<p><strong>ಚೆನ್ನೈ</strong>: ಅಂತರರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿರುವ ರವಿಚಂದ್ರನ್ ಅಶ್ವಿನ್ ಅವರು ಕ್ರೀಡೆಗೆ ನೀಡಿರುವ ಕೊಡುಗೆಯನ್ನು ಗುರುತಿಸಿ, ಗೌರವಿಸುವ ಸಲುವಾಗಿ ಚೆನ್ನೈ ಮಹಾನಗರ ಪಾಲಿಕೆ (ಜಿಸಿಸಿ) ಮಹತ್ವದ ನಿರ್ಧಾರ ಕೈಗೊಂಡಿದೆ. ನಗರದ ರಸ್ತೆಯೊಂದಕ್ಕೆ ಅವರ ಹೆಸರಿಡುವ ನಿರ್ಣಯವನ್ನು ಶುಕ್ರವಾರ ಸರ್ವಾನುಮತದಿಂದ ಅಂಗೀಕರಿಸಿದೆ.</p><p>ತಮಿಳುನಾಡಿನ ಕ್ರಿಕೆಟ್ ದಿಗ್ಗಜರಾಗಿರುವ ಅಶ್ವಿನ್ ಅವರ ಕೊಡುಗೆಯನ್ನು ಗೌರವಿಸುವ ನಿಟ್ಟಿನಲ್ಲಿ, ಕೇರಂ ಬಾಲ್ ಈವೆಂಟ್ ಹಾಗೂ ಮಾರ್ಕೆಟಿಂಗ್ ಪ್ರೈವೇಟ್ ಲಿಮಿಟೆಡ್ನ ಕಾರ್ಯನಿರ್ವಹಣಾಧಿಕಾರಿ (ಸಿಒಒ) ಎಸ್.ಕಾರ್ತಿಕ್ ಅವರು ಈ ಮನವಿ ಸಲ್ಲಿಸಿದ್ದರು.</p><p>ಅದರಂತೆ ಪಶ್ಚಿಮ ಮಾಂಬಲಮ್ನ ರಾಮಕೃಷ್ಣಪುರಂ ರಸ್ತೆಗೆ ಕ್ರಿಕೆಟಿಗನ ಹೆಸರಿಡುವ ನಿರ್ಣಯವನ್ನು ಚೆನ್ನೈ ಮೇಯರ್ ಆರ್.ಪ್ರಿಯಾ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅಂಗೀಕರಿಸಲಾಗಿದೆ.</p><p>ಪದ್ಮಶ್ರೀ ಪುರಸ್ಕೃತ ಅಶ್ವಿನ್ ಅವರು ತಮಿಳುನಾಡು ಹಾಗೂ ಭಾರತ ತಂಡವನ್ನು ಪ್ರತಿನಿಧಿಸಿದ್ದು, ಕ್ರಿಕೆಟ್ ಜಗತ್ತಿನ ಶ್ರೇಷ್ಠ ಸ್ಪಿನ್ನರ್ ಮತ್ತು ಆಲ್ರೌಂಡರ್ಗಳಲ್ಲಿ ಒಬ್ಬರೆಂದು ಗುರುತಿಸಿಕೊಂಡಿದ್ದಾರೆ.</p><p>ಈ ನಿರ್ಣಯವನ್ನು ಅಂಗೀಕರಿಸುವ ಮುನ್ನ ಜಿಸಿಸಿ, ರಾಜ್ಯ ಸರ್ಕಾರದ ಅನುಮೋದನೆ ಕೋರಿತ್ತು.</p>.IPL 2025 | RCB vs KKR: ಇಂದು ಈ ಐವರು ಬ್ಯಾಟರ್ಗಳ ಮೇಲೆ ನಿರೀಕ್ಷೆ.IPL 2025 | RCB vs KKR: ಇಂದು ನಿರ್ಣಾಯಕ ಆಟವಾಡಬಲ್ಲ ಐವರು ಬೌಲರ್ಗಳು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ</strong>: ಅಂತರರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿರುವ ರವಿಚಂದ್ರನ್ ಅಶ್ವಿನ್ ಅವರು ಕ್ರೀಡೆಗೆ ನೀಡಿರುವ ಕೊಡುಗೆಯನ್ನು ಗುರುತಿಸಿ, ಗೌರವಿಸುವ ಸಲುವಾಗಿ ಚೆನ್ನೈ ಮಹಾನಗರ ಪಾಲಿಕೆ (ಜಿಸಿಸಿ) ಮಹತ್ವದ ನಿರ್ಧಾರ ಕೈಗೊಂಡಿದೆ. ನಗರದ ರಸ್ತೆಯೊಂದಕ್ಕೆ ಅವರ ಹೆಸರಿಡುವ ನಿರ್ಣಯವನ್ನು ಶುಕ್ರವಾರ ಸರ್ವಾನುಮತದಿಂದ ಅಂಗೀಕರಿಸಿದೆ.</p><p>ತಮಿಳುನಾಡಿನ ಕ್ರಿಕೆಟ್ ದಿಗ್ಗಜರಾಗಿರುವ ಅಶ್ವಿನ್ ಅವರ ಕೊಡುಗೆಯನ್ನು ಗೌರವಿಸುವ ನಿಟ್ಟಿನಲ್ಲಿ, ಕೇರಂ ಬಾಲ್ ಈವೆಂಟ್ ಹಾಗೂ ಮಾರ್ಕೆಟಿಂಗ್ ಪ್ರೈವೇಟ್ ಲಿಮಿಟೆಡ್ನ ಕಾರ್ಯನಿರ್ವಹಣಾಧಿಕಾರಿ (ಸಿಒಒ) ಎಸ್.ಕಾರ್ತಿಕ್ ಅವರು ಈ ಮನವಿ ಸಲ್ಲಿಸಿದ್ದರು.</p><p>ಅದರಂತೆ ಪಶ್ಚಿಮ ಮಾಂಬಲಮ್ನ ರಾಮಕೃಷ್ಣಪುರಂ ರಸ್ತೆಗೆ ಕ್ರಿಕೆಟಿಗನ ಹೆಸರಿಡುವ ನಿರ್ಣಯವನ್ನು ಚೆನ್ನೈ ಮೇಯರ್ ಆರ್.ಪ್ರಿಯಾ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅಂಗೀಕರಿಸಲಾಗಿದೆ.</p><p>ಪದ್ಮಶ್ರೀ ಪುರಸ್ಕೃತ ಅಶ್ವಿನ್ ಅವರು ತಮಿಳುನಾಡು ಹಾಗೂ ಭಾರತ ತಂಡವನ್ನು ಪ್ರತಿನಿಧಿಸಿದ್ದು, ಕ್ರಿಕೆಟ್ ಜಗತ್ತಿನ ಶ್ರೇಷ್ಠ ಸ್ಪಿನ್ನರ್ ಮತ್ತು ಆಲ್ರೌಂಡರ್ಗಳಲ್ಲಿ ಒಬ್ಬರೆಂದು ಗುರುತಿಸಿಕೊಂಡಿದ್ದಾರೆ.</p><p>ಈ ನಿರ್ಣಯವನ್ನು ಅಂಗೀಕರಿಸುವ ಮುನ್ನ ಜಿಸಿಸಿ, ರಾಜ್ಯ ಸರ್ಕಾರದ ಅನುಮೋದನೆ ಕೋರಿತ್ತು.</p>.IPL 2025 | RCB vs KKR: ಇಂದು ಈ ಐವರು ಬ್ಯಾಟರ್ಗಳ ಮೇಲೆ ನಿರೀಕ್ಷೆ.IPL 2025 | RCB vs KKR: ಇಂದು ನಿರ್ಣಾಯಕ ಆಟವಾಡಬಲ್ಲ ಐವರು ಬೌಲರ್ಗಳು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>