<p><strong>ಮೆಲ್ಬರ್ನ್</strong>: ಭಾರತ ಕ್ರಿಕೆಟ್ ತಂಡದ ಆಟಗಾರರು ಕೋವಿಡ್ –19 ತಡೆ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂಬ ಆಸ್ಟ್ರೇಲಿಯಾದ ಕೆಲವು ಮಾಧ್ಯಮಗಳ ವರದಿಯನ್ನು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯು (ಬಿಸಿಸಿಐ) ಅಲ್ಲಗಳೆದಿದೆ. ನಿಯಮ ಮೀರಿ ಆಟಗಾರರು ರೆಸ್ಟೊರೆಂಟ್ವೊಂದರಲ್ಲಿ ಊಟ ಮಾಡಿದ್ದಾರೆ ಎಂಬ ವರದಿಯು ದುರುದ್ದೇಶದಿಂದ ಕೂಡಿದೆ ಎಂದು ಬಿಸಿಸಿಐ ಪ್ರತಿಕ್ರಿಯಿಸಿದೆ.</p>.<p>‘ಕೋವಿಡ್ ನಿಯಮಗಳ ಬಗ್ಗೆ ನಮ್ಮ ತಂಡದ ಆಟಗಾರರು ಹಾಗೂ ಸಿಬ್ಬಂದಿಗೆ ಚೆನ್ನಾಗಿ ಅರಿವಿದೆ. ಜೀವಸುರಕ್ಷಾ ನಿಯಮಗಳನ್ನು ಯಾರೂ ಉಲ್ಲಂಘಿಸಿಲ್ಲ‘ ಎಂದು ಬಿಸಿಸಿಐನ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.</p>.<p>ಕ್ರಿಕೆಟಿಗರಾದ ರೋಹಿತ್ ಶರ್ಮಾ, ರಿಷಭ್ ಪಂತ್, ನವದೀಪ್ ಸೈನಿ ಹಾಗೂ ಶುಭಮನ್ ಗಿಲ್ ರೆಸ್ಟೊರೆಂಟ್ವೊಂದರಲ್ಲಿ ಊಟ ಮಾಡುತ್ತಿರುವ ಚಿತ್ರ ಮತ್ತು ವಿಡಿಯೊಗಳನ್ನುನವಲ್ದೀಪ್ ಸಿಂಗ್ ಎಂಬ ಅಭಿಮಾನಿಯೊಬ್ಬರು ಟ್ವೀಟ್ ಮಾಡಿದ ಬಳಿಕ ಈ ಗೊಂದಲ ಸೃಷ್ಟಿಯಾಗಿತ್ತು.</p>.<p>‘ನಾನು ಆಟಗಾರರ ಪಕ್ಕದ ಸೀಟಿನಲ್ಲಿ ಕುಳಿತುಕೊಂಡಿದ್ದೆ. ಅವರು ಊಟ ಮಾಡಿದ ನಂತರ ಬಿಲ್ ಪಾವತಿಸಿದಾಗ ರಿಷಭ್ ನನ್ನನ್ನು ಆಲಂಗಿಸಿಕೊಂಡರು‘ ಎಂದು ನವಲ್ದೀಪ್ ಹೇಳಿಕೊಂಡಿದ್ದ. ಬಳಿಕ ಈ ರೀತಿಯ ಗೊಂದಲ ಸೃಷ್ಟಿಸಿದ್ದಕ್ಕಾಗಿ ಕ್ಷಮೆ ಯಾಚಿಸಿದ್ದ.</p>.<p>ನಿಯಮಗಳ ಅನ್ವಯ ಆಟಗಾರರು ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ರೆಸ್ಟೊರೆಂಟ್ನಲ್ಲಿ ಊಟ ಮಾಡಲು ಅನುಮತಿ ನೀಡಲಾಗುತ್ತದೆ.</p>.<p>‘ಇದು ಆಸ್ಟ್ರೇಲಿಯಾದ ಕೆಲವು ಮಾಧ್ಯಮಗಳ ದುರುದ್ದೇಶಪೂರಿತ ವರದಿ. ಆಸ್ಟ್ರೇಲಿಯಾ ತಂಡ ಎರಡನೇ ಟೆಸ್ಟ್ನಲ್ಲಿ ಹೀನಾಯವಾಗಿ ಸೋತ ಬಳಿಕ ಇಂತಹ ಕೃತ್ಯಕ್ಕಿಳಿದಿವೆ‘ ಎಂದು ಅಧಿಕಾರಿ ಕಿಡಿ ಕಾರಿದ್ದಾರೆ.</p>.<p>ಮೆಲ್ಬರ್ನ್ನಲ್ಲಿ ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡವು ಎಂಟು ವಿಕೆಟ್ಗಳಿಂದ ಆತಿಥೇಯ ತಂಡವನ್ನು ಸೋಲಿಸಿತ್ತು. ನಾಲ್ಕು ಪಂದ್ಯಗಳ ಸರಣಿಯಲ್ಲಿ 1–1 ಸಮಬಲ ಸಾಧಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೆಲ್ಬರ್ನ್</strong>: ಭಾರತ ಕ್ರಿಕೆಟ್ ತಂಡದ ಆಟಗಾರರು ಕೋವಿಡ್ –19 ತಡೆ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂಬ ಆಸ್ಟ್ರೇಲಿಯಾದ ಕೆಲವು ಮಾಧ್ಯಮಗಳ ವರದಿಯನ್ನು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯು (ಬಿಸಿಸಿಐ) ಅಲ್ಲಗಳೆದಿದೆ. ನಿಯಮ ಮೀರಿ ಆಟಗಾರರು ರೆಸ್ಟೊರೆಂಟ್ವೊಂದರಲ್ಲಿ ಊಟ ಮಾಡಿದ್ದಾರೆ ಎಂಬ ವರದಿಯು ದುರುದ್ದೇಶದಿಂದ ಕೂಡಿದೆ ಎಂದು ಬಿಸಿಸಿಐ ಪ್ರತಿಕ್ರಿಯಿಸಿದೆ.</p>.<p>‘ಕೋವಿಡ್ ನಿಯಮಗಳ ಬಗ್ಗೆ ನಮ್ಮ ತಂಡದ ಆಟಗಾರರು ಹಾಗೂ ಸಿಬ್ಬಂದಿಗೆ ಚೆನ್ನಾಗಿ ಅರಿವಿದೆ. ಜೀವಸುರಕ್ಷಾ ನಿಯಮಗಳನ್ನು ಯಾರೂ ಉಲ್ಲಂಘಿಸಿಲ್ಲ‘ ಎಂದು ಬಿಸಿಸಿಐನ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.</p>.<p>ಕ್ರಿಕೆಟಿಗರಾದ ರೋಹಿತ್ ಶರ್ಮಾ, ರಿಷಭ್ ಪಂತ್, ನವದೀಪ್ ಸೈನಿ ಹಾಗೂ ಶುಭಮನ್ ಗಿಲ್ ರೆಸ್ಟೊರೆಂಟ್ವೊಂದರಲ್ಲಿ ಊಟ ಮಾಡುತ್ತಿರುವ ಚಿತ್ರ ಮತ್ತು ವಿಡಿಯೊಗಳನ್ನುನವಲ್ದೀಪ್ ಸಿಂಗ್ ಎಂಬ ಅಭಿಮಾನಿಯೊಬ್ಬರು ಟ್ವೀಟ್ ಮಾಡಿದ ಬಳಿಕ ಈ ಗೊಂದಲ ಸೃಷ್ಟಿಯಾಗಿತ್ತು.</p>.<p>‘ನಾನು ಆಟಗಾರರ ಪಕ್ಕದ ಸೀಟಿನಲ್ಲಿ ಕುಳಿತುಕೊಂಡಿದ್ದೆ. ಅವರು ಊಟ ಮಾಡಿದ ನಂತರ ಬಿಲ್ ಪಾವತಿಸಿದಾಗ ರಿಷಭ್ ನನ್ನನ್ನು ಆಲಂಗಿಸಿಕೊಂಡರು‘ ಎಂದು ನವಲ್ದೀಪ್ ಹೇಳಿಕೊಂಡಿದ್ದ. ಬಳಿಕ ಈ ರೀತಿಯ ಗೊಂದಲ ಸೃಷ್ಟಿಸಿದ್ದಕ್ಕಾಗಿ ಕ್ಷಮೆ ಯಾಚಿಸಿದ್ದ.</p>.<p>ನಿಯಮಗಳ ಅನ್ವಯ ಆಟಗಾರರು ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ರೆಸ್ಟೊರೆಂಟ್ನಲ್ಲಿ ಊಟ ಮಾಡಲು ಅನುಮತಿ ನೀಡಲಾಗುತ್ತದೆ.</p>.<p>‘ಇದು ಆಸ್ಟ್ರೇಲಿಯಾದ ಕೆಲವು ಮಾಧ್ಯಮಗಳ ದುರುದ್ದೇಶಪೂರಿತ ವರದಿ. ಆಸ್ಟ್ರೇಲಿಯಾ ತಂಡ ಎರಡನೇ ಟೆಸ್ಟ್ನಲ್ಲಿ ಹೀನಾಯವಾಗಿ ಸೋತ ಬಳಿಕ ಇಂತಹ ಕೃತ್ಯಕ್ಕಿಳಿದಿವೆ‘ ಎಂದು ಅಧಿಕಾರಿ ಕಿಡಿ ಕಾರಿದ್ದಾರೆ.</p>.<p>ಮೆಲ್ಬರ್ನ್ನಲ್ಲಿ ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡವು ಎಂಟು ವಿಕೆಟ್ಗಳಿಂದ ಆತಿಥೇಯ ತಂಡವನ್ನು ಸೋಲಿಸಿತ್ತು. ನಾಲ್ಕು ಪಂದ್ಯಗಳ ಸರಣಿಯಲ್ಲಿ 1–1 ಸಮಬಲ ಸಾಧಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>