ನವದೆಹಲಿ: ನಿರ್ಗಮನವಾಗುತ್ತಿರುವ ಚೇತನ್ ಶರ್ಮಾ ನೇತೃತ್ವದ ಆಯ್ಕೆ ಸಮಿತಿಯು ಮುಂದಿನ ತಿಂಗಳು ಶ್ರೀಲಂಕಾ ಎದುರಿನ ಸರಣಿಯಲ್ಲಿ ಆಡುವ ಬಾರತ ತಂಡವನ್ನು ಆಯ್ಕೆ ಮಾಡಲಿದೆ.
ಸತತ ವೈಫಲ್ಯ ಅನುಭವಿಸುತ್ತಿರುವ ಕೆ.ಎಲ್. ರಾಹುಲ್ ಅವರನ್ನು ಕೈಬಿಡುವ ಸಾಧ್ಯತೆ ಇದೆ. ಹಾರ್ದಿಕ್ ಪಾಂಡ್ಯ ತಂಡವನ್ನು ಮುನ್ನಡೆಸುವುದು ಬಹುತೇಕ ಖಚಿತವಾಗಿದೆ.
ಜನವರಿ 3ರಿಂದ ಸೀಮತ ಓವರ್ಗಳ ಸರಣಿ ನಡೆಯಲಿದೆ. ಟಿ20 ಪಂದ್ಯಗಳಿಗೆ ಈ ಮಾದರಿಯ ಪರಿಣತ ಆಟಗಾರರನ್ನೇ ಆಯ್ಕೆ ಮಾಡುವ ಸಾಧ್ಯತೆ ಇದೆ. ಅನುಭವಿ ಆಟಗಾರ ವಿರಾಟ್ ಕೊಹ್ಲಿ ಅವರಿಗೆ ವಿಶ್ರಾಂತಿ ನೀಡುವ ನಿರೀಕ್ಷೆ ಇದೆ.