ಹಾಲಿ ಚಾಂಪಿಯನ್ ಸಿಎಸ್ಕೆ ತಂಡಕ್ಕೆ ಪ್ರಶಸ್ತಿ ಉಳಿಸಿಕೊಳ್ಳುವ ಛಲ. ಹೋದ ಹನ್ನೊಂದು ಟೂರ್ನಿಗಳಲ್ಲಿಯೂ ಪ್ರಶಸ್ತಿ ಗೆಲುವಿನ ಕನಸು ಭಗ್ನಗೊಂಡಿರುವ ನಿರಾಸೆಯನ್ನು ಬದಿಗಿಟ್ಟು, ‘ಈ ಸಲ ಕಪ್ ನಮ್ದೆ’ ಎಂಬ ಹುಮ್ಮಸ್ಸಿನೊಂದಿಗೆ ಕಣಕ್ಕಿಳಿಯಲು ಆರ್ಸಿಬಿ ಸಿದ್ಧವಾಗಿದೆ. ಭಾರತ ಕ್ರಿಕೆಟ್ ತಂಡದ ಹಾಲಿ ನಾಯಕ ವಿರಾಟ್ ಮತ್ತು ಮಾಜಿ ನಾಯಕ ಧೋನಿಯ ನಡುವಣದ ಪ್ರತಿಷ್ಠೆಯ ಪಂದ್ಯವಾಗಿಯೂ ಇದು ಗಮನ ಸೆಳೆದಿದೆ.