ಘಟನೆಯಿಂದ ಬೇಸರಗೊಂಡಂತೆ ಕಂಡ ವಿರಾಟ್ ಕೊಹ್ಲಿ ಅವರು, ಮುಚ್ಚಳವನ್ನು ಎಸೆಯುವಂತೆ ಹೇಳಿದ್ದಾರೆ. ಘಟನೆ ಹಿನ್ನೆಲೆಯಲ್ಲಿ ಭಾರತದ ಆಟಗಾರರು ಅಂಪೈರ್ಗಳಾದ ಮೈಕೆಲ್ ಗಾಗ್ ಮತ್ತು ರಿಚರ್ಡ್ ಇಲ್ಲಿಂಗ್ವರ್ತ್ ಅವರೊಂದಿಗೆ ಮಾತುಕತೆ ನಡೆಸಿದರು. ಹೀಗಾಗಿ ಪಂದ್ಯ ಕೆಲಕಾಲ ಸ್ತಗಿತಗೊಂಡಿತ್ತು. ಈ ಬಗ್ಗೆ ಭಾರತದ ಆಟಗಾರರು ಅಂಪೈರ್ಗೆ ದೂರು ನೀಡಿದ್ದಾರೆಯೇ ಅಥವಾ ವಿಷಯವನ್ನು ಅವರ ಗಮನಕ್ಕೆ ಮಾತ್ರ ತಂದಿದ್ದಾರೆಯೇ ಎಂಬುದು ಗೊತ್ತಾಗಿಲ್ಲ.