ನವದೆಹಲಿ: ಸುಪ್ರೀಂಕೋರ್ಟ್ನಿಂದ ನೇಮಕವಾಗಿರುವ ಆಡಳಿತಾಧಿಕಾರಿಗಳ ಸಮಿತಿಯು (ಸಿಒಎ) ಸೋಮವಾರ ಸಭೆ ನಡೆಸಲಿದೆ.
ಚೆನ್ನೈ ಮತ್ತು ಹೈದರಾಬಾದ್ನಲ್ಲಿ ಐಪಿಎಲ್ ‘ಪ್ಲೇ ಆಫ್’ ಮತ್ತು ಎಲಿಮಿನೇಟರ್ ಹಾಗೂ ಮುಂಬೈಯಲ್ಲಿ ಫೈನಲ್ ಪಂದ್ಯ ನಡೆಸುವ ಬಗ್ಗೆ ಸಭೆಯಲ್ಲಿ ಚರ್ಚೆಯಾಗುವ ಸಾಧ್ಯತೆ ಇದೆ.
ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ಹಂಗಾಮಿ ಅಧ್ಯಕ್ಷ ಸಿ.ಕೆ.ಖನ್ನಾ, ಹಂಗಾಮಿ ಕಾರ್ಯದರ್ಶಿ ಅಮಿತಾಭ್ ಚೌಧರಿ ಮತ್ತು ಖಜಾಂಚಿ ಅನಿರುದ್ಧ್ ಚೌಧರಿ ಪಾಲ್ಗೊಳ್ಳಲಿದ್ದಾರೆ.
ಬಿಸಿಸಿಐ ಮತ್ತು ಪೇಟಿಎಂ ನಡುವಣ ಒಪ್ಪಂದದ ಅವಧಿ ಶೀಘ್ರವೇ ಮುಗಿಯಲಿರುವ ಕಾರಣ, ದೇಶಿ ಮತ್ತು ಅಂತರರಾಷ್ಟ್ರೀಯ ಕ್ರಿಕೆಟ್ ಟೂರ್ನಿಗಳ ‘ಟೈಟಲ್’ ಪ್ರಾಯೋಜಕತ್ವಕ್ಕೆ ಹೊಸದಾಗಿ ಟೆಂಡರ್ ಆಹ್ವಾನಿಸುವುದು ಮತ್ತು ಮಹಿಳೆಯರಿಗಾಗಿ ‘ಮಿನಿ ಐಪಿಎಲ್’ ನಡೆಸುವ ಬಗ್ಗೆಯೂ ಸಭೆಯಲ್ಲಿ ಚರ್ಚಿಸುವ ನಿರೀಕ್ಷೆ ಇದೆ.