<p><strong>ಕರಾಚಿ:</strong> ಎಲ್ಲ ಲೆಕ್ಕಾಚಾರಗಳನ್ನು ಬದಿಗೆ ಸರಿಸಿ ಟ್ವೆಂಟಿ-20 ವಿಶ್ವಕಪ್ನಲ್ಲಿ ಭಾರತ ವಿರುದ್ಧ ದಾಖಲಿಸಿದ ಗೆಲುವು ಪಾಕಿಸ್ತಾನ ತಂಡದ ಪಾಲಿಗೆ 2021ನೇ ವರ್ಷದ 'ಅತ್ಯುತ್ತಮ ಕ್ಷಣ' ಎಂದು ನಾಯಕ ಬಾಬರ್ ಆಜಂ ತಿಳಿಸಿದ್ದಾರೆ.</p>.<p>ಇದೇ ಮೊದಲ ಬಾರಿಗೆ ವಿಶ್ವಕಪ್ನಲ್ಲಿ (ಏಕದಿನ ಹಾಗೂ ಟ್ವೆಂಟಿ-20 ಸೇರಿದಂತೆ ) ಭಾರತ ವಿರುದ್ಧ ಪಾಕಿಸ್ತಾನ ತಂಡವು ಗೆಲುವು ದಾಖಲಿಸಿತ್ತು.</p>.<p>ಇದನ್ನೂ ಓದಿ:<a href="https://www.prajavani.net/sports/cricket/indias-asia-cup-win-ideal-confidence-booster-for-u-19-world-cup-laxman-898165.html" itemprop="url">ಏಷ್ಯಾಕಪ್ ಗೆಲುವಿನಿಂದ ಯುವ ತಂಡದ ವಿಶ್ವಾಸ ವೃದ್ಧಿ: ಲಕ್ಷ್ಮಣ್ </a></p>.<p>ಕೊರೊನಾ ಹಿನ್ನೆಲೆಯಲ್ಲಿ ಯುಎಇ ಹಾಗೂ ಒಮಾನ್ನಲ್ಲಿ ಬಿಸಿಸಿಐ ಆಯೋಜಿಸಿದ್ದ ಟ್ವೆಂಟಿ-20 ವಿಶ್ವಕಪ್ ಪಂದ್ಯದಲ್ಲಿ ಭಾರತ ವಿರುದ್ಧ ಪಾಕಿಸ್ತಾನ 10 ವಿಕೆಟ್ ಅಂತರದ ಭರ್ಜರಿ ಗೆಲುವು ದಾಖಲಿಸಿತ್ತು.</p>.<p>ಏತನ್ಮಧ್ಯೆ ಟ್ವೆಂಟಿ-20 ವಿಶ್ವಕಪ್ನಲ್ಲಿ ಸೆಮಿಫೈನಲ್ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಎದುರಾದ ಸೋಲು ಅತಿ ಹೆಚ್ಚು ನೋವನ್ನು ಉಂಟು ಮಾಡಿತ್ತು ಎಂದು ಹೇಳಿದ್ದಾರೆ.</p>.<p>'ವಿಶ್ವಕಪ್ನಲ್ಲಿ ಭಾರತವನ್ನು ಸೋಲಿಸಲು ಸಾಧ್ಯವಾಗಿರುವುದು ನಿಜಕ್ಕೂ ಮಹತ್ತರ ಸಾಧನೆಯಾಗಿದೆ. ಕಳೆದ ಹಲವಾರು ವರ್ಷಗಳಿಂದ ವಿಶ್ವಕಪ್ನಲ್ಲಿ ಭಾರತವನ್ನು ಸೋಲಿಸಲು ಸಾಧ್ಯವಾಗಿರಲಿಲ್ಲ. ಇದುವೇ 2021ರಲ್ಲಿ ಪಾಕಿಸ್ತಾನದ ತಂಡದ ಪಾಲಿಗೆ ಅತ್ಯುತ್ತಮ ಕ್ಷಣ' ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕರಾಚಿ:</strong> ಎಲ್ಲ ಲೆಕ್ಕಾಚಾರಗಳನ್ನು ಬದಿಗೆ ಸರಿಸಿ ಟ್ವೆಂಟಿ-20 ವಿಶ್ವಕಪ್ನಲ್ಲಿ ಭಾರತ ವಿರುದ್ಧ ದಾಖಲಿಸಿದ ಗೆಲುವು ಪಾಕಿಸ್ತಾನ ತಂಡದ ಪಾಲಿಗೆ 2021ನೇ ವರ್ಷದ 'ಅತ್ಯುತ್ತಮ ಕ್ಷಣ' ಎಂದು ನಾಯಕ ಬಾಬರ್ ಆಜಂ ತಿಳಿಸಿದ್ದಾರೆ.</p>.<p>ಇದೇ ಮೊದಲ ಬಾರಿಗೆ ವಿಶ್ವಕಪ್ನಲ್ಲಿ (ಏಕದಿನ ಹಾಗೂ ಟ್ವೆಂಟಿ-20 ಸೇರಿದಂತೆ ) ಭಾರತ ವಿರುದ್ಧ ಪಾಕಿಸ್ತಾನ ತಂಡವು ಗೆಲುವು ದಾಖಲಿಸಿತ್ತು.</p>.<p>ಇದನ್ನೂ ಓದಿ:<a href="https://www.prajavani.net/sports/cricket/indias-asia-cup-win-ideal-confidence-booster-for-u-19-world-cup-laxman-898165.html" itemprop="url">ಏಷ್ಯಾಕಪ್ ಗೆಲುವಿನಿಂದ ಯುವ ತಂಡದ ವಿಶ್ವಾಸ ವೃದ್ಧಿ: ಲಕ್ಷ್ಮಣ್ </a></p>.<p>ಕೊರೊನಾ ಹಿನ್ನೆಲೆಯಲ್ಲಿ ಯುಎಇ ಹಾಗೂ ಒಮಾನ್ನಲ್ಲಿ ಬಿಸಿಸಿಐ ಆಯೋಜಿಸಿದ್ದ ಟ್ವೆಂಟಿ-20 ವಿಶ್ವಕಪ್ ಪಂದ್ಯದಲ್ಲಿ ಭಾರತ ವಿರುದ್ಧ ಪಾಕಿಸ್ತಾನ 10 ವಿಕೆಟ್ ಅಂತರದ ಭರ್ಜರಿ ಗೆಲುವು ದಾಖಲಿಸಿತ್ತು.</p>.<p>ಏತನ್ಮಧ್ಯೆ ಟ್ವೆಂಟಿ-20 ವಿಶ್ವಕಪ್ನಲ್ಲಿ ಸೆಮಿಫೈನಲ್ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಎದುರಾದ ಸೋಲು ಅತಿ ಹೆಚ್ಚು ನೋವನ್ನು ಉಂಟು ಮಾಡಿತ್ತು ಎಂದು ಹೇಳಿದ್ದಾರೆ.</p>.<p>'ವಿಶ್ವಕಪ್ನಲ್ಲಿ ಭಾರತವನ್ನು ಸೋಲಿಸಲು ಸಾಧ್ಯವಾಗಿರುವುದು ನಿಜಕ್ಕೂ ಮಹತ್ತರ ಸಾಧನೆಯಾಗಿದೆ. ಕಳೆದ ಹಲವಾರು ವರ್ಷಗಳಿಂದ ವಿಶ್ವಕಪ್ನಲ್ಲಿ ಭಾರತವನ್ನು ಸೋಲಿಸಲು ಸಾಧ್ಯವಾಗಿರಲಿಲ್ಲ. ಇದುವೇ 2021ರಲ್ಲಿ ಪಾಕಿಸ್ತಾನದ ತಂಡದ ಪಾಲಿಗೆ ಅತ್ಯುತ್ತಮ ಕ್ಷಣ' ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>