ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ಮಂಗಳವಾರ ಅಧಿಕಾರಿಗಳಿಗೆ ಈ ಸೂಚನೆ ನೀಡಿದ್ದು, ಇಂತಹ ಆದೇಶ ನೀಡಿರುವುದಕ್ಕೆ ಆಘಾತ ವ್ಯಕ್ತಪಡಿಸಿದರು. ‘ಕುಲಪತಿಗಳಿಗೆ ಮಾಧ್ಯಮ ಹೇಳಿಕೆ ನೀಡುವ ಹಕ್ಕು ಇದ್ದೇ ಇದೆ. ವಿಶ್ವವಿದ್ಯಾಲಯಗಳ ಸ್ವಾಯತ್ತತೆಗೆ ಧಕ್ಕೆ ತರಲಾಗದು, ನಿರ್ಬಂಧ ಆದೇಶವನ್ನು ತಕ್ಷಣ ಹಿಂಪಡೆಯಲಾಗುತ್ತದೆ’ ಎಂದು ಸಚಿವರು ತಿಳಿಸಿದರು. ನಿರ್ಬಂಧ ಹೇರಿದ್ದರ ಬಗ್ಗೆ ಜೂನ್ 19ರಂದು ‘ಪ್ರಜಾವಾಣಿ’ ವರದಿ ಮಾಡಿತ್ತು.