ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭುವನೇಶ್ವರ್ ಅಲಭ್ಯ: ಶಾರ್ದೂಲ್‌ಗೆ ಅವಕಾಶ?

Last Updated 14 ಡಿಸೆಂಬರ್ 2019, 5:48 IST
ಅಕ್ಷರ ಗಾತ್ರ

ಚೆನ್ನೈ: ಭಾರತ ಕ್ರಿಕೆಟ್ ತಂಡದ ಅನುಭವಿ ಬೌಲರ್ ಭುವನೇಶ್ವರ್ ಕುಮಾರ್ ಅವರು ಗಾಯಗೊಂಡಿದ್ದು ವೆಸ್ಟ್ ಇಂಡೀಸ್ ಎದುರಿನ ಏಕದಿನ ಸರಣಿಗೆ ಅಲಭ್ಯರಾಗಿದ್ದಾರೆ.

ಅವರ ಬದಲಿಗೆ ಮುಂಬೈನ ಶಾರ್ದೂಲ್ ಠಾಕೂರ್ ಅವರಿಗೆ ಅವಕಾಶ ನೀಡುವ ಸಾಧ್ಯತೆ ಇದೆ.

ಉತ್ತರಪ್ರದೇಶದ ಭುವಿ ಅವರು ಸ್ನಾಯುಸೆಳೆತ ಅನುಭವಿಸುತ್ತಿದ್ದಾರೆ. ವೈದ್ಯರು ಅವರಿಗೆ ವಿಶ್ರಾಂತಿ ತೆಗೆದುಕೊಳ್ಳಲು ಸಲಹೆ ನೀಡಿದ್ದಾರೆ.

ವಿಂಡಿಸ್ ಎದುರಿನ ಟಿ20 ಸರಣಿಯಲ್ಲಿ ಅವರು ಆಡಿದ್ದರು. ಅದಕ್ಕೂ ಮುನ್ನ ಅವರು ಗಾಯದ ಚಿಕಿತ್ಸೆ ಪಡೆದು ಮರಳಿದ್ದರು. ಆದ್ದರಿಂದ ಬಾಂಗ್ಲಾದೇಶ ವಿರುದ್ಧದ ಸರಣಿಯಲ್ಲಿ ಶಾರ್ದೂಲ್ ಆಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT