ಭಾರತ ಕ್ರಿಕೆಟ್ ತಂಡದ ಪ್ರಮುಖ ಆಟಗಾರರು ಐಪಿಎಲ್ ಟೂರ್ನಿಯಲ್ಲಿ ತಮ್ಮನ್ನು ತೊಡಗಿಸಿ ಕೊಂಡಿದ್ದರೆ, ತಂಡದ ಕೋಚಿಂಗ್ ಸಿಬ್ಬಂದಿ ಮುಂಬರುವ ವಿಶ್ವ ಟೆಸ್ಟ್ ಚಾಂಪಿಯನ್ಷಿಪ್ನ (ಡಬ್ಲ್ಯುಟಿಸಿ) ಫೈನಲ್ ಪಂದ್ಯದತ್ತ ಗಮನ ಕೇಂದ್ರೀಕರಿಸಿದೆ.
ಡಬ್ಲ್ಯುಟಿಸಿ ಫೈನಲ್ಗೆ ಭಾರತ ತಂಡವನ್ನು ಸಜ್ಜುಗೊಳಿಸುವ ಸಂಬಂಧ ಚರ್ಚಿಸಲು ಮುಖ್ಯ ಕೋಚ್ ರಾಹುಲ್ ದ್ರಾವಿಡ್ ನೇತೃತ್ವದಲ್ಲಿ ತಂಡದ ಕೋಚಿಂಗ್ ಸಿಬ್ಬಂದಿ ಬೆಂಗಳೂರಿನ ಎನ್ಸಿಎನಲ್ಲಿ ಸಭೆ ನಡೆಸಲಾಗಿತ್ತು.
‘ದ್ರಾವಿಡ್, ಬ್ಯಾಟಿಂಗ್ ಕೋಚ್ ವಿಕ್ರಮ್ ರಾಥೋಡ್, ಬೌಲಿಂಗ್ ಕೋಚ್ ಪಾರಸ್ ಮಾಂಬ್ರೆ ಮತ್ತು ಕೋಚಿಂಗ್ನ ಇತರ ಸಿಬ್ಬಂದಿ ಸೇರಲಿದ್ದಾರೆ. ತಂಡಕ್ಕೆ ಸಂಬಂಧಿಸಿದ ವಿವಿಧ ವಿಷಯಗಳ ಬಗ್ಗೆ ಎನ್ಸಿಎ ಮುಖ್ಯಸ್ಥ ವಿವಿಎಸ್ ಲಕ್ಷ್ಮಣ್ ಅವರೊಂದಿಗೆ ಚರ್ಚೆ ನಡೆಯಲಿದೆ’ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.