ನವದೆಹಲಿ: ರಾಷ್ಟ್ರಪತಿ ಭವನದಲ್ಲಿ ಈ ವರ್ಷ ಇಫ್ತಾರ್ ಕೂಟ ಏರ್ಪಡಿಸದಿರಲು ರಾಷ್ಟ್ರಪತಿ ರಾಮನಾಥ ಕೋವಿಂದ್ ನಿರ್ಧರಿಸಿದ್ದಾರೆ.
ರಾಷ್ಟ್ರಪತಿ ಭವನ ಸಾರ್ವಜನಿಕ ಕಟ್ಟಡ. ಇಂತಹ ಜಾಗದಲ್ಲಿ ಜನರ ತೆರಿಗೆ ಹಣವನ್ನು ಬಳಸಿ ಯಾವುದೇ ಧಾರ್ಮಿಕ ಆಚರಣೆ ಅಥವಾ ಕಾರ್ಯಕ್ರಮ ಹಮ್ಮಿಕೊಳ್ಳದಿರಲು ಕೋವಿಂದ್ ಅವರು ತೀರ್ಮಾನಿಸಿದ್ದಾರೆ.
‘ಈ ನಿರ್ಧಾರ ದೇಶದ ಜಾತ್ಯತೀತ ತತ್ವಕ್ಕೆ ಅನುಗುಣವಾಗಿದ್ದು, ಯಾವುದೇ ಧರ್ಮದ ಧಾರ್ಮಿಕ ವಿಧಿ/ಆಚರಣೆಗೆ ಅನ್ವಯವಾಗಲಿದೆ’ ಎಂದು ರಾಷ್ಟ್ರಪತಿಗಳ ಮಾಧ್ಯಮ ಕಾರ್ಯದರ್ಶಿ ಅಶೋಕ್ ಮಲಿಕ್ ತಿಳಿಸಿದ್ದಾರೆ.
ಆದರೆ, ಎಲ್ಲ ಧಾರ್ಮಿಕ ಹಬ್ಬಗಳ ಸಂದರ್ಭದಲ್ಲಿ ರಾಷ್ಟ್ರಪತಿ ಅವರು ದೇಶದ ಜನತೆಗೆ ಶುಭಾಶಯ ಕೋರಲಿದ್ದಾರೆ ಎಂದೂ ತಿಳಿಸಿದ್ದಾರೆ.