<p><strong>ದುಬೈ:</strong> ಪುನರಾಗಮನದ ಸರಣಿಯಲ್ಲೇ ಭಾರತದ ಬಲಗೈ ಅನುಭವಿ ವೇಗದ ಬೌಲರ್ ಭುವನೇಶ್ವರ್ ಕುಮಾರ್, ಐಸಿಸಿ 'ತಿಂಗಳ ಆಟಗಾರ' ಪ್ರಶಸ್ತಿಗೆ ಭಾಜನರಾಗಿದ್ದಾರೆ.</p>.<p>ಗಾಯದಿಂದಾಗಿ ಸುದೀರ್ಘ ಸಮಯ ಭುವಿ ತಂಡದಿಂದ ಹೊರಗುಳಿದಿದ್ದರು. ಇತ್ತೀಚೆಗಷ್ಟೇ ತವರಿನಲ್ಲಿ ಇಂಗ್ಲೆಂಡ್ ವಿರುದ್ಧ ನಡೆದ ಟ್ವೆಂಟಿ-20 ಹಾಗೂ ಏಕದಿನ ಸರಣಿಯಲ್ಲಿ ಭರ್ಜರಿ ಪುನರಾಗಮನ ಮಾಡಿದ್ದರು.</p>.<p>ಇದನ್ನೂ ಓದಿ:<a href="https://www.prajavani.net/sports/cricket/confident-padikkal-wants-to-take-domestic-form-into-ipl-821962.html" itemprop="url">IPL 2021: ಹೈದರಾಬಾದ್ ಸವಾಲು ಮೀರುವುದೇ ಆರ್ಸಿಬಿ? </a></p>.<p>ಮಾರ್ಚ್ ತಿಂಗಳಲ್ಲಿ ನಡೆದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 31 ವರ್ಷದ ಭುವಿ 4.65ರ ಎಕಾನಮಿ ರೇಟ್ನಲ್ಲಿ ಆರು ವಿಕೆಟ್ಗಳನ್ನು ಕಬಳಿಸಿದ್ದರು. ಹಾಗೆಯೇ ಐದು ಪಂದ್ಯಗಳಟಿ20 ಸರಣಿಯಲ್ಲಿ 6.38ರ ಎಕಾನಮಿ ರೇಟ್ನಲ್ಲಿನಾಲ್ಕುವಿಕೆಟ್ಗಳನ್ನು ಪಡೆದಿದ್ದರು. ಈ ಮೂಲಕ ಭಾರತದ ಸರಣಿ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದ್ದರು.</p>.<p>'ಅತ್ಯಂತ ನೋವಿನ ದೀರ್ಘ ಅಂತರದ ಬಳಿಕ ಭಾರತಕ್ಕೆ ಮತ್ತೆ ಆಡಲು ಸಾಧ್ಯವಾಗಿರುವುದು ಅತ್ಯಂತ ಖುಷಿ ನೀಡಿದೆ. ಈ ಸಮಯದಲ್ಲಿ ನಾನು ಫಿಟ್ನೆಸ್ ಹಾಗೂ ಕೌಶಲ್ಯ ವೃದ್ಧಿಯತ್ತ ಗಮನ ಹರಿಸಿದ್ದೆ. ದೇಶಕ್ಕಾಗಿ ಮತ್ತೆ ವಿಕೆಟ್ ಗಳಿಸಲು ಸಾಧ್ಯವಾಗಿರುವುದು ಸಂತೃಪ್ತಿಯನ್ನು ನೀಡಿದೆ' ಎಂದು ಭುವಿ ಹೇಳಿಕೆಯನ್ನು ಐಸಿಸಿ ಪ್ರಕಟಿಸಿದೆ.</p>.<p>ವರ್ಷಾರಂಭದಲ್ಲಿ ಐಸಿಸಿ ಪರಿಚಯಿಸಿರುವ ತಿಂಗಳ ಆಟಗಾರ ಪ್ರಶಸ್ತಿ ಪಟ್ಟಿಯಲ್ಲಿ ಸತತ ಮೂರನೇ ಬಾರಿಗೆ ಭಾರತೀಯ ಆಟಗಾರರೂ ಪ್ರಶಸ್ತಿಗೆ ಭಾಜನವಾಗಿದ್ದಾರೆ. ಈ ಮೊದಲು ಜನವರಿ ತಿಂಗಳಲ್ಲಿ ರಿಷಭ್ ಪಂತ್ ಮತ್ತು ಫೆಬ್ರವರಿ ತಿಂಗಳಲ್ಲಿ ರವಿಚಂದ್ರನ್ ಅಶ್ವಿನ್ ಪ್ರಶಸ್ತಿ ಗಿಟ್ಟಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದುಬೈ:</strong> ಪುನರಾಗಮನದ ಸರಣಿಯಲ್ಲೇ ಭಾರತದ ಬಲಗೈ ಅನುಭವಿ ವೇಗದ ಬೌಲರ್ ಭುವನೇಶ್ವರ್ ಕುಮಾರ್, ಐಸಿಸಿ 'ತಿಂಗಳ ಆಟಗಾರ' ಪ್ರಶಸ್ತಿಗೆ ಭಾಜನರಾಗಿದ್ದಾರೆ.</p>.<p>ಗಾಯದಿಂದಾಗಿ ಸುದೀರ್ಘ ಸಮಯ ಭುವಿ ತಂಡದಿಂದ ಹೊರಗುಳಿದಿದ್ದರು. ಇತ್ತೀಚೆಗಷ್ಟೇ ತವರಿನಲ್ಲಿ ಇಂಗ್ಲೆಂಡ್ ವಿರುದ್ಧ ನಡೆದ ಟ್ವೆಂಟಿ-20 ಹಾಗೂ ಏಕದಿನ ಸರಣಿಯಲ್ಲಿ ಭರ್ಜರಿ ಪುನರಾಗಮನ ಮಾಡಿದ್ದರು.</p>.<p>ಇದನ್ನೂ ಓದಿ:<a href="https://www.prajavani.net/sports/cricket/confident-padikkal-wants-to-take-domestic-form-into-ipl-821962.html" itemprop="url">IPL 2021: ಹೈದರಾಬಾದ್ ಸವಾಲು ಮೀರುವುದೇ ಆರ್ಸಿಬಿ? </a></p>.<p>ಮಾರ್ಚ್ ತಿಂಗಳಲ್ಲಿ ನಡೆದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 31 ವರ್ಷದ ಭುವಿ 4.65ರ ಎಕಾನಮಿ ರೇಟ್ನಲ್ಲಿ ಆರು ವಿಕೆಟ್ಗಳನ್ನು ಕಬಳಿಸಿದ್ದರು. ಹಾಗೆಯೇ ಐದು ಪಂದ್ಯಗಳಟಿ20 ಸರಣಿಯಲ್ಲಿ 6.38ರ ಎಕಾನಮಿ ರೇಟ್ನಲ್ಲಿನಾಲ್ಕುವಿಕೆಟ್ಗಳನ್ನು ಪಡೆದಿದ್ದರು. ಈ ಮೂಲಕ ಭಾರತದ ಸರಣಿ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದ್ದರು.</p>.<p>'ಅತ್ಯಂತ ನೋವಿನ ದೀರ್ಘ ಅಂತರದ ಬಳಿಕ ಭಾರತಕ್ಕೆ ಮತ್ತೆ ಆಡಲು ಸಾಧ್ಯವಾಗಿರುವುದು ಅತ್ಯಂತ ಖುಷಿ ನೀಡಿದೆ. ಈ ಸಮಯದಲ್ಲಿ ನಾನು ಫಿಟ್ನೆಸ್ ಹಾಗೂ ಕೌಶಲ್ಯ ವೃದ್ಧಿಯತ್ತ ಗಮನ ಹರಿಸಿದ್ದೆ. ದೇಶಕ್ಕಾಗಿ ಮತ್ತೆ ವಿಕೆಟ್ ಗಳಿಸಲು ಸಾಧ್ಯವಾಗಿರುವುದು ಸಂತೃಪ್ತಿಯನ್ನು ನೀಡಿದೆ' ಎಂದು ಭುವಿ ಹೇಳಿಕೆಯನ್ನು ಐಸಿಸಿ ಪ್ರಕಟಿಸಿದೆ.</p>.<p>ವರ್ಷಾರಂಭದಲ್ಲಿ ಐಸಿಸಿ ಪರಿಚಯಿಸಿರುವ ತಿಂಗಳ ಆಟಗಾರ ಪ್ರಶಸ್ತಿ ಪಟ್ಟಿಯಲ್ಲಿ ಸತತ ಮೂರನೇ ಬಾರಿಗೆ ಭಾರತೀಯ ಆಟಗಾರರೂ ಪ್ರಶಸ್ತಿಗೆ ಭಾಜನವಾಗಿದ್ದಾರೆ. ಈ ಮೊದಲು ಜನವರಿ ತಿಂಗಳಲ್ಲಿ ರಿಷಭ್ ಪಂತ್ ಮತ್ತು ಫೆಬ್ರವರಿ ತಿಂಗಳಲ್ಲಿ ರವಿಚಂದ್ರನ್ ಅಶ್ವಿನ್ ಪ್ರಶಸ್ತಿ ಗಿಟ್ಟಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>