<p><strong>ಮೈಸೂರು</strong>: ನಾಯಕ ಸುನಿಲ್ ರಮೇಶ್ ಅವರ ಭರ್ಜರಿ ದ್ವಿಶತಕದ ನೆರವಿನಿಂದ ಕರ್ನಾಟಕ ತಂಡ ಇಂಡಸ್ಇಂಡ್ ಬ್ಯಾಂಕ್ ನಾಗೇಶ್ ಟ್ರೋಫಿ ಅಂಧರ ಟ್ವೆಂಟಿ–20 ಕ್ರಿಕೆಟ್ ಟೂರ್ನಿಯಲ್ಲಿ ಗೋವಾ ವಿರುದ್ಧ 158 ರನ್ಗಳ ಜಯ ಸಾಧಿಸಿತು.</p>.<p>ಎಸ್ಜೆಸಿಇ ಮೈದಾನದಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕರ್ನಾಟಕ 17 ಓವರ್ಗಳಲ್ಲಿ 2 ವಿಕೆಟ್ಗೆ 256 ರನ್ ಪೇರಿಸಿತು. ಅಜೇಯ 206 (69 ಎಸೆತ, 46 ಬೌಂಡರಿ) ರನ್ ಗಳಿಸಿದ ಸುನಿಲ್ ಈ ಟೂರ್ನಿಯಲ್ಲಿ ದ್ವಿಶತಕ ಗಳಿಸಿದ ಮೊದಲ ಬ್ಯಾಟ್ಸ್ಮನ್ ಎನಿಸಿಕೊಂಡರು. ಗೋವಾ ತಂಡ ನಿಗದಿತ ಓವರ್ಗಳಲ್ಲಿ ಐದು ವಿಕೆಟ್ಗೆ 98 ರನ್ ಗಳಿಸಲಷ್ಟೇ ಶಕ್ತವಾಯಿತು. ಬೆಳಿಗ್ಗೆ ಮಳೆ ಸುರಿದ ಕಾರಣ ಓವರ್ಗಳ ಸಂಖ್ಯೆಯನ್ನು 17ಕ್ಕೆ ಇಳಿಸಲಾಗಿತ್ತು.</p>.<p>ಮೈಸೂರು ಲೆಗ್ನ ಪಂದ್ಯಗಳು ಕೊನೆಗೊಂಡಿದ್ದು, ಆಡಿದ ಮೂರೂ ಪಂದ್ಯಗಳಲ್ಲಿ ಗೆದ್ದ ಕರ್ನಾಟಕ ತಂಡ ‘ಎ’ ಗುಂಪಿನಲ್ಲಿ ಅಗ್ರಸ್ಥಾನ ಪಡೆದು ಕ್ವಾರ್ಟರ್ ಫೈನಲ್ ಪ್ರವೇಶಿಸಿತು. ಟೂರ್ನಿಯ ಮುಂದಿನ ಲೆಗ್ನ ಪಂದ್ಯಗಳು ಫರೀದಾಬಾದ್ನಲ್ಲಿ ಆಯೋಜನೆಯಾಗಿವೆ. ಕ್ವಾರ್ಟರ್ ಫೈನಲ್ ಪಂದ್ಯಗಳು ಜನವರಿಯಲ್ಲಿ ನಡೆಯಲಿವೆ.</p>.<p>ಸಂಕ್ಷಿಪ್ತ ಸ್ಕೋರ್: ಕರ್ನಾಟಕ 17 ಓವರ್ಗಳಲ್ಲಿ 2 ವಿಕೆಟ್ಗೆ 256 (ಸುನಿಲ್ ರಮೇಶ್ 206, ಅಭಿ 15) ಗೋವಾ 17 ಓವರ್ಗಳಲ್ಲಿ 5 ವಿಕೆಟ್ಗೆ 98 (ಸಂದೀಪ್ 22, ನೀಲೇಶ್ 17) ಫಲಿತಾಂಶ: ಕರ್ನಾಟಕಕ್ಕೆ 158 ರನ್ಗಳ ಗೆಲುವು; ಪಂದ್ಯಶ್ರೇಷ್ಠ: ಸುನಿಲ್</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ನಾಯಕ ಸುನಿಲ್ ರಮೇಶ್ ಅವರ ಭರ್ಜರಿ ದ್ವಿಶತಕದ ನೆರವಿನಿಂದ ಕರ್ನಾಟಕ ತಂಡ ಇಂಡಸ್ಇಂಡ್ ಬ್ಯಾಂಕ್ ನಾಗೇಶ್ ಟ್ರೋಫಿ ಅಂಧರ ಟ್ವೆಂಟಿ–20 ಕ್ರಿಕೆಟ್ ಟೂರ್ನಿಯಲ್ಲಿ ಗೋವಾ ವಿರುದ್ಧ 158 ರನ್ಗಳ ಜಯ ಸಾಧಿಸಿತು.</p>.<p>ಎಸ್ಜೆಸಿಇ ಮೈದಾನದಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕರ್ನಾಟಕ 17 ಓವರ್ಗಳಲ್ಲಿ 2 ವಿಕೆಟ್ಗೆ 256 ರನ್ ಪೇರಿಸಿತು. ಅಜೇಯ 206 (69 ಎಸೆತ, 46 ಬೌಂಡರಿ) ರನ್ ಗಳಿಸಿದ ಸುನಿಲ್ ಈ ಟೂರ್ನಿಯಲ್ಲಿ ದ್ವಿಶತಕ ಗಳಿಸಿದ ಮೊದಲ ಬ್ಯಾಟ್ಸ್ಮನ್ ಎನಿಸಿಕೊಂಡರು. ಗೋವಾ ತಂಡ ನಿಗದಿತ ಓವರ್ಗಳಲ್ಲಿ ಐದು ವಿಕೆಟ್ಗೆ 98 ರನ್ ಗಳಿಸಲಷ್ಟೇ ಶಕ್ತವಾಯಿತು. ಬೆಳಿಗ್ಗೆ ಮಳೆ ಸುರಿದ ಕಾರಣ ಓವರ್ಗಳ ಸಂಖ್ಯೆಯನ್ನು 17ಕ್ಕೆ ಇಳಿಸಲಾಗಿತ್ತು.</p>.<p>ಮೈಸೂರು ಲೆಗ್ನ ಪಂದ್ಯಗಳು ಕೊನೆಗೊಂಡಿದ್ದು, ಆಡಿದ ಮೂರೂ ಪಂದ್ಯಗಳಲ್ಲಿ ಗೆದ್ದ ಕರ್ನಾಟಕ ತಂಡ ‘ಎ’ ಗುಂಪಿನಲ್ಲಿ ಅಗ್ರಸ್ಥಾನ ಪಡೆದು ಕ್ವಾರ್ಟರ್ ಫೈನಲ್ ಪ್ರವೇಶಿಸಿತು. ಟೂರ್ನಿಯ ಮುಂದಿನ ಲೆಗ್ನ ಪಂದ್ಯಗಳು ಫರೀದಾಬಾದ್ನಲ್ಲಿ ಆಯೋಜನೆಯಾಗಿವೆ. ಕ್ವಾರ್ಟರ್ ಫೈನಲ್ ಪಂದ್ಯಗಳು ಜನವರಿಯಲ್ಲಿ ನಡೆಯಲಿವೆ.</p>.<p>ಸಂಕ್ಷಿಪ್ತ ಸ್ಕೋರ್: ಕರ್ನಾಟಕ 17 ಓವರ್ಗಳಲ್ಲಿ 2 ವಿಕೆಟ್ಗೆ 256 (ಸುನಿಲ್ ರಮೇಶ್ 206, ಅಭಿ 15) ಗೋವಾ 17 ಓವರ್ಗಳಲ್ಲಿ 5 ವಿಕೆಟ್ಗೆ 98 (ಸಂದೀಪ್ 22, ನೀಲೇಶ್ 17) ಫಲಿತಾಂಶ: ಕರ್ನಾಟಕಕ್ಕೆ 158 ರನ್ಗಳ ಗೆಲುವು; ಪಂದ್ಯಶ್ರೇಷ್ಠ: ಸುನಿಲ್</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>