ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಎಸಿಗೆ ಮದನ್‌ ಲಾಲ್, ಗೌತಮ್ ಗಂಭೀರ್

Last Updated 17 ಫೆಬ್ರುವರಿ 2020, 13:10 IST
ಅಕ್ಷರ ಗಾತ್ರ

ನವದೆಹಲಿ : ಹಿರಿಯ ಕ್ರಿಕೆಟಿಗ ಮದನ್ ಲಾಲ್ ಮತ್ತು ಗೌತಮ್ ಗಂಭೀರ್ ಅವರನ್ನು ಕ್ರಿಕೆಟ್ ಸಲಹಾ ಸಮಿತಿ (ಸಿಎಸಿ)ಗೆ ನೇಮಕ ಮಾಡಲು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ ಸಿದ್ಧವಾಗಿದೆ.

1983ರಲ್ಲಿ ಏಕದಿನ ವಿಶ್ವಕಪ್ ಗೆದ್ದ ಭಾರತ ತಂಡದ ಆಟಗಾರ ಮದನ್ ಮತ್ತು 2011ರ ವಿಶ್ವಕಪ್ ಜಯಿಸಿದ ತಂಡದ ಗಂಭೀರ್ ಅವರ ಈ ಸಮಿತಿಯು ನಾಲ್ಕು ವರ್ಷ ಕಾರ್ಯನಿರ್ವಹಿಸಲಿದೆ.

ಮುಂಬೈನ ಹಿರಿಯ ಆಟಗಾರ್ತಿ ಸುಲಕ್ಷಣಾ ನಾಯಕ ಅವರೂ ಈ ಸಮಿತಿಯಲ್ಲಿ ಸ್ಥಾನ ಪಡೆಯುವ ಸಾಧ್ಯತೆ ಇದೆ. ಸುಲಕ್ಷಣಾ, ಎರಡು ಟೆಸ್ಟ್ ಮತ್ತು 46 ಏಕದಿನ ಪಂದ್ಯ ಗಳನ್ನು ಆಡಿದ್ದಾರೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

ಗಂಭೀರ್ ಅವರು ಸದ್ಯ ಸಂಸದರಾಗಿದ್ದಾರೆ. ಕ್ರಿಕೆಟ್ ವೀಕ್ಷಕ ವಿವರಣೆಗಾರರೂಆಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT