<p><strong>ನವದೆಹಲಿ:</strong> ಕೇಂದ್ರ ಸರ್ಕಾರ ಜಾರಿಗೆ ತಂದಿರುವ ರಾಷ್ಟ್ರೀಯ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಹೋರಾಟ ನಡೆಸುತ್ತಿದ್ದ ಜಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ವಿರುದ್ಧ ಪೊಲೀಸರು ಕ್ರಮ ಕೈಗೊಂಡಿರುವುದಕ್ಕೆ ಸಂಬಂಧಿಸಿದಂತೆ ಹಿರಿಯ ಕ್ರಿಕೆಟಿಗ ಇರ್ಫಾನ್ ಪಠಾಣ್ ಟ್ವಿಟರ್ನಲ್ಲಿ ಪ್ರತಿಕ್ರಿಯಿಸಿದ್ದಾರೆ.</p>.<p>‘ರಾಜಕೀಯ ಕೆಸರೆರಚಾಟ ಯಾವಾಗಲೂ ನಡೆಯುತ್ತಿರುತ್ತದೆ. ಆದರೆ, ಜಮಿಯಾ ಮಿಲಿಯಾ ವಿದ್ಯಾರ್ಥಿಗಳ ಬಗ್ಗೆನಾನು ಮತ್ತು ನಮ್ಮ ದೇಶ ಕಳವಳಗೊಂಡಿದ್ದೇವೆ’ ಎಂದು ಟ್ವೀಟ್ ಮಾಡಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://cms.prajavani.net/stories/national/priyanka-gandhi-leads-protest-at-india-gate-against-crackdown-on-students-690784.html">ಪೌರತ್ವ ಕಾಯ್ದೆ| ವಿದ್ಯಾರ್ಥಿಗಳ ಮೇಲಿನ ಹಲ್ಲೆ ಕುರಿತು ಮೋದಿ ಮಾತನಾಡಲಿ: ಪ್ರಿಯಾಂಕ</a></p>.<p>ಪೌರತ್ವ ತಿದ್ದುಪಡಿ ಕಾಯಿದೆ ವಿರೋಧಿಸಿ ದೆಹಲಿಯ ಜಮಿಯಾ ಮಿಲಿಯಾ ಇಸ್ಲಾಮಿಯಾ ವಿವಿಯ ವಿದ್ಯಾರ್ಥಿಗಳು ಕಳೆದ ಕೆಲದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಹೋರಾಟವು ಹಿಂಸಾಚಾರಕ್ಕೆ ತಿರುಗುತ್ತಿದ್ದಂತೆ ಪೊಲೀಸರು ಲಾಠಿ ಚಾರ್ಜ್ ಮಾಡಿ ಅಶ್ರುವಾಯು ಪ್ರಯೋಗಿಸಿದ್ದರು. ಮಾತ್ರವಲ್ಲದೆ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದ್ದರು.</p>.<p>ಬಳಿಕ ದೇಶದಾದ್ಯಂತ ಪ್ರತಿಭಟನೆಯ ಕೂಗು ಜೋರಾಗಿ ಕೇಳಿಬಂದಿತ್ತು. ಹೀಗಾಗಿ ವಶಕ್ಕೆ ಪಡೆಯಲಾಗಿದ್ದ ಎಲ್ಲ ವಿದ್ಯಾರ್ಥಿಗಳನ್ನೂ ಮುಂಜಾನೆ 3.30ರ ಸುಮಾರಿಗೆ ಬಿಡುಗಡೆಗೊಳಿಸಿದ್ದರು.</p>.<p><strong>ಇದನ್ನೂ ಓದಿ:</strong><a href="https://cms.prajavani.net/stories/national/dismiss-my-government-mamata-banerjees-dare-over-citizenship-act-690769.html">ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ಬಿಡಲಾರೆ, ನನ್ನ ಸರ್ಕಾರ ವಜಾ ಮಾಡಿ: ಮಮತಾ</a></p>.<p>ಪ್ರತಿಭಟನೆ ವೇಳೆ ನಡೆದ ಹಿಂಸಾಚಾರದಿಂದಾಗಿ ಸುಮಾರು 10ಕ್ಕೂ ಹೆಚ್ಚು ಪೊಲೀಸರು ಮತ್ತು 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದರು. ಸದ್ಯ ಮುನ್ನೆಚ್ಚರಿಕೆಯಾಗಿ ಅಲಿಗರ್ ಮುಸ್ಲಿಂ ವಿಶ್ವವಿದ್ಯಾಲಯವನ್ನೂ ಮುಂದಿನ ತಿಂಗಳವರೆಗೆ ಮುಚ್ಚಲಾಗಿದ್ದು, ಅಂತರ್ಜಾಲ ಕಡಿತಗೊಳಿಸಲಾಗಿದೆ.</p>.<p>ಹೈದರಾಬಾದ್ನ ಮೌಲಾನಾ ಆಜಾದ್ ವಿವಿ ಹಾಗೂ ಬನಾರಸ್ ಹಿಂದೂ ವಿವಿ ವಿದ್ಯಾರ್ಥಿಗಳೂ ಜಮಿಯಾ ವಿವಿ ವಿದ್ಯಾರ್ಥಿಗಳೊಂದಿಗೆ ಭಾನವಾರ ಪ್ರತಿಭಟನೆ ನಡೆಸಿದ್ದರು. ಕೋಲ್ಕತ್ತದ ಜಾದವಪುರ್ ವಿವಿ ಬಳಿ ಮಧ್ಯರಾತ್ರಿ ಮೆರವಣಿಗೆ ನಡೆಸಿದ್ದರು.ಮೌಲಾನಾ ಆಜಾದ್ ವಿವಿ ವಿದ್ಯಾರ್ಥಿಗಳು ತಮ್ಮ ಪರೀಕ್ಷೆಗಳನ್ನೂ ಮುಂದೂಡುವಂತೆ ಬೇಡಿಕೆ ಇಟ್ಟಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://cms.prajavani.net/stories/national/caa-does-not-affect-any-citizen-of-india-of-any-religion-no-indian-has-anything-to-worry-regarding-690759.html">ಪೌರತ್ವ ತಿದ್ದುಪಡಿ ಕಾಯ್ದೆ ವಿದೇಶಿಯರಿಗೆ ಅನ್ವಯ, ಭಾರತೀಯರು ಭಯಪಡಬೇಕಿಲ್ಲ: ಮೋದಿ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕೇಂದ್ರ ಸರ್ಕಾರ ಜಾರಿಗೆ ತಂದಿರುವ ರಾಷ್ಟ್ರೀಯ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಹೋರಾಟ ನಡೆಸುತ್ತಿದ್ದ ಜಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ವಿರುದ್ಧ ಪೊಲೀಸರು ಕ್ರಮ ಕೈಗೊಂಡಿರುವುದಕ್ಕೆ ಸಂಬಂಧಿಸಿದಂತೆ ಹಿರಿಯ ಕ್ರಿಕೆಟಿಗ ಇರ್ಫಾನ್ ಪಠಾಣ್ ಟ್ವಿಟರ್ನಲ್ಲಿ ಪ್ರತಿಕ್ರಿಯಿಸಿದ್ದಾರೆ.</p>.<p>‘ರಾಜಕೀಯ ಕೆಸರೆರಚಾಟ ಯಾವಾಗಲೂ ನಡೆಯುತ್ತಿರುತ್ತದೆ. ಆದರೆ, ಜಮಿಯಾ ಮಿಲಿಯಾ ವಿದ್ಯಾರ್ಥಿಗಳ ಬಗ್ಗೆನಾನು ಮತ್ತು ನಮ್ಮ ದೇಶ ಕಳವಳಗೊಂಡಿದ್ದೇವೆ’ ಎಂದು ಟ್ವೀಟ್ ಮಾಡಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://cms.prajavani.net/stories/national/priyanka-gandhi-leads-protest-at-india-gate-against-crackdown-on-students-690784.html">ಪೌರತ್ವ ಕಾಯ್ದೆ| ವಿದ್ಯಾರ್ಥಿಗಳ ಮೇಲಿನ ಹಲ್ಲೆ ಕುರಿತು ಮೋದಿ ಮಾತನಾಡಲಿ: ಪ್ರಿಯಾಂಕ</a></p>.<p>ಪೌರತ್ವ ತಿದ್ದುಪಡಿ ಕಾಯಿದೆ ವಿರೋಧಿಸಿ ದೆಹಲಿಯ ಜಮಿಯಾ ಮಿಲಿಯಾ ಇಸ್ಲಾಮಿಯಾ ವಿವಿಯ ವಿದ್ಯಾರ್ಥಿಗಳು ಕಳೆದ ಕೆಲದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಹೋರಾಟವು ಹಿಂಸಾಚಾರಕ್ಕೆ ತಿರುಗುತ್ತಿದ್ದಂತೆ ಪೊಲೀಸರು ಲಾಠಿ ಚಾರ್ಜ್ ಮಾಡಿ ಅಶ್ರುವಾಯು ಪ್ರಯೋಗಿಸಿದ್ದರು. ಮಾತ್ರವಲ್ಲದೆ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದ್ದರು.</p>.<p>ಬಳಿಕ ದೇಶದಾದ್ಯಂತ ಪ್ರತಿಭಟನೆಯ ಕೂಗು ಜೋರಾಗಿ ಕೇಳಿಬಂದಿತ್ತು. ಹೀಗಾಗಿ ವಶಕ್ಕೆ ಪಡೆಯಲಾಗಿದ್ದ ಎಲ್ಲ ವಿದ್ಯಾರ್ಥಿಗಳನ್ನೂ ಮುಂಜಾನೆ 3.30ರ ಸುಮಾರಿಗೆ ಬಿಡುಗಡೆಗೊಳಿಸಿದ್ದರು.</p>.<p><strong>ಇದನ್ನೂ ಓದಿ:</strong><a href="https://cms.prajavani.net/stories/national/dismiss-my-government-mamata-banerjees-dare-over-citizenship-act-690769.html">ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ಬಿಡಲಾರೆ, ನನ್ನ ಸರ್ಕಾರ ವಜಾ ಮಾಡಿ: ಮಮತಾ</a></p>.<p>ಪ್ರತಿಭಟನೆ ವೇಳೆ ನಡೆದ ಹಿಂಸಾಚಾರದಿಂದಾಗಿ ಸುಮಾರು 10ಕ್ಕೂ ಹೆಚ್ಚು ಪೊಲೀಸರು ಮತ್ತು 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದರು. ಸದ್ಯ ಮುನ್ನೆಚ್ಚರಿಕೆಯಾಗಿ ಅಲಿಗರ್ ಮುಸ್ಲಿಂ ವಿಶ್ವವಿದ್ಯಾಲಯವನ್ನೂ ಮುಂದಿನ ತಿಂಗಳವರೆಗೆ ಮುಚ್ಚಲಾಗಿದ್ದು, ಅಂತರ್ಜಾಲ ಕಡಿತಗೊಳಿಸಲಾಗಿದೆ.</p>.<p>ಹೈದರಾಬಾದ್ನ ಮೌಲಾನಾ ಆಜಾದ್ ವಿವಿ ಹಾಗೂ ಬನಾರಸ್ ಹಿಂದೂ ವಿವಿ ವಿದ್ಯಾರ್ಥಿಗಳೂ ಜಮಿಯಾ ವಿವಿ ವಿದ್ಯಾರ್ಥಿಗಳೊಂದಿಗೆ ಭಾನವಾರ ಪ್ರತಿಭಟನೆ ನಡೆಸಿದ್ದರು. ಕೋಲ್ಕತ್ತದ ಜಾದವಪುರ್ ವಿವಿ ಬಳಿ ಮಧ್ಯರಾತ್ರಿ ಮೆರವಣಿಗೆ ನಡೆಸಿದ್ದರು.ಮೌಲಾನಾ ಆಜಾದ್ ವಿವಿ ವಿದ್ಯಾರ್ಥಿಗಳು ತಮ್ಮ ಪರೀಕ್ಷೆಗಳನ್ನೂ ಮುಂದೂಡುವಂತೆ ಬೇಡಿಕೆ ಇಟ್ಟಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://cms.prajavani.net/stories/national/caa-does-not-affect-any-citizen-of-india-of-any-religion-no-indian-has-anything-to-worry-regarding-690759.html">ಪೌರತ್ವ ತಿದ್ದುಪಡಿ ಕಾಯ್ದೆ ವಿದೇಶಿಯರಿಗೆ ಅನ್ವಯ, ಭಾರತೀಯರು ಭಯಪಡಬೇಕಿಲ್ಲ: ಮೋದಿ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>