<p><strong>ದುಬೈ:</strong> ಮುಂದಿನ ವರ್ಷ ಭಾರತದಲ್ಲಿ ಟ್ವೆಂಟಿ–20 ವಿಶ್ವಕಪ್ ಟೂರ್ನಿಯನ್ನು ಅದ್ದೂರಿಯಾಗಿ ಆಯೋಜಿಸಲು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯು ಕಟಿಬದ್ಧವಾಗಿದೆ ಎಂದು ಮಂಡಳಿಯ ಕಾರ್ಯದರ್ಶಿ ಜಯ್ ಶಾ ಹೇಳಿದ್ದಾರೆ.</p>.<p>ಟೂರ್ನಿಯ ಕೌಂಟ್ಡೌನ್ ಲಾಂಛನ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಈ ವರ್ಷದ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯು ಆಸ್ಟ್ರೇಲಿಯಾದಲ್ಲಿ ನಡೆಯಬೇಕಿತ್ತು. ಆದರೆ ಕೊರೊನಾ ಕಾರಣದಿಂದಾಗಿ 2022ಕ್ಕೆ ಮುಂದೂಡಲಾಗಿತ್ತು. ಆದರೆ ಭಾರತದ ಆತಿಥ್ಯದಲ್ಲಿ ನಿಗದಿಯಾಗಿದ್ದ 2021ರ ವಿಶ್ವಕಪ್ ಟೂರ್ನಿಯು ನಡೆಯಲಿದೆ.</p>.<p>’ಆಟಗಾರರು ಮತ್ತು ವಿಶ್ವಕಪ್ ಟೂರ್ನಿಗೆ ಸಂಬಂಧಿಸಿದೆ ಎಲ್ಲ ವ್ಯಕ್ತಿಗಳ ಆರೋಗ್ಯ ರಕ್ಷಣೆ ಮತ್ತು ಸುರಕ್ಷತೆಯನ್ನು ನೋಡಿಕೊಳ್ಳುವುದು ಬಿಸಿಸಿಐ ಹೊಣೆ. ಯಾವ ಲೋಪವೂ ಆಗದಂತೆ ಇಂದಿನ ಪರಿಸ್ಥಿತಿಯ ಸವಾಲುಗಳನ್ನು ಯಶಸ್ವಿಯಾಗಿ ಎದುರಿಸುತ್ತೇವೆ‘ ಎಂದು ಹೇಳಿದರು.</p>.<p>’ಭಾರತವು ಆತ್ಮೀಯ ಆತಿಥ್ಯಕ್ಕೆ ಮೊದಲಿನಿಂದಲೂ ಖ್ಯಾತಿಯಾಗಿದೆ. ಶ್ರೇಷ್ಠವಾದ ಆತಿಥ್ಯವನ್ನು ನಾವು ಈ ಸಲವೂ ನೀಡುತ್ತೇವೆ. ಐಸಿಸಿ ಮತ್ತು ಸದಸ್ಯ ಮಂಡಳಿಗಳಿಗೆ ಇದು ನಮ್ಮ ವಾಗ್ದಾನ‘ ಎಂದು ಶಾ ಹೇಳಿದರು.</p>.<p>ಈ ಸಂದರ್ಭದಲ್ಲಿ ಹಾಜರಿದ್ದ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ, ’ನಾನು ಆಟಗಾರನಾಗಿ ಐಸಿಸಿಯ ಪ್ರಮುಖ ಟೂರ್ನಿಗಳಲ್ಲಿ ಆಡಿದ್ದೇನೆ. ಈಗ ಐಸಿಸಿ ಟೂರ್ನಿಯೊಂದರ ಆತಿಥ್ಯ ವಹಿಸುವ ಸಂಸ್ಥೆಯೊಂದಿಗೆ ಕಾರ್ಯನಿರ್ವಹಿಸುತ್ತಿದ್ದೇನೆ. ವಿಶ್ವಕಪ್ ಟೂರ್ನಿಯ ಪಂದ್ಯಗಳ ವಾತಾವರಣವೇ ಅಮೋಘ. ಅದಕ್ಕೆ ಸರಿಸಾಟಿ ಮತ್ತೊಂದಿಲ್ಲ‘ ಎಂದರು.</p>.<p>’ಸುರಕ್ಷಿತವಾದ ಮತ್ತು ಆರೋಗ್ಯಕರವಾದ ಟೂರ್ನಿಯನ್ನು ಆಯೋಜಿಸುವುದೇ ನಮ್ಮ ಆದ್ಯತೆಯಾಗಲಿದೆ. ನಮ್ಮ ಪ್ರಯತ್ನಿಂದ ಇಡೀ ವಿಶ್ವವು ಕ್ರೀಡೆಯ ಮನರಂಜನೆಯನ್ನು ಅನುಬವಿಸಬೇಕು‘ ಎಂದು ಹೇಳಿದರು.</p>.<p>ಟೂರ್ನಿಯಲ್ಲಿ ಆತಿಥೇಯ ಭಾರತ, ಪಾಕಿಸ್ತಾನ, ಆಸ್ಟ್ರೇಲಿಯಾ, ಇಂಗ್ಲೆಂಡ್, ನ್ಯೂಜಿಲೆಂಡ್, ದಕ್ಷಿಣ ಆಫ್ರಿಕಾ, ಶ್ರೀಲಂಕಾ, ವೆಸ್ಟ್ ಇಡೀಸ್, ಬಾಂಗ್ಲಾದೇಶ, ಆಫ್ಗಾನಿಸ್ತಾನ, ಐರ್ಲೆಂಡ್, ನಮಿಬಿಯಾ, ನೆದರ್ಲೆಂಡ್ಸ್, ಒಮನ್, ಪಪುವಾ ನ್ಯೂಗಿನಿ ಮತ್ತು ಸ್ಕಾಟ್ಲೆಂಡ್ ತಂಡಗಳು ಆಡಲಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದುಬೈ:</strong> ಮುಂದಿನ ವರ್ಷ ಭಾರತದಲ್ಲಿ ಟ್ವೆಂಟಿ–20 ವಿಶ್ವಕಪ್ ಟೂರ್ನಿಯನ್ನು ಅದ್ದೂರಿಯಾಗಿ ಆಯೋಜಿಸಲು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯು ಕಟಿಬದ್ಧವಾಗಿದೆ ಎಂದು ಮಂಡಳಿಯ ಕಾರ್ಯದರ್ಶಿ ಜಯ್ ಶಾ ಹೇಳಿದ್ದಾರೆ.</p>.<p>ಟೂರ್ನಿಯ ಕೌಂಟ್ಡೌನ್ ಲಾಂಛನ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಈ ವರ್ಷದ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯು ಆಸ್ಟ್ರೇಲಿಯಾದಲ್ಲಿ ನಡೆಯಬೇಕಿತ್ತು. ಆದರೆ ಕೊರೊನಾ ಕಾರಣದಿಂದಾಗಿ 2022ಕ್ಕೆ ಮುಂದೂಡಲಾಗಿತ್ತು. ಆದರೆ ಭಾರತದ ಆತಿಥ್ಯದಲ್ಲಿ ನಿಗದಿಯಾಗಿದ್ದ 2021ರ ವಿಶ್ವಕಪ್ ಟೂರ್ನಿಯು ನಡೆಯಲಿದೆ.</p>.<p>’ಆಟಗಾರರು ಮತ್ತು ವಿಶ್ವಕಪ್ ಟೂರ್ನಿಗೆ ಸಂಬಂಧಿಸಿದೆ ಎಲ್ಲ ವ್ಯಕ್ತಿಗಳ ಆರೋಗ್ಯ ರಕ್ಷಣೆ ಮತ್ತು ಸುರಕ್ಷತೆಯನ್ನು ನೋಡಿಕೊಳ್ಳುವುದು ಬಿಸಿಸಿಐ ಹೊಣೆ. ಯಾವ ಲೋಪವೂ ಆಗದಂತೆ ಇಂದಿನ ಪರಿಸ್ಥಿತಿಯ ಸವಾಲುಗಳನ್ನು ಯಶಸ್ವಿಯಾಗಿ ಎದುರಿಸುತ್ತೇವೆ‘ ಎಂದು ಹೇಳಿದರು.</p>.<p>’ಭಾರತವು ಆತ್ಮೀಯ ಆತಿಥ್ಯಕ್ಕೆ ಮೊದಲಿನಿಂದಲೂ ಖ್ಯಾತಿಯಾಗಿದೆ. ಶ್ರೇಷ್ಠವಾದ ಆತಿಥ್ಯವನ್ನು ನಾವು ಈ ಸಲವೂ ನೀಡುತ್ತೇವೆ. ಐಸಿಸಿ ಮತ್ತು ಸದಸ್ಯ ಮಂಡಳಿಗಳಿಗೆ ಇದು ನಮ್ಮ ವಾಗ್ದಾನ‘ ಎಂದು ಶಾ ಹೇಳಿದರು.</p>.<p>ಈ ಸಂದರ್ಭದಲ್ಲಿ ಹಾಜರಿದ್ದ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ, ’ನಾನು ಆಟಗಾರನಾಗಿ ಐಸಿಸಿಯ ಪ್ರಮುಖ ಟೂರ್ನಿಗಳಲ್ಲಿ ಆಡಿದ್ದೇನೆ. ಈಗ ಐಸಿಸಿ ಟೂರ್ನಿಯೊಂದರ ಆತಿಥ್ಯ ವಹಿಸುವ ಸಂಸ್ಥೆಯೊಂದಿಗೆ ಕಾರ್ಯನಿರ್ವಹಿಸುತ್ತಿದ್ದೇನೆ. ವಿಶ್ವಕಪ್ ಟೂರ್ನಿಯ ಪಂದ್ಯಗಳ ವಾತಾವರಣವೇ ಅಮೋಘ. ಅದಕ್ಕೆ ಸರಿಸಾಟಿ ಮತ್ತೊಂದಿಲ್ಲ‘ ಎಂದರು.</p>.<p>’ಸುರಕ್ಷಿತವಾದ ಮತ್ತು ಆರೋಗ್ಯಕರವಾದ ಟೂರ್ನಿಯನ್ನು ಆಯೋಜಿಸುವುದೇ ನಮ್ಮ ಆದ್ಯತೆಯಾಗಲಿದೆ. ನಮ್ಮ ಪ್ರಯತ್ನಿಂದ ಇಡೀ ವಿಶ್ವವು ಕ್ರೀಡೆಯ ಮನರಂಜನೆಯನ್ನು ಅನುಬವಿಸಬೇಕು‘ ಎಂದು ಹೇಳಿದರು.</p>.<p>ಟೂರ್ನಿಯಲ್ಲಿ ಆತಿಥೇಯ ಭಾರತ, ಪಾಕಿಸ್ತಾನ, ಆಸ್ಟ್ರೇಲಿಯಾ, ಇಂಗ್ಲೆಂಡ್, ನ್ಯೂಜಿಲೆಂಡ್, ದಕ್ಷಿಣ ಆಫ್ರಿಕಾ, ಶ್ರೀಲಂಕಾ, ವೆಸ್ಟ್ ಇಡೀಸ್, ಬಾಂಗ್ಲಾದೇಶ, ಆಫ್ಗಾನಿಸ್ತಾನ, ಐರ್ಲೆಂಡ್, ನಮಿಬಿಯಾ, ನೆದರ್ಲೆಂಡ್ಸ್, ಒಮನ್, ಪಪುವಾ ನ್ಯೂಗಿನಿ ಮತ್ತು ಸ್ಕಾಟ್ಲೆಂಡ್ ತಂಡಗಳು ಆಡಲಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>