<p><strong>ದುಬೈ:</strong> ಐಸಿಸಿ ಚಾಂಪಿಯನ್ಸ್ ಟ್ರೋಫಿ ಏಕದಿನ ಕ್ರಿಕೆಟ್ ಟೂರ್ನಿಯ 'ಎ' ಗುಂಪಿನಲ್ಲಿ ಇಂದು (ಗುರುವಾರ) ದುಬೈಯಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಭಾರತ ತಂಡವು ಬಾಂಗ್ಲಾದೇಶದ ಸವಾಲನ್ನು ಎದುರಿಸುತ್ತಿದೆ.</p><p>ಟಾಸ್ ಗೆದ್ದ ಬಾಂಗ್ಲಾದೇಶ ಬ್ಯಾಟಿಂಗ್ ಆಯ್ದುಕೊಂಡಿತು. ಆದರೆ ತಂಡದ ಆರಂಭ ಉತ್ತಮವಾಗಿರಲಿಲ್ಲ. 8.3 ಓವರ್ಗಳಲ್ಲಿ 35 ರನ್ ಗಳಿಸುವಷ್ಟರಲ್ಲಿ ಪ್ರಮುಖ ಐದು ವಿಕೆಟ್ಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. </p><p>ಈ ನಡುವೆ ನಾಯಕ ರೋಹಿತ್ ಶರ್ಮಾ ಅವರು ಸುಲಭ ಕ್ಯಾಚ್ ಕೈಚೆಲ್ಲಿದ ಹಿನ್ನೆಲೆಯಲ್ಲಿ ಭಾರತೀಯ ಸ್ಪಿನ್ನರ್ ಅಕ್ಷರ್ ಪಟೇಲ್ ಅವರಿಗೆ 'ಹ್ಯಾಟ್ರಿಕ್' ವಿಕೆಟ್ ಗಳಿಸುವ ಅಪರೂಪದ ಅವಕಾಶ ನಷ್ಟವಾಯಿತು. </p><p>ಇನಿಂಗ್ಸ್ನ ಎಂಟನೇ ಓವರ್ನಲ್ಲಿ ತಮ್ಮ ಮೊದಲ ಓವರ್ ಎಸೆಯಲು ಅಕ್ಷರ್ ದಾಳಿಗಿಳಿದರು. ಮೊದಲ ಎಸೆತದಲ್ಲಿ ರನ್ ಬಿಟ್ಟುಕೊಡದ ಅಕ್ಷರ್ ಎರಡನೇ ಎಸೆತದಲ್ಲಿ ತನ್ಜೀದ್ ಹಸನ್ (25) ಅವರನ್ನು ಪೆವಿಲಿಯನ್ಗೆ ಅಟ್ಟಿದರು. </p><p>ತನ್ಜೀದ್ ಬ್ಯಾಟ್ಗೆ ಸವರಿದ ಚೆಂಡು ನೇರವಾಗಿ ವಿಕೆಟ್ ಕೀಪರ್ ಕೆ.ಎಲ್. ರಾಹುಲ್ ಅವರ ಕೈಸೇರಿತು. ಇದರ ಆ್ಯಕ್ಷನ್ ರಿಪ್ಲೇ ಎಂಬಂತೆ ನಂತರದ ಎಸೆತದಲ್ಲಿ ಬಾಂಗ್ಲಾದೇಶದ ಅನುಭವಿ ಬ್ಯಾಟರ್ ಮುಷ್ಫಿಕುರ್ ರಹೀಮ್ ಅವರಿಗೂ ಪೆವಿಲಿಯನ್ ಹಾದಿ ತೋರಿಸಿದರು. ಮುಷ್ಫಿಕುರ್ ಖಾತೆ ತೆರೆಯುವಲ್ಲಿ ವಿಫಲರಾದರು. ಈ ಕ್ಯಾಚ್ ಕೂಡ ರಾಹುಲ್ ಪಾಲಾಯಿತು. </p><p>ಇದರೊಂದಿಗೆ ಹ್ಯಾಟ್ರಿಕ್ ವಿಕೆಟ್ ಗಳಿಸುವ ಅವಕಾಶ ಅಕ್ಷರ್ಗೆ ಒದಗಿ ಬಂದಿತ್ತು. ಆದರೆ ನಾಲ್ಕನೇ ಎಸೆತದಲ್ಲಿ ಜಾಕರ್ ಅಲಿ ಬ್ಯಾಟ್ಗೆ ಸವರಿದ ಚೆಂಡು ಸ್ಲಿಪ್ನಲ್ಲಿ ಫೀಲ್ಡಿಂಗ್ ಮಾಡುತ್ತಿದ್ದ ರೋಹಿತ್ ಶರ್ಮಾ ಕ್ಯಾಚ್ ಆಗಿ ಪರಿವರ್ತಿಸುವಲ್ಲಿ ವಿಫಲರಾದರು. </p><p>ಸುಲಭ ಕ್ಯಾಚ್ ಕೈಚೆಲ್ಲಿದ್ದರಿಂದ ಜಾಕರ್ ಅಲಿಗೆ ಜೀವದಾನ ದೊರಕಿತು. ಮತ್ತೊಂದೆಡೆ ರೋಹಿತ್ ತಮ್ಮ ಆಕ್ರೋಶವನ್ನು ಹೊರಹಾಕಿದರು. </p>.ಭಾರತ ವಿರುದ್ಧದ ಪಂದ್ಯಕ್ಕೂ ಮುನ್ನ ಪಾಕ್ಗೆ ಹಿನ್ನಡೆ; ಸ್ಟಾರ್ ಆಟಗಾರ ಗಾಯಾಳು.Champions Trophy | IND vs BAN: ಶಮಿ ಬಿರುಗಾಳಿ; ಗಿಲ್ ತಂಗಾಳಿ: ಭಾರತ ಶುಭಾರಂಭ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದುಬೈ:</strong> ಐಸಿಸಿ ಚಾಂಪಿಯನ್ಸ್ ಟ್ರೋಫಿ ಏಕದಿನ ಕ್ರಿಕೆಟ್ ಟೂರ್ನಿಯ 'ಎ' ಗುಂಪಿನಲ್ಲಿ ಇಂದು (ಗುರುವಾರ) ದುಬೈಯಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಭಾರತ ತಂಡವು ಬಾಂಗ್ಲಾದೇಶದ ಸವಾಲನ್ನು ಎದುರಿಸುತ್ತಿದೆ.</p><p>ಟಾಸ್ ಗೆದ್ದ ಬಾಂಗ್ಲಾದೇಶ ಬ್ಯಾಟಿಂಗ್ ಆಯ್ದುಕೊಂಡಿತು. ಆದರೆ ತಂಡದ ಆರಂಭ ಉತ್ತಮವಾಗಿರಲಿಲ್ಲ. 8.3 ಓವರ್ಗಳಲ್ಲಿ 35 ರನ್ ಗಳಿಸುವಷ್ಟರಲ್ಲಿ ಪ್ರಮುಖ ಐದು ವಿಕೆಟ್ಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. </p><p>ಈ ನಡುವೆ ನಾಯಕ ರೋಹಿತ್ ಶರ್ಮಾ ಅವರು ಸುಲಭ ಕ್ಯಾಚ್ ಕೈಚೆಲ್ಲಿದ ಹಿನ್ನೆಲೆಯಲ್ಲಿ ಭಾರತೀಯ ಸ್ಪಿನ್ನರ್ ಅಕ್ಷರ್ ಪಟೇಲ್ ಅವರಿಗೆ 'ಹ್ಯಾಟ್ರಿಕ್' ವಿಕೆಟ್ ಗಳಿಸುವ ಅಪರೂಪದ ಅವಕಾಶ ನಷ್ಟವಾಯಿತು. </p><p>ಇನಿಂಗ್ಸ್ನ ಎಂಟನೇ ಓವರ್ನಲ್ಲಿ ತಮ್ಮ ಮೊದಲ ಓವರ್ ಎಸೆಯಲು ಅಕ್ಷರ್ ದಾಳಿಗಿಳಿದರು. ಮೊದಲ ಎಸೆತದಲ್ಲಿ ರನ್ ಬಿಟ್ಟುಕೊಡದ ಅಕ್ಷರ್ ಎರಡನೇ ಎಸೆತದಲ್ಲಿ ತನ್ಜೀದ್ ಹಸನ್ (25) ಅವರನ್ನು ಪೆವಿಲಿಯನ್ಗೆ ಅಟ್ಟಿದರು. </p><p>ತನ್ಜೀದ್ ಬ್ಯಾಟ್ಗೆ ಸವರಿದ ಚೆಂಡು ನೇರವಾಗಿ ವಿಕೆಟ್ ಕೀಪರ್ ಕೆ.ಎಲ್. ರಾಹುಲ್ ಅವರ ಕೈಸೇರಿತು. ಇದರ ಆ್ಯಕ್ಷನ್ ರಿಪ್ಲೇ ಎಂಬಂತೆ ನಂತರದ ಎಸೆತದಲ್ಲಿ ಬಾಂಗ್ಲಾದೇಶದ ಅನುಭವಿ ಬ್ಯಾಟರ್ ಮುಷ್ಫಿಕುರ್ ರಹೀಮ್ ಅವರಿಗೂ ಪೆವಿಲಿಯನ್ ಹಾದಿ ತೋರಿಸಿದರು. ಮುಷ್ಫಿಕುರ್ ಖಾತೆ ತೆರೆಯುವಲ್ಲಿ ವಿಫಲರಾದರು. ಈ ಕ್ಯಾಚ್ ಕೂಡ ರಾಹುಲ್ ಪಾಲಾಯಿತು. </p><p>ಇದರೊಂದಿಗೆ ಹ್ಯಾಟ್ರಿಕ್ ವಿಕೆಟ್ ಗಳಿಸುವ ಅವಕಾಶ ಅಕ್ಷರ್ಗೆ ಒದಗಿ ಬಂದಿತ್ತು. ಆದರೆ ನಾಲ್ಕನೇ ಎಸೆತದಲ್ಲಿ ಜಾಕರ್ ಅಲಿ ಬ್ಯಾಟ್ಗೆ ಸವರಿದ ಚೆಂಡು ಸ್ಲಿಪ್ನಲ್ಲಿ ಫೀಲ್ಡಿಂಗ್ ಮಾಡುತ್ತಿದ್ದ ರೋಹಿತ್ ಶರ್ಮಾ ಕ್ಯಾಚ್ ಆಗಿ ಪರಿವರ್ತಿಸುವಲ್ಲಿ ವಿಫಲರಾದರು. </p><p>ಸುಲಭ ಕ್ಯಾಚ್ ಕೈಚೆಲ್ಲಿದ್ದರಿಂದ ಜಾಕರ್ ಅಲಿಗೆ ಜೀವದಾನ ದೊರಕಿತು. ಮತ್ತೊಂದೆಡೆ ರೋಹಿತ್ ತಮ್ಮ ಆಕ್ರೋಶವನ್ನು ಹೊರಹಾಕಿದರು. </p>.ಭಾರತ ವಿರುದ್ಧದ ಪಂದ್ಯಕ್ಕೂ ಮುನ್ನ ಪಾಕ್ಗೆ ಹಿನ್ನಡೆ; ಸ್ಟಾರ್ ಆಟಗಾರ ಗಾಯಾಳು.Champions Trophy | IND vs BAN: ಶಮಿ ಬಿರುಗಾಳಿ; ಗಿಲ್ ತಂಗಾಳಿ: ಭಾರತ ಶುಭಾರಂಭ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>