ದ್ರಾವಿಡ್ ಅವರನ್ನು ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ (ಎನ್ಸಿಎ) ಮುಖ್ಯಸ್ಥರನ್ನಾಗಿ ಬಿಸಿಸಿಐ ನೇಮಿಸಿತ್ತು. ಇಂಡಿಯಾ ಸಿಮೆಂಟ್ಸ್ ಉದ್ಯೋಗಿಯಾಗಿರುವ ದ್ರಾವಿಡ್, ಹಿತಾಸಕ್ತಿ ಸಂಘರ್ಷ ನಿಯಮ ಉಲ್ಲಂಘಿಸಿರುವುದಾಗಿ ಮಧ್ಯಪ್ರದೇಶ ಕ್ರಿಕೆಟ್ ಸಂಸ್ಥೆಯ ಸದಸ್ಯ ಸಂಜೀವ್ ಗುಪ್ತಾ ಅವರು ಜೈನ್ಗೆ ದೂರು ನೀಡಿದ್ದರು.