ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯಲ್ಲಿ ಅಡದಿರಲು ನಿರ್ಧರಿಸಿದ ಚಾಂಡಿಮಲ್

Last Updated 11 ಸೆಪ್ಟೆಂಬರ್ 2018, 5:34 IST
ಅಕ್ಷರ ಗಾತ್ರ

ಕೊಲಂಬೊ: ಶ್ರೀಲಂಕಾ ಟೆಸ್ಟ್ ಕ್ರಿಕೆಟ್‌ ತಂಡದ ನಾಯಕ ದಿನೇಶ್ ಚಾಂಡಿಮಲ್ ಅವರು ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯಲ್ಲಿ ಅಡದೇ ಇರಲು ನಿರ್ಧರಿಸಿದ್ದಾರೆ.

ಅವರಿಗೆ 16 ಮಂದಿಯ ತಂಡದಲ್ಲಿ ಸ್ಥಾನ ನೀಡಲಾಗಿತ್ತು. ಆದರೆ ದೇಶೀಯ ಕ್ರಿಕೆಟ್‌ ಟೂರ್ನಿಯೊಂದರಲ್ಲಿ ಆಡುತ್ತಿದ್ದಾಗ ಗಾಯಗೊಂಡ ಕಾರಣ ಆಡಲು ಸಾಧ್ಯವಿಲ್ಲ ಎಂದಿದ್ದಾರೆ ಎಂದು ಶ್ರೀಲಂಕಾ ಕ್ರಿಕೆಟ್ ಸಮಿತಿ ತಿಳಿಸಿದೆ. ಅವರ ಬದಲಿಗೆ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ನಿರೋಷನ್ ಡಿಕ್ವೆಲ್ಲಾ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ ಎಂದು ಸಮಿತಿ ವಿವರಿಸಿದೆ.

ತಂಡ: ಏಂಜೆಲೊ ಮ್ಯಾಥ್ಯೂಸ್‌ (ನಾಯಕ), ಕುಶಾಲ್‌ ಪೆರೇರ, ಕುಶಾಲ್‌ ಮೆಂಡಿಸ್‌, ಉಪುಲ್‌ ತರಂಗ, ನಿರೋಷನ್ ಡಿಕ್ವೆಲ್ಲಾ, ಧನುಷ್ಕಾ ಗುಣತಿಲಕ, ತಿಸಾರ ಪೆರೇರ, ದಾಸುನ್‌ ಶಾನಕ, ಧನಂಜಯ ಡಿ ಸಿಲ್ವಾ, ಅಖಿಲ ಧನಂಜಯ, ದಿಲ್ರುವಾನ್ ಪೆರೇರ, ಅಮಿಲ ಅಪೋನ್ಸೊ, ಕಾಸುನ್‌ ರಜಿತ, ಸುರಂಗ ಲಕ್ಮಲ್‌, ದುಷ್ಮಂತ ಚಮೀರ, ಲಸಿತ್‌ ಮಾಲಿಂಗ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT