ಮಧ್ಯಪ್ರದೇಶಕ ಕ್ರಿಕೆಟ್ ಸಂಸ್ಥೆ (ಎಂಪಿಸಿಎ) ಆಜೀವ ಸದಸ್ಯ ಸಂಜೀವ್ ಗುಪ್ತಾ ಅವರು ದ್ರಾವಿಡ್ ವಿರುದ್ಧ ದೂರು ನೀಡಿದ್ದರು. ಇಂಡಿಯಾ ಸಿಮೆಂಟ್ಸ್ನಲ್ಲಿ ದೊಡ್ಡ ಹುದ್ದೆಯಲ್ಲಿರುವ ರಾಹುಲ್ ಎನ್ಸಿಎ ಮುಖ್ಯಸ್ಥರಾಗಿದ್ದಾರೆ. ಅವರು ಎರಡು ಲಾಭದಾಯಕ ಹುದ್ದೆಗಳಲ್ಲಿ ಇರುವುದರಿಂದ ಹಿತಾಸಕ್ತಿ ಸಂಘರ್ಷ ನಿಯಮ ಉಲ್ಲಂಘಿಸಿದ್ದಾರೆ ಎಂದು ದೂರು ನೀಡಿದ್ದರು. ಅದರಿಂದಾಗಿ ಜೈನ್ ಅವರು ದ್ರಾವಿಡ್ ಅವರನ್ನು ಎರಡು ಬಾರಿ ವಿಚಾರಣೆ ಮಾಡಿ ಮಾಹಿತಿ ಪಡೆದಿದ್ದರು.