<p><strong>ಕೊಲಂಬೊ:</strong> ಇಂಗ್ಲೆಂಡ್ ಪ್ರವಾಸದಲ್ಲಿ ಬಯೋಬಬಲ್ ನಿಯಮ ಉಲ್ಲಂಘಿಸಿದ ತಂಡದ ಬ್ಯಾಟ್ಸ್ಮನ್ಗಳಾದ ಧನುಷ್ಕ ಗುಣತಿಲಕ ಮತ್ತು ಕುಶಾಲ್ ಮೆಂಡಿಸ್ ಮೇಲೆ ಎರಡು ವರ್ಷಗಳ ನಿಷೇಧ ಹೇರಲು ಶ್ರೀಲಂಕಾ ಕ್ರಿಕೆಟ್ ಮಂಡಳಿಯ (ಎಸ್ಎಲ್ಸಿ) ಶಿಸ್ತು ಸಮಿತಿಯು ಶಿಫಾರಸು ಮಾಡಿದೆ.</p>.<p>ವಿಕೆಟ್ ಕೀಪರ್ ಬ್ಯಾಟ್ಸ್ಮನ್ ನಿರೋಶನ್ ಡಿಕ್ವೆಲ್ಲಾ ಮೇಲೆ 18 ತಿಂಗಳ ನಿಷೇಧಕ್ಕೂ ಸಮಿತಿ ಶಿಫಾರಸು ಮಾಡಲಾಗಿದೆ. ಅಲ್ಲದೆ ಮೂವರಿಗೂ ₹ 18 ಲಕ್ಷ ದಂಡವನ್ನೂ ವಿಧಿಸಲಾಗಿದೆ.</p>.<p>ಜೂನ್ ತಿಂಗಳ ಅಂತ್ಯದಲ್ಲಿ ಮೂರು ಏಕದಿನ ಪಂದ್ಯಗಳನ್ನಾಡಲು ಶ್ರೀಲಂಕಾ ತಂಡವು ಇಂಗ್ಲೆಂಡ್ಗೆ ತೆರಳಿತ್ತು. ಸರಣಿ ಆರಂಭಕ್ಕೂ ಮೊದಲು ಈ ಮೂವರು ಆಟಗಾರರು ಡುರ್ಹಾಮ್ನಲ್ಲಿ ಬಯೋಬಬಲ್ ನಿಯಮ ಉಲ್ಲಂಘಿಸಿದ್ದು ವರದಿಯಾಗಿತ್ತು. ಆ ತಕ್ಷಣಕ್ಕೆ ಮೂವರನ್ನೂ ಅಮಾನತು ಮಾಡಿ ಶ್ರೀಲಂಕಾಕ್ಕೆ ಕಳುಹಿಸಲಾಗಿತ್ತು.</p>.<p>ಪ್ರಕರಣದ ವಿಚಾರಣೆಗಾಗಿ ಐದು ಸದಸ್ಯರ ಶಿಸ್ತು ಸಮಿತಿಯನ್ನು ರಚಿಸ ಲಾಗಿತ್ತು. ಸಮಿತಿಯ ಶಿಫಾರಸುಗಳಿಗೆ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ಕಾರ್ಯ ಕಾರಿ ಸಮಿತಿ ಅನುಮೋದನೆ ನೀಡಿದರೆ ಮಾತ್ರ ಈ ಶಿಕ್ಷೆ ಜಾರಿಯಾಗಲಿದೆ ಎಂದು ಎಸ್ಎಲ್ಸಿ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಲಂಬೊ:</strong> ಇಂಗ್ಲೆಂಡ್ ಪ್ರವಾಸದಲ್ಲಿ ಬಯೋಬಬಲ್ ನಿಯಮ ಉಲ್ಲಂಘಿಸಿದ ತಂಡದ ಬ್ಯಾಟ್ಸ್ಮನ್ಗಳಾದ ಧನುಷ್ಕ ಗುಣತಿಲಕ ಮತ್ತು ಕುಶಾಲ್ ಮೆಂಡಿಸ್ ಮೇಲೆ ಎರಡು ವರ್ಷಗಳ ನಿಷೇಧ ಹೇರಲು ಶ್ರೀಲಂಕಾ ಕ್ರಿಕೆಟ್ ಮಂಡಳಿಯ (ಎಸ್ಎಲ್ಸಿ) ಶಿಸ್ತು ಸಮಿತಿಯು ಶಿಫಾರಸು ಮಾಡಿದೆ.</p>.<p>ವಿಕೆಟ್ ಕೀಪರ್ ಬ್ಯಾಟ್ಸ್ಮನ್ ನಿರೋಶನ್ ಡಿಕ್ವೆಲ್ಲಾ ಮೇಲೆ 18 ತಿಂಗಳ ನಿಷೇಧಕ್ಕೂ ಸಮಿತಿ ಶಿಫಾರಸು ಮಾಡಲಾಗಿದೆ. ಅಲ್ಲದೆ ಮೂವರಿಗೂ ₹ 18 ಲಕ್ಷ ದಂಡವನ್ನೂ ವಿಧಿಸಲಾಗಿದೆ.</p>.<p>ಜೂನ್ ತಿಂಗಳ ಅಂತ್ಯದಲ್ಲಿ ಮೂರು ಏಕದಿನ ಪಂದ್ಯಗಳನ್ನಾಡಲು ಶ್ರೀಲಂಕಾ ತಂಡವು ಇಂಗ್ಲೆಂಡ್ಗೆ ತೆರಳಿತ್ತು. ಸರಣಿ ಆರಂಭಕ್ಕೂ ಮೊದಲು ಈ ಮೂವರು ಆಟಗಾರರು ಡುರ್ಹಾಮ್ನಲ್ಲಿ ಬಯೋಬಬಲ್ ನಿಯಮ ಉಲ್ಲಂಘಿಸಿದ್ದು ವರದಿಯಾಗಿತ್ತು. ಆ ತಕ್ಷಣಕ್ಕೆ ಮೂವರನ್ನೂ ಅಮಾನತು ಮಾಡಿ ಶ್ರೀಲಂಕಾಕ್ಕೆ ಕಳುಹಿಸಲಾಗಿತ್ತು.</p>.<p>ಪ್ರಕರಣದ ವಿಚಾರಣೆಗಾಗಿ ಐದು ಸದಸ್ಯರ ಶಿಸ್ತು ಸಮಿತಿಯನ್ನು ರಚಿಸ ಲಾಗಿತ್ತು. ಸಮಿತಿಯ ಶಿಫಾರಸುಗಳಿಗೆ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ಕಾರ್ಯ ಕಾರಿ ಸಮಿತಿ ಅನುಮೋದನೆ ನೀಡಿದರೆ ಮಾತ್ರ ಈ ಶಿಕ್ಷೆ ಜಾರಿಯಾಗಲಿದೆ ಎಂದು ಎಸ್ಎಲ್ಸಿ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>