<p><strong>ಮುಂಬೈ: </strong>ಸದ್ಯ ನಡೆಯುತ್ತಿರುವ ಐಪಿಎಲ್ ಟೂರ್ನಿಯ ಮಧ್ಯದಲ್ಲಿಯೇ ಕೋಲ್ಕತ್ತ ನೈಟ್ ರೈಡರ್ಸ್ ತಂಡವು ನಾಯಕನನ್ನು ಬದಲಾವಣೆ ಮಾಡಿದ್ದು ಸರಿಯಲ್ಲ. ಇದು ಅಚ್ಚರಿ ಮೂಡಿಸಿದೆ ಎಂದು ಮಾಜಿ ಕ್ರಿಕೆಟಿಗ ಅಜಿತ್ ಅಗರಕರ್ ಹೇಳಿದ್ದಾರೆ.</p>.<p>ಕೆಕೆಆರ್ ನಾಯಕರಾಗಿದ್ದ ದಿನೇಶ್ ಕಾರ್ತಿಕ್ ಅವರುಹೋದ ವಾರ ನಾಯಕತ್ವದಿಂದ ಕೆಳಗಿಳಿದಿದ್ದರು.ಇಂಗ್ಲೆಂಡ್ ತಂಡದ ನಾಯಕ ಎಯಾನ್ ಮಾರ್ಗನ್ ಅವರಿಗೆ ನಾಯಕತ್ವದ ಹೊಣೆ ನೀಡಲಾಗಿತ್ತು. ನಾಯಕತ್ವ ಬದಲಾವಣೆಯಾದ ದಿನವೇ (ಅ.16) ಮುಂಬೈ ಇಂಡಿಯನ್ಸ್ ವಿರುದ್ಧ ಕೆಕೆಆರ್, 8 ವಿಕೆಟ್ ಅಂತರದ ಸೋತಿತ್ತು. ಆದರೆ, ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಆಡಿದ ನಂತರದ ಪಂದ್ಯದಲ್ಲಿ ಜಯದ ಹಾದಿಗೆ ಮರಳಿತ್ತು.</p>.<p>ಈ ಕುರಿತು ಸ್ಟಾರ್ ಸ್ಪೋರ್ಟ್ಸ್ ವಾಹಿ ನಿಯಲ್ಲಿ ಮಾತನಾಡಿರುವ ಅಜಿತ್,‘ ಏಳು ಪಂದ್ಯಗಳ ಆಟ ಮುಕ್ತಾಯವಾಗಿ, ನಿಮ್ಮ ತಂಡ ಪಾಯಿಂಟ್ಸ್ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದಾಗ ನಾಯಕತ್ವ ಬದಲಾವಣೆ ಮಾಡುವುದು ಸರಿಯಾದ ಕ್ರಮ ಎಂದು ನನಗನಿಸುವುದಿಲ್ಲ’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ: </strong>ಸದ್ಯ ನಡೆಯುತ್ತಿರುವ ಐಪಿಎಲ್ ಟೂರ್ನಿಯ ಮಧ್ಯದಲ್ಲಿಯೇ ಕೋಲ್ಕತ್ತ ನೈಟ್ ರೈಡರ್ಸ್ ತಂಡವು ನಾಯಕನನ್ನು ಬದಲಾವಣೆ ಮಾಡಿದ್ದು ಸರಿಯಲ್ಲ. ಇದು ಅಚ್ಚರಿ ಮೂಡಿಸಿದೆ ಎಂದು ಮಾಜಿ ಕ್ರಿಕೆಟಿಗ ಅಜಿತ್ ಅಗರಕರ್ ಹೇಳಿದ್ದಾರೆ.</p>.<p>ಕೆಕೆಆರ್ ನಾಯಕರಾಗಿದ್ದ ದಿನೇಶ್ ಕಾರ್ತಿಕ್ ಅವರುಹೋದ ವಾರ ನಾಯಕತ್ವದಿಂದ ಕೆಳಗಿಳಿದಿದ್ದರು.ಇಂಗ್ಲೆಂಡ್ ತಂಡದ ನಾಯಕ ಎಯಾನ್ ಮಾರ್ಗನ್ ಅವರಿಗೆ ನಾಯಕತ್ವದ ಹೊಣೆ ನೀಡಲಾಗಿತ್ತು. ನಾಯಕತ್ವ ಬದಲಾವಣೆಯಾದ ದಿನವೇ (ಅ.16) ಮುಂಬೈ ಇಂಡಿಯನ್ಸ್ ವಿರುದ್ಧ ಕೆಕೆಆರ್, 8 ವಿಕೆಟ್ ಅಂತರದ ಸೋತಿತ್ತು. ಆದರೆ, ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಆಡಿದ ನಂತರದ ಪಂದ್ಯದಲ್ಲಿ ಜಯದ ಹಾದಿಗೆ ಮರಳಿತ್ತು.</p>.<p>ಈ ಕುರಿತು ಸ್ಟಾರ್ ಸ್ಪೋರ್ಟ್ಸ್ ವಾಹಿ ನಿಯಲ್ಲಿ ಮಾತನಾಡಿರುವ ಅಜಿತ್,‘ ಏಳು ಪಂದ್ಯಗಳ ಆಟ ಮುಕ್ತಾಯವಾಗಿ, ನಿಮ್ಮ ತಂಡ ಪಾಯಿಂಟ್ಸ್ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದಾಗ ನಾಯಕತ್ವ ಬದಲಾವಣೆ ಮಾಡುವುದು ಸರಿಯಾದ ಕ್ರಮ ಎಂದು ನನಗನಿಸುವುದಿಲ್ಲ’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>