ಭೋಪಾಲ್: ಡಿ. ವೆಂಕಟೇಶ್ಚರ ರಾವ್ (50, 33 ಎಸೆತ, 4X10) ಗಳಿಸಿದ ಅರ್ಧಶತಕದ ನೆರವಿನಿಂದ ಭಾರತ ಅಂಧರ ಕ್ರಿಕೆಟ್ ತಂಡವು ಎರಡನೇ ಏಕದಿನ ಪಂದ್ಯದಲ್ಲಿ ಬಾಂಗ್ಲಾದೇಶ ತಂಡವನ್ನು ನಾಲ್ಕು ವಿಕೆಟ್ಗಳಿಂದ ಮಣಿಸಿತು. ಇದರೊಂದಿಗೆ ಮೂರು ಪಂದ್ಯಗಳ ಸರಣಿಯಲ್ಲಿ 2–0 ಮುನ್ನಡೆ ಸಾಧಿಸಿತು.
ಇಲ್ಲಿಯ ಫೇಥ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯವನ್ನು ಮಳೆಯ ಕಾರಣ 25 ಓವರ್ಗಳಿಗೆ ಸಿಮೀತಗೊಳಿಸಲಾಗಿತ್ತು. ಮೊದಲು ಬ್ಯಾಟ್ ಮಾಡಿದ ಬಾಂಗ್ಲಾದೇಶ ಮೊಹಮ್ಮದ್ ಅಸ್ಮತ್ ಅಲಿ (44) ಹಾಗೂ ಮೊಹಮ್ಮದ್ ಅಶಿಕುರ್ ರಹಮಾನ್ (31) ಅವರ ಉತ್ತಮ ಬ್ಯಾಟಿಂಗ್ ಬಲದಿಂದ ಏಳು ವಿಕೆಟ್ಗೆ 196 ರನ್ ಗಳಿಸಿತು.
ಗುರಿ ಬೆನ್ನತ್ತಿದ ಭಾರತ ಅಗ್ರ ಕ್ರಮಾಂಕದ ಆಟಗಾರರನ್ನು ಅಲ್ಪಮೊತ್ತಕ್ಕೆ ಕಳೆದುಕೊಂಡಿತು. ವೆಂಕಟೇಶ್ವರ ಮತ್ತು ರೋಹಿತ್ ಶರ್ಮಾ (36) ತಂಡಕ್ಕೆ ಗೆಲುವು ದೊರಕಿಸಿಕೊಡುವಲ್ಲಿ ಪ್ರಮುಖ ಪಾತ್ರ ವಹಿಸಿದರು. ಭಾರತ 19.2 ಓವರ್ಗಳಲ್ಲಿ 6 ವಿಕೆಟ್ ಕಳೆದು ಕೊಂಡು ಜಯದ ಗುರಿ ತಲುಪಿತು.