ಟಿ20 ವಿಶ್ವಕಪ್ ಟೂರ್ನಿಯ ನಂತರ ದ್ರಾವಿಡ್ ಅವರ ಕಾರ್ಯಾವಧಿ ಮುಗಿಯಲಿದೆ. ನೂತನ ಕೋಚ್ ಆಯ್ಕೆಗೆ ಬಿಸಿಸಿಐ ಅರ್ಜಿಯನ್ನೂ ಆಹ್ವಾನಿಸಿದೆ. ಒಂದೊಮ್ಮೆ ದ್ರಾವಿಡ್ ಅವರು ಕೋಚ್ ಆಗಿ ಮುಂದುವರಿಯಲು ಬಯಿಸಿದರೆ, ಮತ್ತೊಮ್ಮೆ ಅರ್ಜಿ ಹಾಕಿ ಪ್ರಕ್ರಿಯೆಯ ಮೂಲಕವೇ ಆಯ್ಕೆಯಾಗಬೇಕು ಎಂದು ಈಚೆಗೆ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಹೇಳಿದ್ದರು.