<p><strong>ಕೋಲ್ಕತ್ತ:</strong> ಈಡನ್ ಗಾರ್ಡನ್ ಕ್ರೀಡಾಂಗಣದ ಸಿಬ್ಬಂದಿಯೊಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಬಂಗಾಳ ಕ್ರಿಕೆಟ್ ಸಂಸ್ಥೆಯ ಮುಖ್ಯಕಚೇರಿಯು ಭಾನುವಾರದಿಂದ ಏಳು ದಿನಗಳವರೆಗೆ ಮುಚ್ಚಲಿದೆ.</p>.<p>‘ಸಿವಿಲ್ ಇಂಜಿನಿಯರಿಂಗ್ ವಿಭಾಗದಲ್ಲಿ ತಾತ್ಕಾಲಿಕ ಉದ್ಯೋಗಿಯನ್ನು ಶನಿವಾರ ತಪಾಸಣೆಗೆ ಒಳಪಡಿಸಲಾಗಿತ್ತು. ಅವರಲ್ಲಿ ಸೋಂಕು ಪತ್ತೆಯಾಗಿದೆ’ ಎಂದು ಬಂಗಾಳ ಕ್ರಿಕೆಟ್ ಸಂಸ್ಥೆಯ (ಸಿಎಬಿ) ಅಧ್ಯಕ್ಷ ಅಭಿಷೇಕ್ ದಾಲ್ಮಿಯಾ ಹೇಳಿದ್ದಾರೆ.</p>.<p>‘ಉದ್ಯೋಗಿಯನ್ನು ಚಾರ್ನೊಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ವಾರ ಒಮ್ಮೆಯೂ ಅವರು ಸಿಎಬಿ ಕಚೇರಿಗೆ ಭೇಟಿ ನೀಡಿಲ್ಲ. ಆದರೂ ಪ್ರಮುಖ ವೈದ್ಯರು ಹಾಗೂ ವೈದ್ಯಕೀಯ ಸಮಿತಿಯ ಸಲಹೆಯ ಮೇರೆಗೆ ಮುಂದಿನ ಒಂದು ವಾರದವರೆಗೆ ಹೊರಗಿನವರು ಸಿಎಬಿ ಕಚೇರಿ ಪ್ರವೇಶಿಸುವುದನ್ನು ನಿಷೇಧಿಸಲಾಗಿದೆ. ಈ ಅವಧಿಯಲ್ಲಿ, ಸುರಕ್ಷತಾ ನಿಯಮಗಳನ್ನು ಗಮನದಲ್ಲಿಟ್ಟುಕೊಂಡು ಹೆಚ್ಚಿನ ನೈರ್ಮಲ್ಯೀಕರಣ ಕ್ರಮಗಳನ್ನು ಕೈಗೊಳ್ಳಲಾಗುವುದು’ ಎಂದು ದಾಲ್ಮಿಯಾ ನುಡಿದರು.</p>.<p>‘ಸಿಎಬಿ ಕಚೇರಿಯನ್ನು ಔಪಚಾರಿಕವಾಗಿ ಬಂದ್ ಮಾಡಲಾಗುವುದು. ಅನಿವಾರ್ಯ ಎನಿಸಿದ ಕೆಲವು ಕಾರ್ಯಗಳನ್ನು ಕೆಲವೇ ಸಿಬ್ಬಂದಿ ನಿರ್ವಹಿಸಲಿದ್ದಾರೆ’ ಎಂದು ದಾಲ್ಮಿಯಾ ಇದೇ ವೇಳೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ:</strong> ಈಡನ್ ಗಾರ್ಡನ್ ಕ್ರೀಡಾಂಗಣದ ಸಿಬ್ಬಂದಿಯೊಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಬಂಗಾಳ ಕ್ರಿಕೆಟ್ ಸಂಸ್ಥೆಯ ಮುಖ್ಯಕಚೇರಿಯು ಭಾನುವಾರದಿಂದ ಏಳು ದಿನಗಳವರೆಗೆ ಮುಚ್ಚಲಿದೆ.</p>.<p>‘ಸಿವಿಲ್ ಇಂಜಿನಿಯರಿಂಗ್ ವಿಭಾಗದಲ್ಲಿ ತಾತ್ಕಾಲಿಕ ಉದ್ಯೋಗಿಯನ್ನು ಶನಿವಾರ ತಪಾಸಣೆಗೆ ಒಳಪಡಿಸಲಾಗಿತ್ತು. ಅವರಲ್ಲಿ ಸೋಂಕು ಪತ್ತೆಯಾಗಿದೆ’ ಎಂದು ಬಂಗಾಳ ಕ್ರಿಕೆಟ್ ಸಂಸ್ಥೆಯ (ಸಿಎಬಿ) ಅಧ್ಯಕ್ಷ ಅಭಿಷೇಕ್ ದಾಲ್ಮಿಯಾ ಹೇಳಿದ್ದಾರೆ.</p>.<p>‘ಉದ್ಯೋಗಿಯನ್ನು ಚಾರ್ನೊಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ವಾರ ಒಮ್ಮೆಯೂ ಅವರು ಸಿಎಬಿ ಕಚೇರಿಗೆ ಭೇಟಿ ನೀಡಿಲ್ಲ. ಆದರೂ ಪ್ರಮುಖ ವೈದ್ಯರು ಹಾಗೂ ವೈದ್ಯಕೀಯ ಸಮಿತಿಯ ಸಲಹೆಯ ಮೇರೆಗೆ ಮುಂದಿನ ಒಂದು ವಾರದವರೆಗೆ ಹೊರಗಿನವರು ಸಿಎಬಿ ಕಚೇರಿ ಪ್ರವೇಶಿಸುವುದನ್ನು ನಿಷೇಧಿಸಲಾಗಿದೆ. ಈ ಅವಧಿಯಲ್ಲಿ, ಸುರಕ್ಷತಾ ನಿಯಮಗಳನ್ನು ಗಮನದಲ್ಲಿಟ್ಟುಕೊಂಡು ಹೆಚ್ಚಿನ ನೈರ್ಮಲ್ಯೀಕರಣ ಕ್ರಮಗಳನ್ನು ಕೈಗೊಳ್ಳಲಾಗುವುದು’ ಎಂದು ದಾಲ್ಮಿಯಾ ನುಡಿದರು.</p>.<p>‘ಸಿಎಬಿ ಕಚೇರಿಯನ್ನು ಔಪಚಾರಿಕವಾಗಿ ಬಂದ್ ಮಾಡಲಾಗುವುದು. ಅನಿವಾರ್ಯ ಎನಿಸಿದ ಕೆಲವು ಕಾರ್ಯಗಳನ್ನು ಕೆಲವೇ ಸಿಬ್ಬಂದಿ ನಿರ್ವಹಿಸಲಿದ್ದಾರೆ’ ಎಂದು ದಾಲ್ಮಿಯಾ ಇದೇ ವೇಳೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>