<p><strong>ಬೆಂಗಳೂರು:</strong> ಕರ್ನಾಟಕ ತಂಡವು ಬಿಸಿಸಿಐ 23 ವರ್ಷದೊಳಗಿನ ಮಹಿಳೆಯರ ಟಿ20 ಟ್ರೋಫಿ ಟೂರ್ನಿಯಲ್ಲಿ ಪ್ರಿಕ್ವಾರ್ಟರ್ಫೈನಲ್ ಪ್ರವೇಶಿಸಿತು.</p>.<p>ಹರಿಯಾಣದ ಸುಲ್ತಾನಪುರದಲ್ಲಿ ಸೋಮವಾರ ನಡೆದ ಎಲೀಟ್ ಗ್ರೂಪ್ ಸಿ ಪಂದ್ಯದಲ್ಲಿ ಕರ್ನಾಟಕ ತಂಡವು 5 ವಿಕೆಟ್ಗಳಿಂದ ತಮಿಳುನಾಡು ಕ್ರಿಕೆಟ್ ಸಂಸ್ಥೆಯ ವಿರುದ್ಧ ಪರಾಭವಗೊಂಡಿತು.</p>.<p>ಟಾಸ್ ಸೋತು ಬ್ಯಾಟಿಂಗ್ಗೆ ಇಳಿಸಲ್ಪಟ್ಟ ರಾಜ್ಯ ತಂಡವು ಐಶ್ವರ್ಯ ಲಕ್ಷ್ಮಿ ಆರ್. (14ಕ್ಕೆ3) ಅವರ ಪರಿಣಾಮಕಾರಿ ಬೌಲಿಂಗ್ ಎದುರು ನಿಗದಿತ ಓವರ್ಗಳಲ್ಲಿ 6 ವಿಕೆಟ್ಗಳಿಗೆ 110 ರನ್ ಗಳಿಸಿತು. ಸಾಧಾರಣ ಗುರಿ ಬೆನ್ನಟ್ಟಿದ ತಮಿಳುನಾಡು ತಂಡವು 19.1 ಓವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ 113 ರನ್ ಗಳಿಸಿ, ಗೆಲುವಿನ ನಗೆ ಬೀರಿತು.</p>.<p>ಗುಂಪು ಹಂತದ ಎಲ್ಲ 5 ಪಂದ್ಯಗಳಲ್ಲಿ ಗೆಲುವು ಸಾಧಿಸಿದ ತಮಿಳುನಾಡು ತಂಡವು (20 ಪಾಯಿಂಟ್ಸ್) ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಪಡೆದರೆ, ಮೂರು ಪಂದ್ಯ ಗೆದ್ದು ಎರಡರಲ್ಲಿ ಸೋತ ರೋಷಿಣಿ ಕಿರಣ್ ಪಡೆಯು (12 ಅಂಕ) ಎರಡನೇ ಸ್ಥಾನ ಪಡೆಯಿತು. ಈ ಎರಡೂ ತಂಡಗಳು ಡಿಸೆಂಬರ್ 5ರಿಂದ ಅಹಮದಾಬಾದ್ನಲ್ಲಿ ನಡೆಯಲಿರುವ ಪ್ರಿಕ್ವಾರ್ಟರ್ ಸುತ್ತಿಗೆ ಅರ್ಹತೆ ಪಡೆದುಕೊಂಡವು.</p>.<p>ರಾಜ್ಯ ತಂಡವು ನಾಕೌಟ್ ಸುತ್ತಿನಲ್ಲಿ ಪಂಜಾಬ್ ವಿರುದ್ಧ ಆಡಲಿದೆ.</p>.<p><strong>ಸಂಕ್ಷಿಪ್ತ ಸ್ಕೋರು:</strong> </p><p><strong>ಕರ್ನಾಟಕ:</strong> 20 ಓವರ್ಗಳಲ್ಲಿ 6 ವಿಕೆಟ್ಗಳಿಗೆ 110 (ನಿಕಿ ಪ್ರಸಾದ್ 37, ಪ್ರೇರಣಾ ಜಿ.ಆರ್. 31; ಐಶ್ವರ್ಯ ಲಕ್ಷ್ಮಿ ಆರ್. 14ಕ್ಕೆ3). </p><p><strong>ತಮಿಳುನಾಡು:</strong> 19.1 ಓವರ್ಗಳಲ್ಲಿ 5 ವಿಕೆಟ್ಗಳಿಗೆ 113 (ಎನ್.ಎಸ್.ಸುಬ್ಬಲಕ್ಷ್ಮಿ 32, ಸಿ.ಶುಶಾಂಧಿಕಾ 25; ಅನನ್ಯಾ ಹೆಗ್ಡೆ 17ಕ್ಕೆ1).</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕರ್ನಾಟಕ ತಂಡವು ಬಿಸಿಸಿಐ 23 ವರ್ಷದೊಳಗಿನ ಮಹಿಳೆಯರ ಟಿ20 ಟ್ರೋಫಿ ಟೂರ್ನಿಯಲ್ಲಿ ಪ್ರಿಕ್ವಾರ್ಟರ್ಫೈನಲ್ ಪ್ರವೇಶಿಸಿತು.</p>.<p>ಹರಿಯಾಣದ ಸುಲ್ತಾನಪುರದಲ್ಲಿ ಸೋಮವಾರ ನಡೆದ ಎಲೀಟ್ ಗ್ರೂಪ್ ಸಿ ಪಂದ್ಯದಲ್ಲಿ ಕರ್ನಾಟಕ ತಂಡವು 5 ವಿಕೆಟ್ಗಳಿಂದ ತಮಿಳುನಾಡು ಕ್ರಿಕೆಟ್ ಸಂಸ್ಥೆಯ ವಿರುದ್ಧ ಪರಾಭವಗೊಂಡಿತು.</p>.<p>ಟಾಸ್ ಸೋತು ಬ್ಯಾಟಿಂಗ್ಗೆ ಇಳಿಸಲ್ಪಟ್ಟ ರಾಜ್ಯ ತಂಡವು ಐಶ್ವರ್ಯ ಲಕ್ಷ್ಮಿ ಆರ್. (14ಕ್ಕೆ3) ಅವರ ಪರಿಣಾಮಕಾರಿ ಬೌಲಿಂಗ್ ಎದುರು ನಿಗದಿತ ಓವರ್ಗಳಲ್ಲಿ 6 ವಿಕೆಟ್ಗಳಿಗೆ 110 ರನ್ ಗಳಿಸಿತು. ಸಾಧಾರಣ ಗುರಿ ಬೆನ್ನಟ್ಟಿದ ತಮಿಳುನಾಡು ತಂಡವು 19.1 ಓವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ 113 ರನ್ ಗಳಿಸಿ, ಗೆಲುವಿನ ನಗೆ ಬೀರಿತು.</p>.<p>ಗುಂಪು ಹಂತದ ಎಲ್ಲ 5 ಪಂದ್ಯಗಳಲ್ಲಿ ಗೆಲುವು ಸಾಧಿಸಿದ ತಮಿಳುನಾಡು ತಂಡವು (20 ಪಾಯಿಂಟ್ಸ್) ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಪಡೆದರೆ, ಮೂರು ಪಂದ್ಯ ಗೆದ್ದು ಎರಡರಲ್ಲಿ ಸೋತ ರೋಷಿಣಿ ಕಿರಣ್ ಪಡೆಯು (12 ಅಂಕ) ಎರಡನೇ ಸ್ಥಾನ ಪಡೆಯಿತು. ಈ ಎರಡೂ ತಂಡಗಳು ಡಿಸೆಂಬರ್ 5ರಿಂದ ಅಹಮದಾಬಾದ್ನಲ್ಲಿ ನಡೆಯಲಿರುವ ಪ್ರಿಕ್ವಾರ್ಟರ್ ಸುತ್ತಿಗೆ ಅರ್ಹತೆ ಪಡೆದುಕೊಂಡವು.</p>.<p>ರಾಜ್ಯ ತಂಡವು ನಾಕೌಟ್ ಸುತ್ತಿನಲ್ಲಿ ಪಂಜಾಬ್ ವಿರುದ್ಧ ಆಡಲಿದೆ.</p>.<p><strong>ಸಂಕ್ಷಿಪ್ತ ಸ್ಕೋರು:</strong> </p><p><strong>ಕರ್ನಾಟಕ:</strong> 20 ಓವರ್ಗಳಲ್ಲಿ 6 ವಿಕೆಟ್ಗಳಿಗೆ 110 (ನಿಕಿ ಪ್ರಸಾದ್ 37, ಪ್ರೇರಣಾ ಜಿ.ಆರ್. 31; ಐಶ್ವರ್ಯ ಲಕ್ಷ್ಮಿ ಆರ್. 14ಕ್ಕೆ3). </p><p><strong>ತಮಿಳುನಾಡು:</strong> 19.1 ಓವರ್ಗಳಲ್ಲಿ 5 ವಿಕೆಟ್ಗಳಿಗೆ 113 (ಎನ್.ಎಸ್.ಸುಬ್ಬಲಕ್ಷ್ಮಿ 32, ಸಿ.ಶುಶಾಂಧಿಕಾ 25; ಅನನ್ಯಾ ಹೆಗ್ಡೆ 17ಕ್ಕೆ1).</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>