತಂಡದಲ್ಲಿ ಸ್ಥಾನ ಪಡೆದಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>