<p><strong>ಲಂಡನ್:</strong> ಲಾರ್ಡ್ಸ್ ಮೈದಾನದಲ್ಲಿ ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದ ಮೂರನೇ ದಿನದಾಟದ ವೇಳೆ ಕನ್ನಡಿಗ ಕೆ.ಎಲ್ ರಾಹುಲ್ ಅವರ ಮೇಲೆ ಶಾಂಪೇನ್ ಬಾಟಲಿಯ ಮುಚ್ಚಳ (ಬಾಟಲ್ ಕಾರ್ಕ್ ) ಎಸೆಯಲಾಗಿದೆ.</p>.<p>ಭಾರತದ ಬ್ಯಾಟ್ಸ್ಮನ್ ಕೆ.ಎಲ್ ರಾಹುಲ್ ಅವರು ಮೊದಲ ಇನ್ನಿಂಗ್ಸ್ನಲ್ಲಿ ಶತಕ (129) ಗಳಿಸಿ ಇಂಗ್ಲೆಂಡ್ ತಂಡವನ್ನು ಕಾಡಿದ್ದರು.</p>.<p>ಪಂದ್ಯದ 69ನೇ ಓವರ್ನ ವೇಳೆ, ಮೊಹಮದ್ ಶಮಿ ಅವರು ಬೌಲಿಂಗ್ ಮಾಡುತ್ತಿದ್ದಾಗ, ಪ್ರೇಕ್ಷಕರ ಗ್ಯಾಲರಿಯಿಂದ ರಾಹುಲ್ ಮೇಲೆ ಶಾಂಪೇನ್ ಬಾಟಲಿ ಮುಚ್ಚಳ ಎಸೆಯಲಾಗಿದೆ. ಈ ವೇಳೆ ಅವರು ಬೌಂಡರಿ ಗೆರೆಯ ಬಳಿ ಕ್ಷೇತ್ರ ರಕ್ಷಣೆ ಮಾಡುತ್ತಿದ್ದರು.</p>.<p>ಘಟನೆಯಿಂದ ಬೇಸರಗೊಂಡಂತೆ ಕಂಡ ವಿರಾಟ್ ಕೊಹ್ಲಿ ಅವರು, ಮುಚ್ಚಳವನ್ನು ಎಸೆಯುವಂತೆ ಹೇಳಿದ್ದಾರೆ. ಘಟನೆ ಹಿನ್ನೆಲೆಯಲ್ಲಿ ಭಾರತದ ಆಟಗಾರರು ಅಂಪೈರ್ಗಳಾದ ಮೈಕೆಲ್ ಗಾಗ್ ಮತ್ತು ರಿಚರ್ಡ್ ಇಲ್ಲಿಂಗ್ವರ್ತ್ ಅವರೊಂದಿಗೆ ಮಾತುಕತೆ ನಡೆಸಿದರು. ಹೀಗಾಗಿ ಪಂದ್ಯ ಕೆಲಕಾಲ ಸ್ತಗಿತಗೊಂಡಿತ್ತು. ಈ ಬಗ್ಗೆ ಭಾರತದ ಆಟಗಾರರು ಅಂಪೈರ್ಗೆ ದೂರು ನೀಡಿದ್ದಾರೆಯೇ ಅಥವಾ ವಿಷಯವನ್ನು ಅವರ ಗಮನಕ್ಕೆ ಮಾತ್ರ ತಂದಿದ್ದಾರೆಯೇ ಎಂಬುದು ಗೊತ್ತಾಗಿಲ್ಲ.</p>.<p>ಈ ವರ್ಷದ ಆರಂಭದಲ್ಲಿ, ಭಾರತ ತಂಡವು ಆಸ್ಟ್ರೇಲಿಯಾ ಪ್ರವಾಸದಲ್ಲಿ ಜನಾಂಗೀಯ ನಿಂದನೆಗಳನ್ನು ಎದುರಿಸಿತ್ತು. ಮೊಹಮ್ಮದ್ ಸಿರಾಜ್ ಅವರನ್ನು ನಿಂದಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಂಡನ್:</strong> ಲಾರ್ಡ್ಸ್ ಮೈದಾನದಲ್ಲಿ ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದ ಮೂರನೇ ದಿನದಾಟದ ವೇಳೆ ಕನ್ನಡಿಗ ಕೆ.ಎಲ್ ರಾಹುಲ್ ಅವರ ಮೇಲೆ ಶಾಂಪೇನ್ ಬಾಟಲಿಯ ಮುಚ್ಚಳ (ಬಾಟಲ್ ಕಾರ್ಕ್ ) ಎಸೆಯಲಾಗಿದೆ.</p>.<p>ಭಾರತದ ಬ್ಯಾಟ್ಸ್ಮನ್ ಕೆ.ಎಲ್ ರಾಹುಲ್ ಅವರು ಮೊದಲ ಇನ್ನಿಂಗ್ಸ್ನಲ್ಲಿ ಶತಕ (129) ಗಳಿಸಿ ಇಂಗ್ಲೆಂಡ್ ತಂಡವನ್ನು ಕಾಡಿದ್ದರು.</p>.<p>ಪಂದ್ಯದ 69ನೇ ಓವರ್ನ ವೇಳೆ, ಮೊಹಮದ್ ಶಮಿ ಅವರು ಬೌಲಿಂಗ್ ಮಾಡುತ್ತಿದ್ದಾಗ, ಪ್ರೇಕ್ಷಕರ ಗ್ಯಾಲರಿಯಿಂದ ರಾಹುಲ್ ಮೇಲೆ ಶಾಂಪೇನ್ ಬಾಟಲಿ ಮುಚ್ಚಳ ಎಸೆಯಲಾಗಿದೆ. ಈ ವೇಳೆ ಅವರು ಬೌಂಡರಿ ಗೆರೆಯ ಬಳಿ ಕ್ಷೇತ್ರ ರಕ್ಷಣೆ ಮಾಡುತ್ತಿದ್ದರು.</p>.<p>ಘಟನೆಯಿಂದ ಬೇಸರಗೊಂಡಂತೆ ಕಂಡ ವಿರಾಟ್ ಕೊಹ್ಲಿ ಅವರು, ಮುಚ್ಚಳವನ್ನು ಎಸೆಯುವಂತೆ ಹೇಳಿದ್ದಾರೆ. ಘಟನೆ ಹಿನ್ನೆಲೆಯಲ್ಲಿ ಭಾರತದ ಆಟಗಾರರು ಅಂಪೈರ್ಗಳಾದ ಮೈಕೆಲ್ ಗಾಗ್ ಮತ್ತು ರಿಚರ್ಡ್ ಇಲ್ಲಿಂಗ್ವರ್ತ್ ಅವರೊಂದಿಗೆ ಮಾತುಕತೆ ನಡೆಸಿದರು. ಹೀಗಾಗಿ ಪಂದ್ಯ ಕೆಲಕಾಲ ಸ್ತಗಿತಗೊಂಡಿತ್ತು. ಈ ಬಗ್ಗೆ ಭಾರತದ ಆಟಗಾರರು ಅಂಪೈರ್ಗೆ ದೂರು ನೀಡಿದ್ದಾರೆಯೇ ಅಥವಾ ವಿಷಯವನ್ನು ಅವರ ಗಮನಕ್ಕೆ ಮಾತ್ರ ತಂದಿದ್ದಾರೆಯೇ ಎಂಬುದು ಗೊತ್ತಾಗಿಲ್ಲ.</p>.<p>ಈ ವರ್ಷದ ಆರಂಭದಲ್ಲಿ, ಭಾರತ ತಂಡವು ಆಸ್ಟ್ರೇಲಿಯಾ ಪ್ರವಾಸದಲ್ಲಿ ಜನಾಂಗೀಯ ನಿಂದನೆಗಳನ್ನು ಎದುರಿಸಿತ್ತು. ಮೊಹಮ್ಮದ್ ಸಿರಾಜ್ ಅವರನ್ನು ನಿಂದಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>