<p>ಬ್ರಿಸ್ಬೇನ್: ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಟೀಮ್ ಇಂಡಿಯಾಗೆ ಗಾಯದ ಸಮಸ್ಯೆ ಇನ್ನಿಲ್ಲದಂತೆ ಕಾಡುತ್ತಿದೆ. ಕಿಬ್ಬೊಟ್ಟೆ ಸ್ನಾಯು ಸೆಳೆತದಿಂದ ಬಳಲುತ್ತಿರುವ ಭಾರತದ ವೇಗದ ಬೌಲರ್ ಜಸ್ಪ್ರೀತ್ ಬೂಮ್ರಾ ಬ್ರಿಸ್ಬೇನ್ನಲ್ಲಿ ನಡೆಯಲಿರುವ 4ನೇ ಟೆಸ್ಟ್ ಪಂದ್ಯದಿಂದ ಹೊರಗುಳಿಯುತ್ತಿದ್ದಾರೆ.</p>.<p>ಭಾರತದ ಬೌಲಿಂಗ್ ಪಡೆಯ ಪ್ರಮುಖ ಅಸ್ತ್ರವಾಗಿರುವ ಬೂಮ್ರಾ ಅವರಿಗೆ ಸಿಡ್ನಿಯ ಡ್ರಾಗೊಂಡ ಟೆಸ್ಟ್ ಪಂದ್ಯದ ಸಂದರ್ಭ ತೀವ್ರ ನೋವು ಕಾಣಿಸಿಕೊಂಡಿತ್ತು.</p>.<p>ಈಗಾಗಲೇ, ಗಾಯದ ಸಮಸ್ಯೆಯಿಂದ ರವೀಂದ್ರ ಜಡೇಜಾ ಮತ್ತು ಹನುಮ ವಿಹಾರಿ ಸಹ 4ನೇ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ. ಈ ಮಧ್ಯೆಯೇ, ಬೂಮ್ರಾ ಸಹ ಹೊರಗುಳಿಯುತ್ತಿರುವುದುಭಾರತಕ್ಕೆ ನುಂಗಲಾರದ ತುತ್ತಾಗಿದೆ.</p>.<p>ಸ್ಕ್ಯಾನಿಂಗ್ ವೇಳೆ ಬೂಮ್ರಾಗೆ ಸ್ನಾಯು ಸೆಳೆತ ಸಮಸ್ಯೆ ಕಂಡುಬಂದಿದ್ದು, ಮುಂಬರುವ ಇಂಗ್ಲೆಂಡ್ ವಿರುದ್ಧದ 4 ಟೆಸ್ಟ್ ಪಂದ್ಯಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ಬೂಮ್ರಾ ಅವರ ಗಾಯ ಉಲ್ಬಣಕ್ಕೆ ಅವಕಾಶ ನೀಡದೆ ವಿಶ್ರಾಂತಿ ನೀಡಲು ತಂಡದ ಆಡಳಿತ ಮಂಡಳಿ ನಿರ್ಧರಿಸಿದೆ.</p>.<p>"ಸಿಡ್ನಿಯಲ್ಲಿ ಫೀಲ್ಡಿಂಗ್ ವೇಳೆ ಜಸ್ಪ್ರೀತ್ ಬೂಮ್ರಾ ಕಿಬ್ಬೊಟ್ಟೆಯ ಸ್ನಾಯು ಸೆಳೆತಕ್ಕೆ ಒಳಗಾಗಿದ್ದಾರೆ. ಬ್ರಿಸ್ಬೆನ್ ಪಂದ್ಯದಿಂದ ಹೊರಗುಳಿಯಲಿದ್ದು, ಇಂಗ್ಲೆಂಡ್ ವಿರುದ್ಧದ ಸರಣಿಗೆ ಲಭ್ಯರಾಗುವ ನಿರೀಕ್ಷೆ ಇದೆ," ಬಿಸಿಸಿಐ ತಿಳಿಸಿದೆ.</p>.<p>ಮತ್ತೊಂದು ಮಹತ್ವದ ಬೆಳವಣಿಗೆಯಲ್ಲಿ, ಹೆಚ್ಚು ಪ್ರಥಮ ದರ್ಜೆ ಕ್ರಿಕೆಟ್ ಅನುಭವವಿರುವ ಮತ್ತು ನಟರಾಜನ್ ಅವರಿಗಿಂತಲೂ ಉತ್ತಮ ಬ್ಯಾಟಿಂಗ್ ಕೌಶಲ್ಯವಿರುವ ಶಾರ್ದೂಲ್ ಠಾಕೂರ್ ಅವರನ್ನು ರವೀಂದ್ರ ಜಡೇಜಾ ಅವರ ಬದಲಿಗೆ ತಂಡಕ್ಕೆ ಸೇರಿಸಿಕೊಳ್ಳುವ ಸಾಧ್ಯತೆ ಇದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬ್ರಿಸ್ಬೇನ್: ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಟೀಮ್ ಇಂಡಿಯಾಗೆ ಗಾಯದ ಸಮಸ್ಯೆ ಇನ್ನಿಲ್ಲದಂತೆ ಕಾಡುತ್ತಿದೆ. ಕಿಬ್ಬೊಟ್ಟೆ ಸ್ನಾಯು ಸೆಳೆತದಿಂದ ಬಳಲುತ್ತಿರುವ ಭಾರತದ ವೇಗದ ಬೌಲರ್ ಜಸ್ಪ್ರೀತ್ ಬೂಮ್ರಾ ಬ್ರಿಸ್ಬೇನ್ನಲ್ಲಿ ನಡೆಯಲಿರುವ 4ನೇ ಟೆಸ್ಟ್ ಪಂದ್ಯದಿಂದ ಹೊರಗುಳಿಯುತ್ತಿದ್ದಾರೆ.</p>.<p>ಭಾರತದ ಬೌಲಿಂಗ್ ಪಡೆಯ ಪ್ರಮುಖ ಅಸ್ತ್ರವಾಗಿರುವ ಬೂಮ್ರಾ ಅವರಿಗೆ ಸಿಡ್ನಿಯ ಡ್ರಾಗೊಂಡ ಟೆಸ್ಟ್ ಪಂದ್ಯದ ಸಂದರ್ಭ ತೀವ್ರ ನೋವು ಕಾಣಿಸಿಕೊಂಡಿತ್ತು.</p>.<p>ಈಗಾಗಲೇ, ಗಾಯದ ಸಮಸ್ಯೆಯಿಂದ ರವೀಂದ್ರ ಜಡೇಜಾ ಮತ್ತು ಹನುಮ ವಿಹಾರಿ ಸಹ 4ನೇ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ. ಈ ಮಧ್ಯೆಯೇ, ಬೂಮ್ರಾ ಸಹ ಹೊರಗುಳಿಯುತ್ತಿರುವುದುಭಾರತಕ್ಕೆ ನುಂಗಲಾರದ ತುತ್ತಾಗಿದೆ.</p>.<p>ಸ್ಕ್ಯಾನಿಂಗ್ ವೇಳೆ ಬೂಮ್ರಾಗೆ ಸ್ನಾಯು ಸೆಳೆತ ಸಮಸ್ಯೆ ಕಂಡುಬಂದಿದ್ದು, ಮುಂಬರುವ ಇಂಗ್ಲೆಂಡ್ ವಿರುದ್ಧದ 4 ಟೆಸ್ಟ್ ಪಂದ್ಯಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ಬೂಮ್ರಾ ಅವರ ಗಾಯ ಉಲ್ಬಣಕ್ಕೆ ಅವಕಾಶ ನೀಡದೆ ವಿಶ್ರಾಂತಿ ನೀಡಲು ತಂಡದ ಆಡಳಿತ ಮಂಡಳಿ ನಿರ್ಧರಿಸಿದೆ.</p>.<p>"ಸಿಡ್ನಿಯಲ್ಲಿ ಫೀಲ್ಡಿಂಗ್ ವೇಳೆ ಜಸ್ಪ್ರೀತ್ ಬೂಮ್ರಾ ಕಿಬ್ಬೊಟ್ಟೆಯ ಸ್ನಾಯು ಸೆಳೆತಕ್ಕೆ ಒಳಗಾಗಿದ್ದಾರೆ. ಬ್ರಿಸ್ಬೆನ್ ಪಂದ್ಯದಿಂದ ಹೊರಗುಳಿಯಲಿದ್ದು, ಇಂಗ್ಲೆಂಡ್ ವಿರುದ್ಧದ ಸರಣಿಗೆ ಲಭ್ಯರಾಗುವ ನಿರೀಕ್ಷೆ ಇದೆ," ಬಿಸಿಸಿಐ ತಿಳಿಸಿದೆ.</p>.<p>ಮತ್ತೊಂದು ಮಹತ್ವದ ಬೆಳವಣಿಗೆಯಲ್ಲಿ, ಹೆಚ್ಚು ಪ್ರಥಮ ದರ್ಜೆ ಕ್ರಿಕೆಟ್ ಅನುಭವವಿರುವ ಮತ್ತು ನಟರಾಜನ್ ಅವರಿಗಿಂತಲೂ ಉತ್ತಮ ಬ್ಯಾಟಿಂಗ್ ಕೌಶಲ್ಯವಿರುವ ಶಾರ್ದೂಲ್ ಠಾಕೂರ್ ಅವರನ್ನು ರವೀಂದ್ರ ಜಡೇಜಾ ಅವರ ಬದಲಿಗೆ ತಂಡಕ್ಕೆ ಸೇರಿಸಿಕೊಳ್ಳುವ ಸಾಧ್ಯತೆ ಇದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>