<p><strong>ಮುಂಬೈ:</strong> ವೇಗದ ಬೌಲರ್ ಜಸ್ಪ್ರೀತ್ ಬೂಮ್ರಾ ಅವರನ್ನು ಶ್ರೀಲಂಕಾ ಎದುರಿನ ಸರಣಿಯಲ್ಲಿ ಆಡಲಿರುವ ಭಾರತ ತಂಡಕ್ಕೆ ಸೇರ್ಪಡೆ ಮಾಡಲಾಗಿದೆ. </p>.<p>ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್ಸಿಎ)ಯಲ್ಲಿ ಅವರು ಫಿಟ್ನೆಸ್ ಪರೀಕ್ಷೆಯಲ್ಲಿ ಉತ್ತೀರ್ಣರಾದ ನಂತರ ಅವರಿಗೆ ತಂಡ ಸೇರುವ ಅವಕಾಶ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ. </p>.<p>ಹೋದ ವರ್ಷದ ಸೆಪ್ಟೆಂಬರ್ನಲ್ಲಿ ಆಸ್ಟ್ರೇಲಿಯಾದಲ್ಲಿ ನಡೆದಿದ್ದ ಟಿ20 ವಿಶ್ವಕಪ್ ಸಂದರ್ಭದಲ್ಲಿ ಅವರು ಬೆನ್ನುಹುರಿಯ ಗಾಯದಿಂದ ಹೊರಗುಳಿದಿದ್ದರು. ಅಲ್ಲಿಂದ ಅವರು ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದರು. </p>.<p>‘ಭಾರತ ಕ್ರಿಕೆಟ್ ತಂಡದ ಆಯ್ಕೆ ಸಮಿತಿಯು ಬೂಮ್ರಾ ಅವರನ್ನು ತಂಡಕ್ಕೆ ಆಯ್ಕೆ ಮಾಡಿದೆ. ಎನ್ಸಿಎನಲ್ಲಿ ಫಿಟ್ನೆಸ್ ಟೆಸ್ಟ್ ನೀಡಿರುವ ಬೂಮ್ರಾ ಅರ್ಹತೆ ಗಳಿಸಿದ್ದಾರೆ’ ಎಂದು ಬಿಸಿಸಿಐ ಪ್ರಕಟಣೆಯಲ್ಲಿ ತಿಳಿಸಲಾಗಿದೆ. </p>.<p>ಲಂಕಾ ಎದುರಿನ ಏಕದಿನ ಸರಣಿಯಲ್ಲಿ ಮೂರು ಪಂದ್ಯಗಳು ನಡೆಯಲಿವೆ. ಗುವಾಹಟಿ (ಜ.10), ಕೋಲ್ಕತ್ತ (ಜ.12) ಮತ್ತು ತಿರುವನಂತಪುರಂ (ಜ.15) ಆತಿಥ್ಯ ವಹಿಸಲಿವೆ. </p>.<p>ಇದೇ ವರ್ಷ ಭಾರತದಲ್ಲಿಯೇ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯು ನಡೆಯಲಿದೆ. ಅದರಿಂದಾಗಿ ಈ ಸರಣಿಯು ಮಹತ್ವ ಪಡೆದುಕೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ವೇಗದ ಬೌಲರ್ ಜಸ್ಪ್ರೀತ್ ಬೂಮ್ರಾ ಅವರನ್ನು ಶ್ರೀಲಂಕಾ ಎದುರಿನ ಸರಣಿಯಲ್ಲಿ ಆಡಲಿರುವ ಭಾರತ ತಂಡಕ್ಕೆ ಸೇರ್ಪಡೆ ಮಾಡಲಾಗಿದೆ. </p>.<p>ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್ಸಿಎ)ಯಲ್ಲಿ ಅವರು ಫಿಟ್ನೆಸ್ ಪರೀಕ್ಷೆಯಲ್ಲಿ ಉತ್ತೀರ್ಣರಾದ ನಂತರ ಅವರಿಗೆ ತಂಡ ಸೇರುವ ಅವಕಾಶ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ. </p>.<p>ಹೋದ ವರ್ಷದ ಸೆಪ್ಟೆಂಬರ್ನಲ್ಲಿ ಆಸ್ಟ್ರೇಲಿಯಾದಲ್ಲಿ ನಡೆದಿದ್ದ ಟಿ20 ವಿಶ್ವಕಪ್ ಸಂದರ್ಭದಲ್ಲಿ ಅವರು ಬೆನ್ನುಹುರಿಯ ಗಾಯದಿಂದ ಹೊರಗುಳಿದಿದ್ದರು. ಅಲ್ಲಿಂದ ಅವರು ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದರು. </p>.<p>‘ಭಾರತ ಕ್ರಿಕೆಟ್ ತಂಡದ ಆಯ್ಕೆ ಸಮಿತಿಯು ಬೂಮ್ರಾ ಅವರನ್ನು ತಂಡಕ್ಕೆ ಆಯ್ಕೆ ಮಾಡಿದೆ. ಎನ್ಸಿಎನಲ್ಲಿ ಫಿಟ್ನೆಸ್ ಟೆಸ್ಟ್ ನೀಡಿರುವ ಬೂಮ್ರಾ ಅರ್ಹತೆ ಗಳಿಸಿದ್ದಾರೆ’ ಎಂದು ಬಿಸಿಸಿಐ ಪ್ರಕಟಣೆಯಲ್ಲಿ ತಿಳಿಸಲಾಗಿದೆ. </p>.<p>ಲಂಕಾ ಎದುರಿನ ಏಕದಿನ ಸರಣಿಯಲ್ಲಿ ಮೂರು ಪಂದ್ಯಗಳು ನಡೆಯಲಿವೆ. ಗುವಾಹಟಿ (ಜ.10), ಕೋಲ್ಕತ್ತ (ಜ.12) ಮತ್ತು ತಿರುವನಂತಪುರಂ (ಜ.15) ಆತಿಥ್ಯ ವಹಿಸಲಿವೆ. </p>.<p>ಇದೇ ವರ್ಷ ಭಾರತದಲ್ಲಿಯೇ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯು ನಡೆಯಲಿದೆ. ಅದರಿಂದಾಗಿ ಈ ಸರಣಿಯು ಮಹತ್ವ ಪಡೆದುಕೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>