<p>ಭಾರತೀಯ ಕ್ರಿಕೆಟ್ ತಂಡದ ಆಯ್ಕೆ ಸಮಿತಿಯ ಅಧ್ಯಕ್ಷರಾಗಿರುವ ಅಜಿತ್ ಅಗರ್ಕರ್, ಕಳೆದ ಕೆಲವು ದಿನಗಳ ಹಿಂದೆ ತಮ್ಮ ಅಧಿಕಾರವಧಿಯನ್ನು 2027ರ ಏಕದಿನ ವಿಶ್ವಕಪ್ ವರೆಗೂ ವಿಸ್ತರಿಸುವಂತೆ ಬಿಸಿಸಿಐಗೆ ಮನವಿ ಸಲ್ಲಿಸಿದ್ದರು. ಈ ಮನವಿಯನ್ನು ಬಿಸಿಸಿಐ ಒಪ್ಪಿರುವುದಾಗಿ ವರದಿಯಾಗಿದೆ. </p><p>2023ರಲ್ಲಿ ಬಿಸಿಸಿಐ, ಭಾರತ ತಂಡದ ಮಾಜಿ ಆಟಗಾರ ಅಜಿತ್ ಅಗರ್ಕರ್ ಅವರನ್ನು ತಂಡದ ಆಯ್ಕೆ ಸಮಿತಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಿತ್ತು. 2025ರಲ್ಲಿ ಇವರ ಅಧಿಕಾರವಧಿಯನ್ನು ಹೆಚ್ಚುವರಿಯಾಗಿ ಒಂದು ವರ್ಷಕ್ಕೆ ವಿಸ್ತರಿಸಿತ್ತು. ಇವರ ಅಧಿಕಾರವಧಿಯಲ್ಲಿ ಭಾರತ ತಂಡವು 3 ಐಸಿಸಿ ಟ್ರೋಫಿಗಳನ್ನು ಗೆದ್ದಿದೆ.</p><p>ರೋಹಿತ್ ಶರ್ಮಾ ನಾಯಕತ್ವದಲ್ಲಿ 2024ರ ಟಿ20 ವಿಶ್ವಕಪ್, 2025 ಚಾಂಪಿಯನ್ಸ್ ಟ್ರೋಫಿ ಹಾಗೂ ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ 2026ರ ಟಿ20 ವಿಶ್ವಕಪ್ ಗೆದ್ದಿದೆ. ಇದರ ಜೊತೆಗೆ ತವರಿನಲ್ಲಿ ನಡೆದ 2023ರ ಏಕದಿನ ವಿಶ್ವಕಪ್ನಲ್ಲಿ ಭಾರತ ತಂಡವು ಫೈನಲ್ ತಲುಪಿತ್ತು. </p><p>ಇದೀಗ ಬಿಸಿಸಿಐ 2027ರ ಏಕದಿನ ವಿಶ್ವಕಪ್ವರೆಗೂ ಆಗರ್ಕರ್ ಅವರನ್ನು ತಂಡದ ಆಯ್ಕೆ ಸಮಿತಿಯ ಅಧ್ಯಕ್ಷರಾಗಿಯೇ ಉಳಿಸಿಕೊಳ್ಳಲಿದೆ. ಇವರ ಅಧಿಕಾರಾವಧಿಯಲ್ಲಿ ಭಾರತ ತಂಡವು ಉತ್ತಮ ಪ್ರದರ್ಶನ ನೀಡಿದೆ. ಹಾಗಾಗಿ ಅಧಿಕಾರದ ವಿಸ್ತರಣೆಯಾಗಲಿದೆ ಎಂದು ವರದಿಯಾಗಿದೆ.</p><p>‘ಭಾರತದ ಟಿ20 ತಂಡವನ್ನು ಸೂರ್ಯಕುಮಾರ್ ಯಾದವ್ ಅವರು ಮುನ್ನಡೆಸುತ್ತಿದ್ದಾರೆ. ಆದರೆ ಅವರು ಬ್ಯಾಟರ್ ಆಗಿ ವಿಫಲರಾಗುತ್ತಿದ್ದಾರೆ. ಸದ್ಯಕ್ಕೆ ಅವರೇ ತಂಡವನ್ನು ಮುನ್ನಡೆಸುತ್ತಾರೆ. ಆದರೆ 2028ರವರೆಗೆ ಅವರೇ ಇರುತ್ತಾರೆ ಎಂಬುದು ಅವರ ಪ್ರದರ್ಶನದ ಮೇಲೆ ನಿರ್ಧಾರವಾಗುತ್ತದೆ’ ಎಂದು ಬಿಸಿಸಿಐ ಮೂಲವೊಂದು ಪಿಟಿಐಗೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಭಾರತೀಯ ಕ್ರಿಕೆಟ್ ತಂಡದ ಆಯ್ಕೆ ಸಮಿತಿಯ ಅಧ್ಯಕ್ಷರಾಗಿರುವ ಅಜಿತ್ ಅಗರ್ಕರ್, ಕಳೆದ ಕೆಲವು ದಿನಗಳ ಹಿಂದೆ ತಮ್ಮ ಅಧಿಕಾರವಧಿಯನ್ನು 2027ರ ಏಕದಿನ ವಿಶ್ವಕಪ್ ವರೆಗೂ ವಿಸ್ತರಿಸುವಂತೆ ಬಿಸಿಸಿಐಗೆ ಮನವಿ ಸಲ್ಲಿಸಿದ್ದರು. ಈ ಮನವಿಯನ್ನು ಬಿಸಿಸಿಐ ಒಪ್ಪಿರುವುದಾಗಿ ವರದಿಯಾಗಿದೆ. </p><p>2023ರಲ್ಲಿ ಬಿಸಿಸಿಐ, ಭಾರತ ತಂಡದ ಮಾಜಿ ಆಟಗಾರ ಅಜಿತ್ ಅಗರ್ಕರ್ ಅವರನ್ನು ತಂಡದ ಆಯ್ಕೆ ಸಮಿತಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಿತ್ತು. 2025ರಲ್ಲಿ ಇವರ ಅಧಿಕಾರವಧಿಯನ್ನು ಹೆಚ್ಚುವರಿಯಾಗಿ ಒಂದು ವರ್ಷಕ್ಕೆ ವಿಸ್ತರಿಸಿತ್ತು. ಇವರ ಅಧಿಕಾರವಧಿಯಲ್ಲಿ ಭಾರತ ತಂಡವು 3 ಐಸಿಸಿ ಟ್ರೋಫಿಗಳನ್ನು ಗೆದ್ದಿದೆ.</p><p>ರೋಹಿತ್ ಶರ್ಮಾ ನಾಯಕತ್ವದಲ್ಲಿ 2024ರ ಟಿ20 ವಿಶ್ವಕಪ್, 2025 ಚಾಂಪಿಯನ್ಸ್ ಟ್ರೋಫಿ ಹಾಗೂ ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ 2026ರ ಟಿ20 ವಿಶ್ವಕಪ್ ಗೆದ್ದಿದೆ. ಇದರ ಜೊತೆಗೆ ತವರಿನಲ್ಲಿ ನಡೆದ 2023ರ ಏಕದಿನ ವಿಶ್ವಕಪ್ನಲ್ಲಿ ಭಾರತ ತಂಡವು ಫೈನಲ್ ತಲುಪಿತ್ತು. </p><p>ಇದೀಗ ಬಿಸಿಸಿಐ 2027ರ ಏಕದಿನ ವಿಶ್ವಕಪ್ವರೆಗೂ ಆಗರ್ಕರ್ ಅವರನ್ನು ತಂಡದ ಆಯ್ಕೆ ಸಮಿತಿಯ ಅಧ್ಯಕ್ಷರಾಗಿಯೇ ಉಳಿಸಿಕೊಳ್ಳಲಿದೆ. ಇವರ ಅಧಿಕಾರಾವಧಿಯಲ್ಲಿ ಭಾರತ ತಂಡವು ಉತ್ತಮ ಪ್ರದರ್ಶನ ನೀಡಿದೆ. ಹಾಗಾಗಿ ಅಧಿಕಾರದ ವಿಸ್ತರಣೆಯಾಗಲಿದೆ ಎಂದು ವರದಿಯಾಗಿದೆ.</p><p>‘ಭಾರತದ ಟಿ20 ತಂಡವನ್ನು ಸೂರ್ಯಕುಮಾರ್ ಯಾದವ್ ಅವರು ಮುನ್ನಡೆಸುತ್ತಿದ್ದಾರೆ. ಆದರೆ ಅವರು ಬ್ಯಾಟರ್ ಆಗಿ ವಿಫಲರಾಗುತ್ತಿದ್ದಾರೆ. ಸದ್ಯಕ್ಕೆ ಅವರೇ ತಂಡವನ್ನು ಮುನ್ನಡೆಸುತ್ತಾರೆ. ಆದರೆ 2028ರವರೆಗೆ ಅವರೇ ಇರುತ್ತಾರೆ ಎಂಬುದು ಅವರ ಪ್ರದರ್ಶನದ ಮೇಲೆ ನಿರ್ಧಾರವಾಗುತ್ತದೆ’ ಎಂದು ಬಿಸಿಸಿಐ ಮೂಲವೊಂದು ಪಿಟಿಐಗೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>