ಮೇ.12ರಂದು ರಾಜ್ಯ ವಿಧಾನಸಭೆಗೆ ಮತದಾನ ಪ್ರಕಟಗೊಂಡ ನಂತರ ಚುನಾವಣಾ ನೀತಿ ಸಂಹಿತೆಯು ಜಾರಿಯಾಗಿದ್ದು, ಇದೇ ವೇಳೆ ಕೋಲಾರ–ಚಿಕ್ಕಬಳ್ಳಾಪುರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ (ಕೋಚಿಮುಲ್) ನಂದಿ ಕ್ರಾಸ್ ಬಳಿ ₹160 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಮೆಗಾ ಡೇರಿ ಉದ್ಘಾಟನೆಗೆ ಬಂದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿಯಷ್ಟೇ ನೀಡಿ ಮರಳಿದರು.